ಅಹಮದಾಬಾದ್ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮತದಾನ ಮಾಡುವ ಮುನ್ನ ತಾಯಿ ಹೀರಾಬೆನ್ ಅವರ ಆಶೀರ್ವಾದ ಪಡೆದರು.
ವ್ಯಾಪಕ ಭದ್ರತೆಯೊಂದಿಗೆ ರಾನಿಪ್ನ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ ಜಮಾವಣೆಗೊಂಡಿದ್ದರು. ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, ಸ್ವಮಲ್ಪ ದೂರ ತೆರದ ವಾಹನದಲ್ಲಿ ಆಗಮಿಸಿ ಹಕ್ಕು ಚಲಾವಣೆ ಮಾಡಿದರು.
ಕುಂಭ ಮೇಳದಲ್ಲಿ ಸ್ನಾನ ಮಾಡಿ ಪವಿತ್ರವಾಗುವ ಅನುಭವದಂತೆ , ಲೋಕತಂತ್ರದ ಪವಿತ್ರ ಕಾರ್ಯ ಮತದಾನ ಮಾಡಿದ ಬಳಿಕ ಆಗಿದೆ ಎಂದು ಪ್ರಧಾನಿ ಹೇಳಿದರು.
ಮೊದಲ ಬಾರಿ ಮತದಾನ ಮಾಡುವ ಯುವ ಮತದಾರರಿಗೆ ನಾನು ಸ್ವಾಗತಿಸುತ್ತೇನೆ ಮತ್ತು ಶುಭಕಾಮನೆಗಳನ್ನು ಸಲ್ಲಿಸುತ್ತೇನೆ. ಮೊದಲ ಬಾರಿ ಮತದಾನ ಮಾಡುವವರು ದೇಶದ ಭವಿಷ್ಯವನ್ನು ಉಜ್ವಲ ಮಾಡಲು ಮತದಾನ ಮಾಡಬೇಕಾಗಿದೆ ಎಂದರು.
ಉಗ್ರರ ಶಸ್ತ್ರ ಐಇಡಿ , ಪ್ರಜಾಪ್ರಭುತ್ವದ ಶಸ್ತ್ರ ವೋಟರ್ ಐಡಿ. ವೋಟರ್ ಐಡಿ ಎನ್ನುವುದು ಐಇಡಿಗಿಂತಲೂ ಶಕ್ತಿ ಶಾಲಿ ಎಂದು ಪ್ರಧಾನಿ ಹೇಳಿದರು.
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಲೋಕಸಭೆ ಕ್ಷೇತ್ರ, ಉತ್ತರ ಪ್ರದೇಶದ 10, ಬಿಹಾರ್ನ 5, ಅಸ್ಸಾಂನ 4, ಗುಜರಾತ್ನ 26, ತ್ರಿಪುರಾದ 1, ದಮನ್ ಮತ್ತು ಡಿಯುನ 1, ದಾದ್ರ ಮತ್ತು ನಗರ್ ಹವೇಲಿಯ 1, ಪಶ್ಚಿಮ ಬಂಗಾಳದ 5, ಮಹಾರಾಷ್ಟ್ರದ 14, ಒಡಿಶಾದ 6, ಗೋವಾದ 2, ಕರ್ನಾಟಕದ 14, ಕೇರಳದ 20 ಮತ್ತು ಛತ್ತೀಸ್ಗಢದ 11 ಕ್ಷೇತ್ರಗಳು ಸೇರಿ ಒಟ್ಟು 117 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಎಲ್ಲೆಡೆ ಶಾಂತಿಯುವಾಗಿ ಮತದಾನವಾಗುತ್ತಿದೆ
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್ಸಿಇಆರ್ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್ಸಿಇಆರ್ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…