ಚಿಕ್ಕಮಗಳೂರು : ಕೊನೆಗಾಲದಲ್ಲಿ ಈ ದೇವೇಗೌಡರಿಗೆ ನಿಮ್ಮ ಒಂದು ಮತವನ್ನು ನೀಡಿ. ಆ ಮೂಲಕ ಜೆಡಿಎಸ್ನ್ನು ಅಧಿಕಾರಕ್ಕೆ ತನ್ನಿ ಎಂದು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮನವಿ ಮಾಡಿದರು.
ಒಕ್ಕಲಿಗರ ಭವನದಲ್ಲಿ ಏರ್ಪಡಿಸಿದ್ದ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಉದ್ಘಾಟಿಸಿ ಮಾತನಾಡಿದ ಅವರು, 2023ರ ಚುನಾವಣೆಯಲ್ಲಿ ಜೆಡಿಎಸ್ ಮರಳಿ ಅಧಿಕಾರಕ್ಕೇರುವುದು ನಮ್ಮ ಸಂಕಲ್ಪ. ಕಾರ್ಯಕರ್ತರಿಂದಲೇ ಪಕ್ಷ ಬಲವರ್ಧನೆ ಸಾಧ್ಯ. ಪಕ್ಷ ಕಟ್ಟಿ, ಅಧಿಕಾರ ಪಡೆಯುವ ನಿಟ್ಟಿನಲ್ಲಿ ಕಾರ್ಯಕರ್ತರು ಶ್ರಮಿಸಬೇಕು ಎಂದು ತಿಳಿಸಿದರು.
ಪಕ್ಷದಲ್ಲಿ ಎಲ್ಲರಿಗಿಂತ ಕಾರ್ಯಕರ್ತರು ಮುಖ್ಯ. ರಾಜಕೀಯದಲ್ಲಿ ಸುದೀರ್ಘ ಪಯಣದ ದುಡಿತ ನನ್ನದು. ಪಕ್ಷಾಂತರ ಮಾಡದೇ ಒಂದೇ ಪಕ್ಷದಲ್ಲಿ ನಿಷ್ಠೆಯಿಂದ ದುಡಿದಿದ್ದೇನೆ. ಪಕ್ಷ ಸದೃಢಗೊಳಿಸುವ ಶಕ್ತಿ ಈಗಲೂ ನನ್ನಲ್ಲಿದೆ. ಮತದಾರರು ನನ್ನ ಕೊನೆಗಾಲದಲ್ಲಿ ನನಗೆ ಮತ ನೀಡಿ ಜೆಡಿಎಸ್ ಅಧಿಕಾರಕ್ಕೆ ಬರಲು ಸಹಕರಿಸಬೇಕು ಎಂದರು.
ವಿಧಾನಪರಿಷತ್ ಸದಸ್ಯ ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ವೈ.ಎಸ್.ವಿ. ದತ್ತ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ರಂಜಿತ್ ಕುಮಾರ್, ಮಾಜಿ ಸಚಿವ ಬಿ.ಬಿ. ನಿಂಗಯ್ಯ, ಮುಖಂಡರಾದ ಮಂಜಪ್ಪ, ವೆಂಕಟೇಶ್ ಹೊಲಗದ್ದೆ ಗಿರೀಶ್ ಮತ್ತಿತರರು ಉಪಸ್ಥಿತರಿದ್ದರು.
ಕಡಬ: ಚಿನ್ನದ ತೂಕ ಹೆಚ್ಚಿಸಿ ಬ್ಯಾಂಕ್ ಗೆ ವಂಚನೆಗೆ ಯತ್ನ: ಇಬ್ಬರ ಬಂಧನ ಕಡಬ: ಚಿನ್ನಾಭರಣದ ತೂಕವನ್ನು ಕೃತಕವಾಗಿ ಹೆಚ್ಚಿಸಿ…
ಮಹಾರಾಷ್ಟ್ರ : ಮಳೆ ಅಬ್ಬರ - ಕುಸಿದು ಬಿದ್ದ ರತ್ನಗಿರಿ ರೈಲು ನಿಲ್ದಾಣದ ಛಾವಣಿ ; ತಪ್ಪಿದ ದೊಡ್ಡ ದುರಂತ…
ಶಿವಮೊಗ್ಗ: ಬಸ್ ನಿಲ್ದಾಣದಲ್ಲಿ ಚೀಲದೊಳಗೆ ನವಜಾತ ಹೆಣ್ಣು ಮಗು ಪತ್ತೆ ಶಿವಮೊಗ್ಗ: ನವಜಾತ ಹೆಣ್ಣು ಶಿಶುವೊಂದನ್ನು ಬಸ್ ನಿಲ್ದಾಣದಲ್ಲಿ ಅನಾಥವಾಗಿ…
ಪಡುಬಿದ್ರಿ : ನಡಿಪಟ್ಟಣದಲ್ಲಿ ಕಡಲು ಕೊರೆತಕ್ಕೆ ತಡೆಗೋಡೆ ನಿರ್ಮಾಣಕ್ಕೆ ಸಚಿವ ಖಾದರ್ ಗೆ ವಿಶ್ವಾಸ್ ಅಮೀನ್ ಮನವಿ ಪಡುಬಿದ್ರಿ: ಉಡುಪಿ…
ಬಂಟ್ವಾಳ : ಬಸ್ಸಿಗೆ ಕಾಯುತ್ತಿದ್ದ ವಿದ್ಯಾರ್ಥಿಗೆ ಚೂರಿ ಇರಿತ ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಇರಾ…
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…