ಉಡುಪಿ

ಮತದಾರರ ತೀರ್ಪು ಬಿಜೆಪಿ ಪರ : ಲಾಲಾಜಿ

ಕಾಪು: ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಜನಪ್ರಿಯತೆ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಸಿದ್ಧರಾಮಯ್ಯ ಸರಕಾರದ ವೈಫಲ್ಯ ಎರಡನ್ನೂ ಜನ ತುಲನೆ ಮಾಡಿ ಮತಚಲಾಯಿಸಲಿದ್ದಾರೆ. ಮತದಾರರ ತೀರ್ಪು ಬಿಜೆಪಿಗೆ ಪರವಾಗಿ ಇರಲಿದ್ದು, ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಕಾಪು ಕ್ಷೇತ್ರ ಬಿಜೆಪಿಯ ಮಹಿಳಾ ಜನಪ್ರತಿನಿಧಿಗಳು ಪ್ರಾರಂಭಿಸಿರುವ ಮನೆ ಮನೆ ಭೇಟಿ ಮತ್ತು ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳೇ ಹೆಚ್ಚಾಗಿರುವುದೂ ನಮಗೆ ಲಾಭವಾಗಲಿದೆ. ಬಿಜೆಪಿಯಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಇದುವೇ ಬಿಜೆಪಿಗೆ ವರದಾನವಾಗಲಿದೆ ಎಂದರು.

ಕಾಪು ಕ್ಷೇತ್ರದಲ್ಲಿ ಈ ಹಿಂದೆ ನಾನು ಶಾಸಕನಾಗಿದ್ದಾಗ ಜನರೊಂದಿಗೆ ಇರಿಸಿದ್ದ ಸಂಪರ್ಕವನ್ನೇ ಮತ್ತೆ ಮುಂದುವರಿಸಿಕೊಂಡು ಬರಲಾಗುತ್ತಿದೆ. ಅಂದಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಅದನ್ನೇ ಮತವಾಗಿ ಪರಿವರ್ತಿಸುವ ಕೆಲಸ ಮಹಿಳಾ ಜನಪ್ರತಿನಿಧಿಗಳಿಂದ ನಡೆಯಬೇಕಿದೆ ಎಂದರು.

ಉಡುಪಿ ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯರಾದ ಶಶಿಪ್ರಭಾ ಶೇಟ್ಟಿ, ನೀತಾ ಗುರುರಾಜ್‌, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌, ಕಟಪಾಡಿ ಗ್ರಾ.ಪಂ. ಸದಸ್ಯೆ ವೀಣಾ ಶೆಟ್ಟಿ, ಪುರಸಭಾ ಸದಸ್ಯೆ ಮೋಹಿನಿ ಶೆಟ್ಟಿ  ಉಪಸ್ಥಿತರಿದ್ದರು.

Vishwa News 24

Recent Posts

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು – vishwanews24

ಮೈಸೂರು: ಕಾಲೇಜು ಕ್ಯಾಂಪಸ್‌ನಲ್ಲೇ ಹೃದಯಾಘಾತ ; ಕುಸಿದುಬಿದ್ದು ವಿದ್ಯಾರ್ಥಿ ಸಾವು ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನ ಖ್ಯಾತ ಮರಿಮಲ್ಲಪ್ಪ ಕಾಲೇಜು…

3 days ago

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ – vishwanews24

ಅಡ್ಡ ಮತದಾನ ಮೂಲಕ ಪಕ್ಷಕ್ಕೆ ಹಾಗೂ ಮೈತ್ರಿಗೆ ದ್ರೋಹ ಬಗೆದವರನ್ನು ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ : ವಿಜಯೇಂದ್ರ ಆಕ್ರೋಶ ಬೆಂಗಳೂರು:…

3 days ago

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ – vishwanews24

ಭಟ್ಕಳ ಲವ್ ಜಿಹಾದ್ ಆರೋಪ : ಯುವಕ ಅರೆಸ್ಟ್‌ ಕಾರವಾರ: ಉತ್ತರ ಕನ್ನಡ  ಜಿಲ್ಲೆಯ ಭಟ್ಕಳದಲ್ಲಿ ಕಿಚ್ಚು ಹಚ್ಚಿದ ಹಿಂದೂ,…

3 days ago

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ – vishwanews24

ಪರಿಷತ್ ಚುನಾವಣೆಯಲ್ಲಿ ನಮಗೆ ಮತ ನೀಡಿದ ಬೇರೆ ಪಕ್ಷದ ವಿಶ್ವಾಸವನ್ನುನಾವು ಉಳಿಸಿಕೊಳ್ಳುತ್ತೇವೆ: ಡಿ.ಕೆ.ಶಿವಕುಮಾರ್‌ ಬೆಂಗಳೂರು: ವಿಧಾನ ಪರಿಷತ್‌ ಚುನಾವಣೆಯಲ್ಲಿ ನಮ್ಮ…

3 days ago

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ – vishwanews24

ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ: ಜೂ. 30ಕ್ಕೆ ಮುಂದೂಡಿಕೆ ದಾವಣಗೆರೆ: ಹರಿಹರದ  ವಚನಾನಂದ ಸ್ವಾಮೀಜಿ ಪೋಕ್ಸೋ ಪ್ರಕರಣ ಆದೇಶವನ್ನು…

4 days ago

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ – ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು – vishwanews24

ವಿಟ್ಲ : ಲಾರಿಯಲ್ಲಿ ತಾಂತ್ರಿಕ ವೈಫಲ್ಯ - ಸರಿಪಡಿಸುವ ವೇಳೆ ಚಕ್ರಗಳ ಅಡಿಗೆ ಸಿಲುಕಿ ಚಾಲಕ ಸ್ಥಳದಲ್ಲೇ ಮೃತ್ಯು ವಿಟ್ಲ:…

4 days ago