Featured

ಮತದಾರರ ಕೈಗೆ ಚಪ್ಪಲಿ ಕೊಟ್ಟು ಕೆಲಸ ಮಾಡದಿದ್ದರೆ ಇದರಿಂದ ಹೊಡೆಯಿರಿ ಎಂದ ಅಭ್ಯರ್ಥಿ (ವಿಡಿಯೋ)

ಹೈದರಾಬಾದ್: ತೆಲಂಗಾಣದಲ್ಲಿ ಓರ್ವ ಅಭ್ಯರ್ಥಿ ಮತದಾರರ ಕೈಗೆ ಚಪ್ಪಲಿ ಕೊಟ್ಟ ಕೆಲಸ ಮಾಡದಿದ್ದರೆ ಇದರಿಂದಲೇ ನನ್ನನ್ನು ಹೊಡೆಯಿರಿ ಎಂದು ಹೇಳುವ ಮೂಲಕ ವಿನೂತನ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ.

ತೆಲಂಗಾಣ ವಿಧಾನಸಭೆ ಚುನಾವಣೆ ಕಣ ರಂಗೇರುತ್ತಿದ್ದು, ಮತದಾನದ ದಿನಾಂಕ ಹತ್ತಿರಾವಾಗುತ್ತಿದ್ದಂತೆಯೇ ಮತದಾರರ ಸೆಳೆಯಲು ಅಭ್ಯರ್ಥಿಗಳು ಹರಸಾಹಸ ಪಡುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯೊಬ್ಬರು ಮತ ಕೇಳುತ್ತಿರುವ ರೀತಿ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಮತದಾರರ ಕೈಗೆ ಚಪ್ಪಲಿ ಕೊಟ್ಟು ಅಭ್ಯರ್ಥಿ ಮತ ಕೇಳುವ ಮೂಲಕ ಇದೀಗ ಸುದ್ದಿಯಾಗಿದ್ದಾರೆ.

ಟಿಆರ್​ಎಸ್​ ಸೀನಿಯರ್​ ಲೀಡರ್​ ವಿದ್ಯಾಸಾಗರ್​ ರಾವ್ ಗೆ ಪ್ರತಿಸ್ಪರ್ಧಿಯಾಗಿ ಕಣಕ್ಕಿಳಿದಿರುವ ಅಕುಲ ಹನುಮಂತ ಎಂಬವರು ಮೆಟ್ಟುಪಲ್ಲಿಯಲ್ಲಿ ಮನೆಮನೆ ಪ್ರಚಾರದಲ್ಲಿ ತೊಡಗಿದ್ದ ವೇಳೆ, ಅಲ್ಲಿನ ಗ್ರಾಮಸ್ಥರ ಕೈಗೆ ಚಪ್ಪಲಿ ಕೊಟ್ಟು ಕೈ ಮುಗಿದು ವೋಟ್​ ಕೇಳುತ್ತಿದ್ದಾರೆ. ಹಾಗಂತ ಅವರ ಚಿಹ್ನೆ ಚಪ್ಪಲಿಯಲ್ಲ. ಬದಲಾಗಿ, ಚಪ್ಪಲಿ ಮೂಲಕ ಜನರಿಗೆ ಆಶ್ವಾಸನೆ ನೀಡುತ್ತಿರುವ ಅವರು ತಾವು ಕೊಟ್ಟ ಆಶ್ವಾಸನೆಗಳನ್ನು ಈಡೇರಿಸಲು ಸಾಧ್ಯವಾಗದಿದ್ದಲ್ಲಿ ಇದೇ ಚಪ್ಪಲಿಯಲ್ಲಿ ತಮಗೆ ಹೊಡೆಯಿರಿ ಎಂದು ಪ್ರಚಾರ ಮಾಡುತ್ತಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ಕಳೆದ ಕೆಲ ದಶಕಗಳಿಂದಲೂ ಇಲ್ಲಿ ಟಿಆರ್ ಎಸ್ ಪ್ರಭಾವವಿದೆ. ಆದರೆ ಗೆದ್ದ ಅಭ್ಯರ್ಥಿಗಳಿಂದ ಇಲ್ಲಿ ಯಾವುದೇ ರೀತಿಯ ಅಭಿವೃದ್ಧಿ ಕಾರ್ಯಗಳಾಗಿಲ್ಲ. ಹೀಗಾಗಿ ಈ ಬಾರಿ ಖುದ್ಧು ತಾವೇ ನಿಂತಿದ್ದು, ಜನರ ವಿಶ್ವಾಸ ಗಳಿಸಲು ಯತ್ನಿಸುತ್ತಿದ್ದೇನೆ. ಹೀಗಾದರೂ ಜನರು ತಮ್ಮ ಮೇಲೆ ನಂಬಿಕೆ ಇಟ್ಟು ಗೆಲ್ಲಿಸಲಿ ಎಂಬುದು ನನ್ನ ಉದ್ದೇಶ ಎಂದು ಹೇಳಿಕೊಂಡಿದ್ದಾರೆ.

