ಉಡುಪಿ

ಮತದಾರರ ತೀರ್ಪು ಬಿಜೆಪಿ ಪರ : ಲಾಲಾಜಿ

ಕಾಪು: ಕೇಂದ್ರದಲ್ಲಿ ಆಡಳಿತದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರಕಾರದ ಜನಪ್ರಿಯತೆ ಮತ್ತು ರಾಜ್ಯದಲ್ಲಿ ಆಡಳಿತದಲ್ಲಿರುವ ಸಿದ್ಧರಾಮಯ್ಯ ಸರಕಾರದ ವೈಫಲ್ಯ ಎರಡನ್ನೂ ಜನ ತುಲನೆ ಮಾಡಿ ಮತಚಲಾಯಿಸಲಿದ್ದಾರೆ. ಮತದಾರರ ತೀರ್ಪು ಬಿಜೆಪಿಗೆ ಪರವಾಗಿ ಇರಲಿದ್ದು, ಈ ಬಾರಿ ಬಿಜೆಪಿಯ ಗೆಲುವು ನಿಶ್ಚಿತವಾಗಿದೆ ಎಂದು ಬಿಜೆಪಿ ಅಭ್ಯರ್ಥಿ ಲಾಲಾಜಿ ಆರ್‌. ಮೆಂಡನ್‌ ಹೇಳಿದರು.

ಕಾಪು ಕ್ಷೇತ್ರ ಬಿಜೆಪಿಯ ಮಹಿಳಾ ಜನಪ್ರತಿನಿಧಿಗಳು ಪ್ರಾರಂಭಿಸಿರುವ ಮನೆ ಮನೆ ಭೇಟಿ ಮತ್ತು ಮನೆ ಮನೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಕಾಪು ಕ್ಷೇತ್ರದಲ್ಲಿ ಬಿಜೆಪಿಯ ಜನಪ್ರತಿನಿಧಿಗಳೇ ಹೆಚ್ಚಾಗಿರುವುದೂ ನಮಗೆ ಲಾಭವಾಗಲಿದೆ. ಬಿಜೆಪಿಯಲ್ಲಿ ಮಹಿಳೆಯರಿಗೆ ವಿಶೇಷ ಪ್ರಾತಿನಿಧ್ಯ ನೀಡಲಾಗಿದೆ. ಇದುವೇ ಬಿಜೆಪಿಗೆ ವರದಾನವಾಗಲಿದೆ ಎಂದರು.

ಕಾಪು ಕ್ಷೇತ್ರದಲ್ಲಿ ಈ ಹಿಂದೆ ನಾನು ಶಾಸಕನಾಗಿದ್ದಾಗ ಜನರೊಂದಿಗೆ ಇರಿಸಿದ್ದ ಸಂಪರ್ಕವನ್ನೇ ಮತ್ತೆ ಮುಂದುವರಿಸಿಕೊಂಡು ಬರಲಾಗುತ್ತಿದೆ. ಅಂದಿನ ಅಭಿವೃದ್ಧಿ ಕಾರ್ಯಕ್ರಮಗಳನ್ನು ಜನ ಈಗಲೂ ನೆನಪಿಸಿಕೊಳ್ಳುತ್ತಿದ್ದಾರೆ. ಅದನ್ನೇ ಮತವಾಗಿ ಪರಿವರ್ತಿಸುವ ಕೆಲಸ ಮಹಿಳಾ ಜನಪ್ರತಿನಿಧಿಗಳಿಂದ ನಡೆಯಬೇಕಿದೆ ಎಂದರು.

ಉಡುಪಿ ಜಿ.ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಸುವರ್ಣ, ತಾ.ಪಂ. ಸದಸ್ಯರಾದ ಶಶಿಪ್ರಭಾ ಶೇಟ್ಟಿ, ನೀತಾ ಗುರುರಾಜ್‌, ಎಲ್ಲೂರು ಗ್ರಾ.ಪಂ. ಅಧ್ಯಕ್ಷೆ ವಸಂತಿ ಮಧ್ವರಾಜ್‌, ಕಟಪಾಡಿ ಗ್ರಾ.ಪಂ. ಸದಸ್ಯೆ ವೀಣಾ ಶೆಟ್ಟಿ, ಪುರಸಭಾ ಸದಸ್ಯೆ ಮೋಹಿನಿ ಶೆಟ್ಟಿ  ಉಪಸ್ಥಿತರಿದ್ದರು.

Vishwa News 24

Recent Posts

ಬೈಕಂಪಾಡಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ – vishwanews24

ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…

11 hours ago

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  – vishwanews24

ಕರ್ನಾಟಕ ಬಂದ್‌ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ  ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…

11 hours ago

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ – vishwanews24

ವಿಧಾನ ಪರಿಷತ್ ಸಭಾ​​ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್​​ ಕಲಾಪ…

12 hours ago

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು – vishwanews24

ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…

12 hours ago

ಹಿಂದೂ ಸಂಘಟನೆಗಳ ಮುಖಂಡರಿಗೆ ಜಿಲ್ಲೆ ಪ್ರವೇಶ ನಿಷೇಧ: ಉಡುಪಿ ಜಿಲ್ಲಾ ವಿಹಿಂಪ–ಬಜರಂಗದಳ ತೀವ್ರ ಖಂಡನೆ – vishwanews24

ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…

12 hours ago

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರ ಪ್ರವೇಶ ನಿರ್ಬಂಧ: ವಿಹಿಂಪ ಖಂಡನೆ – vishwanews24

ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…

13 hours ago