Featured

ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದ ಸೂಫಿಯಾನ್‌ನನ್ನು ಎನ್‌ಕೌಂಟರ್‌ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು – Vishwanews24

ಮತಾಂತರಕ್ಕೆ ನಿರಾಕರಿಸಿದ ಗೆಳತಿಯನ್ನು ಹತ್ಯೆಗೈದಿದ್ದಸೂಫಿಯಾನ್‌ನನ್ನು ಎನ್‌ಕೌಂಟರ್‌ ನಡೆಸಿ ಸೆರೆಹಿಡಿದ ಉತ್ತರಪ್ರದೇಶದ ಪೊಲೀಸರು

ಲಖನೌ: ಇಸ್ಲಾಂ  ಧರ್ಮಕ್ಕೆ ಮತಾಂತರವಾಗಿ ಮದುವೆಯಾಗಲು ಒಪ್ಪಲಿಲ್ಲ ಎಂದು ತನ್ನ ಹಿಂದೂ  ಪ್ರೇಯಸಿಯನ್ನು ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ನೂಕಿ ಹತ್ಯೆಗೈದಿದ್ದ ಮೊಹಮ್ಮದ್‌ ಸೂಫಿಯಾನ್‌  ಎಂಬಾತನನ್ನು ಉತ್ತರಪ್ರದೇಶದ ಪೊಲೀಸರು  ಎನ್‌ಕೌಂಟರ್‌ ನಡೆಸಿ ಸೆರೆಹಿಡಿದಿದ್ದಾರೆ. ಎನ್‌ಕೌಂಟರ್‌ ವೇಳೆ ಸೂಫಿಯಾನ್‌ನ ಬಲಗಾಲಿಗೆ ಗುಂಡೇಟು ಬಿದ್ದಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇದರೊಂದಿಗೆ 19 ವರ್ಷ ನಿಧಿ ಹತ್ಯೆ ಪ್ರಕರಣದ ಬೆನ್ನು ಹತ್ತಿದ್ದ ಉತ್ತರಪ್ರದೇಶ ಪೊಲೀಸರಿಗೆ ಯಶಸ್ಸು ಸಿಕ್ಕಿದಂತೆ ಆಗಿದೆ.

ಮೊಹಮ್ಮದ್‌ ಸೂಫಿಯಾನ್‌ ಮತ್ತು ನಿಧಿ ಇಬ್ಬರೂ ನೆರೆಹೊರೆಯವರಾಗಿದ್ದು ಪ್ರೀತಿಸುತ್ತಿದ್ದರು. 3 ದಿನಗಳ ಹಿಂದೆ ನಿಧಿಗೆ ಇಸ್ಲಾಂಗೆ ಮತಾಂತರ ಆಗಿ ಬಳಿಕ ನನ್ನ ಮದುವೆ ಆಗು ಎಂದು ಸೂಫಿಯಾನ್‌ ಒತ್ತಾಯಿಸಿದ್ದ. ಈ ಹಿನ್ನೆಲೆಯಲ್ಲಿ ನಿಧಿ ಪೋಷಕರು ಸೂಫಿಯಾನ್‌ ಮನೆಗೆ ಹೋಗಿ, ಆತನ ಪಾಲಕರ ಮುಂದೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ವೇಳೆ ಮಾತಿಗೆ ಮಾತು ಬೆಳೆದು ನಿಧಿಯನ್ನು ಅಪಾರ್ಟ್‌ಮೆಂಟ್‌ ಮೇಲೆ ಎಳೆದೊಯ್ದ ಸೂಫಿಯಾನ್‌, ಆಕೆಯನ್ನು 4ನೇ ಅಂತಸ್ತಿನಿಂದ ತಳ್ಳಿ ಸಾಯಿಸಿ ಪರಾರಿಯಾಗಿದ್ದ.

ಈ ಘಟನೆ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ಸೂಫಿಯಾನ್‌ ಪತ್ತೆಗೆ ಪೊಲೀಸರು 9 ತಂಡ ರಚಿಸಿ ಯುಪಿ, ದೆಹಲಿ, ರಾಜಸ್ಥಾನ ರಾಜ್ಯಗಳಲ್ಲಿ ಹುಡುಕಾಟ ಆರಂಭಿಸಿದ್ದರು. ಈ ಪೈಕಿ ಒಂದು ಪೊಲೀಸರ ತಂಡಕ್ಕೆ ಸೂಫಿಯಾನ್‌ ದುಬಗ್ಗಾದಲ್ಲಿನ ಇರುವ ಮಾಹಿತಿ ಸಿಕ್ಕಿ ಅಲ್ಲಿಗೆ ತೆರಳಿತ್ತು.

