Featured

ಮತದಾನ ಮಾಡುವ ಮುನ್ನ ತಾಯಿ ಆಶೀರ್ವಾದ ಪಡೆದ ಪ್ರಧಾನಿ ಮೋದಿ – Vishwanews24

ಅಹಮದಾಬಾದ್‌ : ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಬೆಳಗ್ಗೆ ತಮ್ಮ ಮತದಾನದ ಹಕ್ಕು ಚಲಾಯಿಸಿದ್ದಾರೆ. ಮತದಾನ ಮಾಡುವ ಮುನ್ನ ತಾಯಿ ಹೀರಾಬೆನ್‌ ಅವರ ಆಶೀರ್ವಾದ ಪಡೆದರು.

ವ್ಯಾಪಕ ಭದ್ರತೆಯೊಂದಿಗೆ ರಾನಿಪ್‌ನ ಮತಗಟ್ಟೆಗೆ ಆಗಮಿಸಿದ ಪ್ರಧಾನಿ ಮೋದಿ ಅವರನ್ನು ನೋಡಲು ಸಾವಿರಾರು ಜನರ ಜಮಾವಣೆಗೊಂಡಿದ್ದರು. ವ್ಯಾಪಕ ಭದ್ರತೆ ಕೈಗೊಳ್ಳಲಾಗಿದ್ದು, ಸ್ವಮಲ್ಪ ದೂರ ತೆರದ ವಾಹನದಲ್ಲಿ ಆಗಮಿಸಿ ಹಕ್ಕು ಚಲಾವಣೆ ಮಾಡಿದರು.

ಕುಂಭ ಮೇಳದಲ್ಲಿ ಸ್ನಾನ ಮಾಡಿ ಪವಿತ್ರವಾಗುವ ಅನುಭವದಂತೆ , ಲೋಕತಂತ್ರದ ಪವಿತ್ರ ಕಾರ್ಯ ಮತದಾನ ಮಾಡಿದ ಬಳಿಕ ಆಗಿದೆ ಎಂದು ಪ್ರಧಾನಿ ಹೇಳಿದರು.

ಮೊದಲ ಬಾರಿ ಮತದಾನ ಮಾಡುವ ಯುವ ಮತದಾರರಿಗೆ ನಾನು ಸ್ವಾಗತಿಸುತ್ತೇನೆ ಮತ್ತು ಶುಭಕಾಮನೆಗಳನ್ನು ಸಲ್ಲಿಸುತ್ತೇನೆ. ಮೊದಲ ಬಾರಿ ಮತದಾನ ಮಾಡುವವರು ದೇಶದ ಭವಿಷ್ಯವನ್ನು ಉಜ್ವಲ ಮಾಡಲು ಮತದಾನ ಮಾಡಬೇಕಾಗಿದೆ ಎಂದರು.

ಉಗ್ರರ ಶಸ್ತ್ರ ಐಇಡಿ , ಪ್ರಜಾಪ್ರಭುತ್ವದ ಶಸ್ತ್ರ ವೋಟರ್‌ ಐಡಿ. ವೋಟರ್‌ ಐಡಿ ಎನ್ನುವುದು ಐಇಡಿಗಿಂತಲೂ ಶಕ್ತಿ ಶಾಲಿ ಎಂದು ಪ್ರಧಾನಿ ಹೇಳಿದರು.

ಜಮ್ಮು ಮತ್ತು ಕಾಶ್ಮೀರದ ಅನಂತನಾಗ್​ ಲೋಕಸಭೆ ಕ್ಷೇತ್ರ, ಉತ್ತರ ಪ್ರದೇಶದ 10, ಬಿಹಾರ್​ನ 5, ಅಸ್ಸಾಂನ 4, ಗುಜರಾತ್​ನ 26, ತ್ರಿಪುರಾದ 1, ದಮನ್​ ಮತ್ತು ಡಿಯುನ 1, ದಾದ್ರ​ ಮತ್ತು ನಗರ್​ ಹವೇಲಿಯ 1, ಪಶ್ಚಿಮ ಬಂಗಾಳದ 5, ಮಹಾರಾಷ್ಟ್ರದ 14, ಒಡಿಶಾದ 6, ಗೋವಾದ 2, ಕರ್ನಾಟಕದ 14, ಕೇರಳದ 20 ಮತ್ತು ಛತ್ತೀಸ್​ಗಢದ 11 ಕ್ಷೇತ್ರಗಳು ಸೇರಿ ಒಟ್ಟು 117 ಕ್ಷೇತ್ರಗಳಲ್ಲಿ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಎಲ್ಲೆಡೆ ಶಾಂತಿಯುವಾಗಿ ಮತದಾನವಾಗುತ್ತಿದೆ

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

7 hours ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

7 hours ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

7 hours ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

7 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

8 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

8 hours ago