ರಾಜ್ಯ ನ್ಯೂಸ್

ಮತದಾರರ ಪಟ್ಟಿಗೆ ಹೆಸರು ಸೇರಿಸಲು ಮತ್ತು ಬದಲಾವಣೆ ಮಾಡಲು ಏ.14 ಕೊನೆಯ ದಿನ

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ನಿಗದಿಯಾಗಿದ್ದು ಮೇ 12ರಂದು ನಡೆಯಲಿದೆ. ಆದರೂ ಬಹಳಷ್ಟು ಜನರು ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಸಾಧ್ಯವಾಗದೆ ನಿರಾಶರಾಗಿದ್ದರೆ, ಅವರಿಗೆ ಚುನಾವಣಾ ಆಯೋಗ ಮತ್ತೊಂದು ಅವಕಾಶ ನೀಡಿದೆ. ಮತದಾರರ ಪಟ್ಟಿಯಲ್ಲಿ ಹೊಸದಾಗಿ ಹೆಸರು ಸೇರಿಸಲು ಮತ್ತು ಬದಲಾವಣೆ ಮಾಡಲು ಏ.14ರವರೆಗೆ ಕಾಲಾವಕಾಶ ನೀಡಲಾಗಿದೆ. 

ಈ ಬಗ್ಗೆ ರಾಜ್ಯ ಮುಖ್ಯಚುನಾವಣಾಧಿಕಾರಿ ಸಂಜೀವ್‌ಕುಮಾರ್‌ ಅವರು ಮಾಹಿತಿ ನೀಡಿದ್ದು, ಏ.8ರಂದು ‘ಮಿಂಚಿನ ನೋಂದಣಿ’ ಹೆಸರಲ್ಲಿ ನೋಂದಣಿ ಮತ್ತು ತಿದ್ದುಪಡಿಗಾಗಿ ವಿಶೇಷ ಕಾರ್ಯಕ್ರಮವನ್ನು ಚುನಾವಣಾ ಆಯೋಗ ಹಮ್ಮಿಕೊಂಡಿದೆ. ಮತದಾರರ ಪಟ್ಟಿಯಲ್ಲಿ ಹೆಸರು ಸೇರಿಸಲು ಮತ್ತು ತಿದ್ದುಪಡಿಗಳನ್ನು ಮಾಡಲು ಇಚ್ಚಿಸುವವರು ಏ.8 ರಂದು ಆಯಾ ವ್ಯಾಪ್ತಿಯ ಮತ ಕೇಂದ್ರಗಳಿಗೆ ತೆರಳಿ ತಿದ್ದುಪಡಿ ಮಾಡಿಕೊಳ್ಳಬಹುದು. ಈ ಪ್ರಕ್ರಿಯೆ ಎಲ್ಲಾ ಮತ ಕೇಂದ್ರಗಳಲ್ಲಿ ಭಾನುವಾರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ ಎಂದಿದ್ದಾರೆ. 

ಮತದಾರರ ಪಟ್ಟಿಯಲ್ಲಿ ನೂತನವಾಗಿ ಹೆಸರು ಸೇರಿಸಲು, ಸ್ಥಳ ಬದಲಾವಣೆ ಬಗ್ಗೆ ಮಾಹಿತಿ ನೀಡಲು ಮತ್ತು ಹೆಸರು ಕಣ್ಮರೆ ಆಗಿದ್ದರೆ ಪುನಃ ಸೇರಿಸಲು ಫಾರಂ 6 ಅನ್ನು, ಪಟ್ಟಿಯಿಂದ ಹೆಸರು ತೆಗೆಸಲು ಫಾರಂ 7, ಮತದಾರರ ಪಟ್ಟಿಯ ತಪ್ಪುಗಳನ್ನು ಬದಲಿಸಲು ಫಾರಂ 8 ಮತ್ತು ಒಂದೇ ಚುನಾವಣಾ ಕ್ಷೇತ್ರದಲ್ಲಿ ಮತದಾರರ ಹೆಸರನ್ನು ಇನ್ನೊಂದು ಜಾಗಕ್ಕೆ ಸ್ಥಳಾಂತರಿಸಲು ಅಂದರೆ ನಿಮ್ಮ ವಿಳಾಸ ಬದಲಾಗಿದ್ದರೆ ಫಾರಂ 8ಎ ಬಳಸಿ ಅರ್ಜಿ ಸಲ್ಲಿಸಬಹುದು. ಮತದಾರರು ಆನ್’ಲೈನ್ ಮೂಲಕವೂ ಅರ್ಜಿ ಸಲ್ಲಿಸಬಹುದು.

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

3 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

6 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

6 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

6 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

7 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

7 hours ago