Featured

ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದ ಸೂಫಿಯಾನ್‌ನನ್ನು ಎನ್‌ಕೌಂಟರ್‌ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು – Vishwanews24

ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದಸೂಫಿಯಾನ್‌ನನ್ನು ಎನ್‌ಕೌಂಟರ್‌ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು

ಲಖನೌ: ಇಸ್ಲಾಂ  ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಹಿಂದೂ  ಪ್ರೇಯಸಿಯನ್ನು ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ನೂಕಿ ಹತ್ಯೆಗೈದಿದ್ದ ಮೊಹಮ್ಮದ್‌ ಸೂಫಿಯಾನ್‌  ಎಂಬಾತನನ್ನು ಉತ್ತರಪ್ರದೇಶದ ಪೊಲೀಸರು  ಎನ್‌ಕೌಂಟರ್‌ ನಡೆಸಿ ಸೆರೆಹಿಡಿದಿದ್ದಾರೆ. ಎನ್‌ಕೌಂಟರ್‌ ವೇಳೆ ಸೂಫಿಯಾನ್‌ನ ಬಲಗಾಲಿಗೆ ಗುಂಡೇಟು ಬಿದ್ದಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರೊಂದಿಗೆ 19 ವರ್ಷ ನಿಧಿ ಹತ್ಯೆ ಪ್ರಕರಣದ ಬೆನ್ನು ಹತ್ತಿದ್ದ ಉತ್ತರಪ್ರದೇಶ ಪೊಲೀಸರಿಗೆ ಯಶಸ್ಸು ಸಿಕ್ಕಿದಂತೆ ಆಗಿದೆ.

ಮೊಹಮ್ಮದ್‌ ಸೂಫಿಯಾನ್‌ ಮತ್ತು ನಿಧಿ ಇಬ್ಬರೂ ನೆರೆಹೊರೆಯವರಾಗಿದ್ದು ಪ್ರೀತಿಸುತ್ತಿದ್ದರು. 3 ದಿನಗಳ ಹಿಂದೆ ನಿಧಿಗೆ ಇಸ್ಲಾಂಗೆ ಮತಾಂತರ ಆಗಿ ಬಳಿಕ ನನ್ನ ಮದುವೆ ಆಗು ಎಂದು ಸೂಫಿಯಾನ್‌ ಒತ್ತಾಯಿಸಿದ್ದ. ಈ ಹಿನ್ನೆಲೆಯಲ್ಲಿ ನಿಧಿ ಪೋಷಕರು ಸೂಫಿಯಾನ್‌ ಮನೆಗೆ ಹೋಗಿ, ಆತನ ಪಾಲಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ನಿಧಿಯನ್ನು ಅಪಾರ್ಟ್‌ಮೆಂಟ್‌ ಮೇಲೆ ಎಳೆದೊಯ್ದ ಸೂಫಿಯಾನ್‌, ಆಕೆಯನ್ನು 4ನೇ ಅಂತಸ್ತಿನಿಂದ ತಳ್ಳಿ ಸಾಯಿಸಿ ಪರಾರಿಯಾಗಿದ್ದ.

ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸೂಫಿಯಾನ್‌ ಪತ್ತೆಗೆ ಪೊಲೀಸರು 9 ತಂಡ ರಚಿಸಿ ಯುಪಿ, ದೆಹಲಿ, ರಾಜಸ್ಥಾನ ರಾಜ್ಯಗಳಲ್ಲಿ ಹುಡುಕಾಟ ಆರಂಭಿಸಿದ್ದರು. ಈ ಪೈಕಿ ಒಂದು ಪೊಲೀಸರ ತಂಡಕ್ಕೆ ಸೂಫಿಯಾನ್‌ ದುಬಗ್ಗಾದಲ್ಲಿನ ಇರುವ ಮಾಹಿತಿ ಸಿಕ್ಕಿ ಅಲ್ಲಿಗೆ ತೆರಳಿತ್ತು.

ಪೊಲೀಸರು ಅಲ್ಲಿಗೆ ತೆರಳಿದ ವೇಳೆ ಸೂಫಿಯಾನ್‌ ಪೊಲೀಸರ ಮೇಲೇ ಗುಂಡು ಹಾರಿಸಿದ್ದ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ ವೇಳೆ ಆತನ ಕಾಲಿಗೆ ಗುಂಡು ಬಿದ್ದಿದ್ದು, ಬಳಿಕ ಆತನನ್ನು ವಶಕ್ಕೆ ಪಡೆಯಲಾಗಿದೆ. ಗುಂಡೇಟು ತಗುಲಿರುವ ಸೂಫಿಯಾನನ್ನು ಲಖನೌದ ಕೆಜಿಎಂಯು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ನಿಧಿ ಗುಪ್ತಾಳ ‘ವಿಡಿಯೋ’ವನ್ನು ಆರೋಪಿ ಇರಿಸಿಕೊಂಡಿದ್ದ. ಅದನ್ನು ಇರಿಸಿಯೇ ಮತಾಂತರದ ಬೇಡಿಕೆ ಇಟ್ಟಿದ್ದ ಎಂದು ಮೂಲಗಳು ಹೇಳಿವೆ. ಮಂಗಳವಾರ ರಾತ್ರಿ ಉತ್ತರ ಪ್ರದೇಶ ರಾಜ್ಯ ರಾಜಧಾನಿ ಲಖನೌನ ದುಬಗ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತ್ ಕುಂಜ್ ಸೆಕ್ಟರ್ ಎಚ್ ನಲ್ಲಿ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಆಕೆಯನ್ನು ತಳ್ಳಲಾಗಿತ್ತು. ನಿಧಿ ಗುಪ್ತಾಳನ್ನು ತಳ್ಳಿದ ಬಳಿಕವೂ ಆಕೆ ಬದುಕುಳಿದಿದ್ದಳು. ನಂತರ, ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಆಘಾತ ಕೇಂದ್ರದಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿದ್ದ ಹೆಚ್ಚುವರಿ ಡಿಸಿಪಿ (ಪಶ್ಚಿಮ) ಸಿಎನ್ ಸಿನ್ಹಾ, ಆರೋಪಿಯನ್ನು ಮೊಹಮ್ಮದ್ ಸೂಫಿಯಾನ್ ಎಂದು ಗುರುತಿಸಲಾಗಿದ್ದು, ಕೊಲೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದರು. ಹಾಗೂ, ಬಾಲಕಿಯ ತಾಯಿ ದುಬಗ್ಗಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದರು.

ಇದನ್ನೂ ಓದಿ:  ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

ಅಲ್ಲದೆ, ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಯುತ್ತಿದೆ. ಯಾವುದೇ ಕೋಮು ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ಹೆಚ್ಚಿನ ಜಾಗರೂಕತೆಯಿಂದ ಪ್ರಕರಣವನ್ನು ನಿಭಾಯಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದರು. ಸದ್ಯ, ಆರೋಪಿ ಮೊಹಮ್ಮದ್‌ ಸೂಫಿಯನ್‌ನನ್ನು ಎನ್‌ಕೌಂಟರ್‌ ಬಳಿಕ ಸೆರೆ ಹಿಡಿಯಲಾಗಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

6 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

6 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

2 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago