Featured

ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ: ಕಲ್ಲಡ್ಕ ಪ್ರಭಾಕರ ಭಟ್ – Vishwanews24

ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ  ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ: ಕಲ್ಲಡ್ಕ ಪ್ರಭಾಕರ ಭಟ್

ಶಿರಸಿ :ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ. ಮತಕ್ಕೋಸ್ಕರ ಹಿಂದೂ ಸಮಾಜವನ್ನೇ ನಾಶ ಮಾಡುವ ಕೆಲಸ ಆಗುತ್ತಿದೆ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕ್ಷೇತ್ರ ಕಾರ್ಯಕಾರಿಣಿ ಡಾ. ಕಲ್ಲಡ್ಕ ಪ್ರಭಾಕರ ಭಟ್ ಅವರು ಹೇಳಿದ್ದಾರೆ.

ಈ ಬಗ್ಗೆ ಯುಗಾದಿ ಉತ್ಸವ ಸಮಿತಿಯ ಬೆಳ್ಳಿ ಹಬ್ಬ ಹಾಗೂ ಶೋಭನ ನಾಮ ಸಂವತ್ಸರದ ಯುಗಾದಿ ಉತ್ಸವದ ಸಾರ್ವಜನಿಕ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,ನಮ್ಮ ಪರಂಪರೆ ಋಷಿ ಪರಂಪರೆ. ಹಿಂದೂ ಸಮಾಜದವರು ಪ್ರಕೃತಿ ದೇವರು ಅಂತ ತಿಳಿದವರು. ಪ್ರಕೃತಿಯ ಬದುಕಿನಲ್ಲಿ ಸಂತೋಷ ಉಂಟಾದಾಗ ಆ ಸಂದರ್ಭ ನಮ್ಮ ಹೊಸ ವರ್ಷ. ಯುಗಾದಿಗೆ ಹೂವು ಅರಳುತ್ತದೆ. ಎಲೆ ಚಿಗುರುತ್ತದೆ ಅದೇ ಹೊಸ ವರ್ಷ ಎಂದರು.

ಲವ್ ಜಿಹಾದ್ ನಂತ ಪ್ರಕರಣಗಳು ಹೆಚ್ಚುತ್ತಿವೆ. ಮೋಸ ವಂಚನೆ ನಡೆದಿದೆ. ಇವೆಲ್ಲವೂ ನಡೆಯುವುದು ಹಿಂದೂ ಸಮಾಜದವರ ಮೇಲೆ. ಸರ್ಕಾರ ನೀಡುವ ಸೌಲಭ್ಯದ ಲಾಭ ಕೇವಲ ಒಂದು ಸಮುದಾಯಕ್ಕೆ ತಲುಪುತ್ತಿದೆ. ಸೌಲಭ್ಯಗಳ ಜೊತೆ ಜನ ಸಂಖ್ಯೆ ಏರುತ್ತಿದೆ. ಜನ ಸಂಖ್ಯೆ ಏರಿದಂತೆ ಈ ನೆಲದ ಭೂಮಿ ಕೂಡ ಅವರದ್ದಾಗುತ್ತಿದೆ ಎಂದು ಹೇಳಿದರು.

ಈ ಮೊದಲೇ ಹಿಂದುಗಳ ಜನ ಸಂಖ್ಯೆ ಕುಸಿದಿದೆ. ಇನ್ನೊಂದು ಕಡೆ ಹಿಂದೂ ಸಮಾಜದ ಮತಾಂತರ ಕಾರ್ಯ ಕೂಡ ನಡೆದಿದೆ ಎಂದ ಅವರು, ಗುಣಕ್ಕೆ ಮರುಳಾಗಬೇಕೇ ಹೊರತು ಹಣಕ್ಕಲ್ಲ. ಹಿಂದೂ ಸಮಾಜ ಜಗತ್ತಿಕೋಸ್ಕರ ಬದುಕಬೇಕಿದೆ. ಭಗವದ್ಗೀತೆ ಎಲ್ಲ ಮಕ್ಕಳಿಗೂ ಹೇಳಿಕೊಡಬೇಕು. ಈ ದೇಶದ ಮಣ್ಣಿನ ಸುವಾಸನೆ ಭಗವದ್ಗೀತೆ ವಿದೇಶದಲ್ಲಿ ಕೂಡ ಗೀತೆ ಕಲಿಸಬೇಕು. ಸ್ವರ್ಣವಲ್ಲೀ ಸಂಸ್ಥಾನ ಗೀತಾಭಿಯಾನ ನಡೆಸುವದು ಶ್ರೇಷ್ಠ ಕೆಲಸ, ಪ್ರತೀ ಮನೆಯಲ್ಲಿ ಮಕ್ಕಳಿಗೆ ಗೀತ ಓದಿಸಬೇಕು ಎಂದರು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

10 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

10 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago