Featured

ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ: ಕಲ್ಲಡ್ಕ ಪ್ರಭಾಕರ ಭಟ್ – Vishwanews24

ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ  ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ: ಕಲ್ಲಡ್ಕ ಪ್ರಭಾಕರ ಭಟ್

ಶಿರಸಿ :ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ. ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರ ಕಾರ್ಯಕಾರಿಣಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದ್ದಾರೆ.

ಈ ಬಗ್ಗೆ ಯುಗಾದಿ ಉತ್ಸವ ಸಮಿತಿಯ ಬೆಳ್ಳಿ ಹಬ್ಬ ಹಾಗೂ ಶೋಭನ ನಾಮ ಸಂವತ್ಸರದ ಯುಗಾದಿ ಉತ್ಸವದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ಪರಂಪರೆ ಋಷಿ ಪರಂಪರೆ. ಹಿಂದೂ ಸಮಾಜದವರು ಪ್ರಕೃತಿ ದೇವರು ಅಂತ ತಿಳಿದವರು. ಪ್ರಕೃತಿಯ ಬದುಕಿನಲ್ಲಿ ಸಂತೋಷ ಉಂಟಾದಾಗ ಆ ಸಂದರ್ಭ ನಮ್ಮ ಹೊಸ ವರ್ಷ. ಯುಗಾದಿಗೆ ಹೂವು ಅರಳುತ್ತದೆ. ಎಲೆ ಚಿಗುರುತ್ತದೆ ಅದೇ ಹೊಸ ವರ್ಷ ಎಂದರು.

ಲವ್ ಜಿಹಾದ್ ನಂತ ಪ್ರಕರಣಗಳು ಹೆಚ್ಚುತ್ತಿವೆ. ಮೋಸ ವಂಚನೆ ನಡೆದಿದೆ. ಇವೆಲ್ಲವೂ ನಡೆಯುವುದು ಹಿಂದೂ ಸಮಾಜದವರ ಮೇಲೆ. ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ. ಸೌಲಭ್ಯಗಳ ಜೊತೆ ಜನ ಸಂಖ್ಯೆ ಏರುತ್ತಿದೆ. ಜನ ಸಂಖ್ಯೆ ಏರಿದಂತೆ ಈ ನೆಲದ ಭೂಮಿ ಕೂಡ ಅವರದ್ದಾಗುತ್ತಿದೆ ಎಂದು ಹೇಳಿದರು.

ಈ ಮೊದಲೇ ಹಿಂದುಗಳ ಜನ ಸಂಖ್ಯೆ ಕುಸಿದಿದೆ. ಇನ್ನೊಂದು ಕಡೆ ಹಿಂದೂ ಸಮಾಜದ ಮತಾಂತರ ಕಾರ್ಯ ಕೂಡ ನಡೆದಿದೆ ಎಂದ ಅವರು, ಗುಣಕ್ಕೆ ಮರುಳಾಗಬೇಕೇ ಹೊರತು ಹಣಕ್ಕಲ್ಲ. ಹಿಂದೂ ಸಮಾಜ ಜಗತ್ತಿಕೋಸ್ಕರ ಬದುಕಬೇಕಿದೆ. ಭಗವದ್ಗೀತೆ ಎಲ್ಲ ಮಕ್ಕಳಿಗೂ ಹೇಳಿಕೊಡಬೇಕು. ಈ ದೇಶದ ಮಣ್ಣಿನ ಸುವಾಸನೆ ಭಗವದ್ಗೀತೆ ವಿದೇಶದಲ್ಲಿ ಕೂಡ ಗೀತೆ ಕಲಿಸಬೇಕು. ಸ್ವರ್ಣವಲ್ಲೀ ಸಂಸ್ಥಾನ ಗೀತಾಭಿಯಾನ ನಡೆಸುವದು ಶ್ರೇಷ್ಠ ಕೆಲಸ, ಪ್ರತೀ ಮನೆಯಲ್ಲಿ ಮಕ್ಕಳಿಗೆ ಗೀತ ಓದಿಸಬೇಕು ಎಂದರು.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

12 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

12 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

12 hours ago