Vishwa News 24

Recent Posts

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು – vishwanews24

ಹೈದರಾಬಾದ್  : ಕಾರು ಟ್ರಕ್ ನಡುವೆ ಭೀಕರ ರಸ್ತೆ ಅಪಘಾತ : ತೆಲುಗು ನಟ ಭರತ್ ಕಾಂತ್ ಸಾವು ಹೈದರಾಬಾದ್…

4 hours ago

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌’ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ – vishwanews24

ನೀವು ಇತಿಹಾಸ ನಿರ್ಮಿಸಿದ್ದೀರಿ: ತಮಿಳುನಾಡು ನೂತನ ಸಿಎಂ ವಿಜಯ್‌'ಗೆ ಸಿದ್ದರಾಮಯ್ಯ ವಿಶೇಷ ಅಭಿನಂದನೆ ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮಿಳುನಾಡಿನ…

5 hours ago

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ – vishwanews24

ಕಾರವಾರದ ಮೀನುಗಾರಿಕಾ ಬೋಟ್ ಗೋವಾ ಸಮುದ್ರ ಪ್ರದೇಶದಲ್ಲಿ ಮುಳುಗಡೆ : 22 ಮೀನುಗಾರರ ರಕ್ಷಣೆ ಕಾರವಾರ: ಅರಬ್ಬಿ ಸಮುದ್ರದಲ್ಲಿ ಮೀನುಗಾರಿಕೆಗೆ…

5 hours ago

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ – vishwanews24

ಯುವತಿ ವಿಚಾರಕ್ಕೆ ಕಿರುಕುಳ ಆರೋಪ : ಆಡಿಯೋ ರೆಕಾರ್ಡ್ ಮಾಡಿ ಯುವಕ ಆತ್ಮಹತ್ಯೆ ಹಾಸನ: ಯುವತಿ ವಿಚಾರಕ್ಕೆ ಕಿರುಕುಳ ನೀಡುತ್ತಿದ್ದಾರೆ…

5 hours ago

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ – vishwanews24

ರಾಜಿ ಮಾಡಿಕೊಂಡ ಪ್ರಧಾನಿಯಿಂದ ದೇಶ ಮುನ್ನಡೆಸಲು ಸಾಧ್ಯವಿಲ್ಲ‌ : ಮೋದಿ ವಿರುದ್ಧ ರಾಹುಲ್‌ ಗಾಂಧಿ ಆಕ್ರೋಶ ನವದೆಹಲಿ: ರಾಜಿ ಮಾಡಿಕೊಂಡ…

5 hours ago

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಮೂವರ ಬಂಧನ – vishwanews24

ಬೆಳ್ತಂಗಡಿ: ಕ್ಯಾಂಟೀನ್ ಹೆಸರಲ್ಲಿ ಅಕ್ರಮ ವೇಶ್ಯಾವಟಿಕೆ ದಂಧೆ ; ಪೊಲೀಸರ ದಾಳಿ - ಮೂವರ ಬಂಧನ ಬೆಳ್ತಂಗಡಿ,: ಕ್ಯಾಂಟೀನ್ ಹೆಸರಲ್ಲಿ…

5 hours ago