ಮತದಾರರು ಧರ್ಮದ ಹೆಸರಿನಲ್ಲಿ ಒಡೆದು ಆಳುವವರನ್ನು ದೂರವಿಟ್ಟಿದ್ದಾರೆ : ಮಲ್ಲಿಕಾರ್ಜುನ ಖರ್ಗೆ -Vishwanews24

ಬೆಳಗಾವಿ: “ದೆಹಲಿಯ ಮತದಾರರು ಧರ್ಮದ ಹೆಸರಿನಲ್ಲಿ ಒಡೆದು ಆಳುವವರನ್ನು ದೂರವಿಟ್ಟಿದ್ದಾರೆ. ಅವರ ತತ್ವ-ಸಿದ್ದಾಂತಗಳಿಗೆ ಮನ್ನಣೆ ದೊರಕಿಲ್ಲ” ಎಂದು ಕಾಂಗ್ರೆಸ್‌ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಗುರುವಾರ ಬೆಳಗಾವಿ ಸಮೀಪದ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಬಿಜೆಪಿ ನಾಯಕರು, ಕೇಂದ್ರದ ಹತ್ತಾರು ಸಚಿವರು ನಾವೇ ಗೆಲ್ಲುತ್ತೇವೆ ಎಂದು ನಡೆಸಿದ್ದ ಪ್ರಚಾರ ಯಶಸ್ವಿಯಾಗಿಲ್ಲ. ಕಾಂಗ್ರೆಸ್‌‌ ಪಕ್ಷವೂ ಚುನಾವಣೆಯಲ್ಲಿ ಭಾಗವಹಿಸಿತ್ತು. ಆದರೆ ಯಶಸ್ಸು ಸಿಕ್ಕಿಲ್ಲ. ಸೋಲು-ಗೆಲುವು ಸಾಮಾನ್ಯ. ನಮ್ಮ ಪಕ್ಷದ ನ್ಯೂನ್ಯತೆ ಹಾಗೂ ಕೊರತೆಗಳನ್ನು ಚರ್ಚಿಸಿ ಸರಿಪಡಿಸುವ ಕೆಲಸ ಮಾಡಲಾಗುವುದು” ಎಂದು ತಿಳಿಸಿದರು.

“ಯುವಕರಿಗೆ 2 ಕೋಟಿ ಉದ್ಯೋಗ ನೀಡುತ್ತೇನೆ, ಪ್ರತಿಯೊಬ್ಬರ ಬ್ಯಾಂಕ್‌ ಖಾತೆಗೆ 15 ಲಕ್ಷ ಹಾಕುತ್ತೇನೆ, ಅಚ್ಛೇ ದಿನ್‌ ಬರುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಮತದಾರರನ್ನು ಭಾವನಾತ್ಮಕವಾಗಿ ಸೆಳೆದು, ಎರಡು ಬಾರಿ ಪ್ರಧಾನಿಯಾಗಲಿಲ್ಲವೇ. ಚುನಾವಣೆಯಲ್ಲಿ ಕೇವಲ ಅಭಿವೃದ್ಧಿ ವಿಷಯವೊಂದೇ ಮುಖ್ಯವಾಗಲ್ಲ. ಭಾವನಾತ್ಮಕ ವಿಷಯವೂ ಪರಿಣಾಮ ಬೀರುತ್ತದೆ” ಎಂದು ಹೇಳಿದರು.

“ಸಂವಿಧಾನ ಶಿಲ್ಪಿ ಡಾ.ಬಿ.ಆರ್‌. ಅಂಬೇಡ್ಕರ್‌ ಅವರು ಮಹಾತ್ಮ ಗಾಂಧಿ ಅವರ ಜೊತೆ ಚರ್ಚಿಸಿ, ಪೂನಾ ಒಪ್ಪಂದದ ಭಾಗವಾಗಿ ಮೀಸಲಾತಿಯನ್ನು ನೀಡಿದ್ದಾರೆ. ಸಂವಿಧಾನದ 16ನೇ ವಿಧಿಯಲ್ಲಿ ಮೀಸಲಾತಿ ಕಲ್ಪಿಸಿದ್ದಾರೆ. ಆದರೆ, ಉತ್ತರಾಖಂಡ ಪ್ರಕರಣದಲ್ಲಿ ಇದನ್ನು ತಪ್ಪಾಗಿ ವ್ಯಾಖ್ಯಾನಿಸಲಾಗಿದೆ ಎಂದು ತಿಳಿಸಿದರು.

 

Vishwa News 24

Recent Posts

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್ : ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ! – vishwanews24

₹26.18 ಕೋಟಿ ವೆಚ್ಚದಲ್ಲಿ ಹೈಟೆಕ್ ಸ್ಪರ್ಶ ಪಡೆದ ಬಂಟ್ವಾಳ ರೈಲ್ವೆ ಸ್ಟೇಷನ್: ಜು.17ಕ್ಕೆ ಪಿಎಂ ಮೋದಿಯಿಂದ ವರ್ಚುವಲ್‌ ಆಗಿ ಲೋಕಾರ್ಪಣೆ!…

13 hours ago

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ – vishwanews24

ರಾಜ್ಯದ ಮುಜರಾಯಿ ದೇವಸ್ಥಾನಗಳಲ್ಲಿ ಹುಂಡಿ ಹಣ ಎಣಿಕೆಗೆ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ ಬೆಂಗಳೂರು: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ ಹಣ ಕಳ್ಳತನ…

13 hours ago

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  – vishwanews24

ಆತ್ಮಹತ್ಯೆಗೆ ಶರಣಾದ ನವದಂಪತಿ ; ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು  ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು…

16 hours ago

ಬೆಂಗಳೂರು: ನವವಿವಾಹಿತೆ ನೇಣು ಬಿಗಿದುಕೊಂಡು ಆತ್ಮಹತ್ಯೆ – vishwanews24

ಬೆಂಗಳೂರು: ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾದ ನವವಿವಾಹಿತೆ ಬೆಂಗಳೂರು:ಸಿಲಿಕಾನ್ ಸಿಟಿಯಲ್ಲಿ ನವವಿವಾಹಿತೆಯೊಬ್ಬರು ಮನೆಯಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ…

16 hours ago

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ -vishwanews24

ಗಾನಕೋಗಿಲೆ ಎಸ್‌.ಜಾನಕಿ ವಿಧಿವಶ ಮೈಸೂರು : ತಮ್ಮ ಮಾಧುರ್ಯಭರಿತ ಧ್ವನಿಯಿಂದಲೇ ಚಿತ್ರರಂಗದಲ್ಲಿ ಅದೆಷ್ಟೋ ಜನರ ಮನಗೆದ್ದಿದ್ದ ಹಿನ್ನಲೆ ಗಾಯಕಿ ಎಸ್.ಜಾನಕಿ…

2 days ago

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿ – vishwanews24

ಬೃಹತ್ ಡ್ರಗ್ ಜಾಲ ಪತ್ತೆ ಮಾಡಿದ ಪೊಲೀಸರ ತಂಡಕ್ಕೆ 10 ಲಕ್ಷ ರೂ. ನಗದು ಬಹುಮಾನ : ಸಿಎಂ ಡಿ.ಕೆ.ಶಿವಕುಮಾರ್…

2 days ago