ಪೊಲೀಸರು ಅಲ್ಲಿಗೆ ತೆರಳಿದ ವೇಳೆ ಸೂಫಿಯಾನ್‌ ಪೊಲೀಸರ ಮೇಲೇ ಗುಂಡು ಹಾರಿಸಿದ್ದ. ಈ ವೇಳೆ ಪೊಲೀಸರು ಆತ್ಮರಕ್ಷಣೆಗಾಗಿ ಪ್ರತಿದಾಳಿ ನಡೆಸಿದ ವೇಳೆ ಆತನ ಕಾಲಿಗೆ ಗುಂಡು ಬಿದ್ದಿದ್ದು, ಬಳಿಕ ಆತನನ್ನು ವಶಕ್ಕೆ ಪಡೆಯಲಾಗಿದೆ. ಗುಂಡೇಟು ತಗುಲಿರುವ ಸೂಫಿಯಾನನ್ನು ಲಖನೌದ ಕೆಜಿಎಂಯು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಇದನ್ನೂ ಓದಿ: ಇಸ್ಲಾಂಗೆ ಮತಾಂತರವಾಗಲು ನಿರಾಕರಿಸಿದ ಗೆಳತಿಯನ್ನು 4ನೇ ಮಹಡಿಯಿಂದ ಎಸೆದು ಕೊಂದ – Vishwanews24

ನಿಧಿ ಗುಪ್ತಾಳ ‘ವಿಡಿಯೋ’ವನ್ನು ಆರೋಪಿ ಇರಿಸಿಕೊಂಡಿದ್ದ. ಅದನ್ನು ಇರಿಸಿಯೇ ಮತಾಂತರದ ಬೇಡಿಕೆ ಇಟ್ಟಿದ್ದ ಎಂದು ಮೂಲಗಳು ಹೇಳಿವೆ. ಮಂಗಳವಾರ ರಾತ್ರಿ ಉತ್ತರ ಪ್ರದೇಶ ರಾಜ್ಯ ರಾಜಧಾನಿ ಲಖನೌನ ದುಬಗ್ಗಾ ಪೊಲೀಸ್ ಠಾಣೆ ವ್ಯಾಪ್ತಿಯ ಬಸಂತ್ ಕುಂಜ್ ಸೆಕ್ಟರ್ ಎಚ್ ನಲ್ಲಿ ಅಪಾರ್ಟ್‌ಮೆಂಟ್‌ನ 4ನೇ ಮಹಡಿಯಿಂದ ಆಕೆಯನ್ನು ತಳ್ಳಲಾಗಿತ್ತು. ನಿಧಿ ಗುಪ್ತಾಳನ್ನು ತಳ್ಳಿದ ಬಳಿಕವೂ ಆಕೆ ಬದುಕುಳಿದಿದ್ದಳು. ನಂತರ, ಕಿಂಗ್ ಜಾರ್ಜ್ ವೈದ್ಯಕೀಯ ವಿಶ್ವವಿದ್ಯಾಲಯದ ಆಘಾತ ಕೇಂದ್ರದಲ್ಲಿ ಚಿಕಿತ್ಸೆಯ ಸಮಯದಲ್ಲಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಘಟನೆ ಬಗ್ಗೆ ಹೆಚ್ಚಿನ ವಿವರಗಳನ್ನು ಬಹಿರಂಗಪಡಿಸಿದ್ದ ಹೆಚ್ಚುವರಿ ಡಿಸಿಪಿ (ಪಶ್ಚಿಮ) ಸಿಎನ್ ಸಿನ್ಹಾ, ಆರೋಪಿಯನ್ನು ಮೊಹಮ್ಮದ್ ಸೂಫಿಯಾನ್ ಎಂದು ಗುರುತಿಸಲಾಗಿದ್ದು, ಕೊಲೆ ಮತ್ತು ಬಲವಂತದ ಧಾರ್ಮಿಕ ಮತಾಂತರದ ಸೂಕ್ತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಹೇಳಿದ್ದರು. ಹಾಗೂ, ಬಾಲಕಿಯ ತಾಯಿ ದುಬಗ್ಗಾ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ ಎಂದೂ ಮಾಹಿತಿ ನೀಡಿದ್ದರು.

ಇದನ್ನೂ ಓದಿ:  ಉಡುಪಿ : ಮೀನುಗಾರರ ಮಕ್ಕಳಿಗೆ ಶಿಷ್ಯವೇತನ: ಅರ್ಜಿ ಆಹ್ವಾನ – Vishwanews24

ಅಲ್ಲದೆ, ಆರೋಪಿಗಳ ಬಂಧನಕ್ಕೆ ಪ್ರಯತ್ನ ನಡೆಯುತ್ತಿದೆ. ಯಾವುದೇ ಕೋಮು ಉದ್ವಿಗ್ನತೆ ಉಂಟಾಗದಂತೆ ಪೊಲೀಸರು ಹೆಚ್ಚಿನ ಜಾಗರೂಕತೆಯಿಂದ ಪ್ರಕರಣವನ್ನು ನಿಭಾಯಿಸುತ್ತಿದ್ದಾರೆ ಎಂದೂ ಅವರು ಹೇಳಿದ್ದರು. ಸದ್ಯ, ಆರೋಪಿ ಮೊಹಮ್ಮದ್‌ ಸೂಫಿಯನ್‌ನನ್ನು ಎನ್‌ಕೌಂಟರ್‌ ಬಳಿಕ ಸೆರೆ ಹಿಡಿಯಲಾಗಿದೆ.

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

14 minutes ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

1 hour ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

3 hours ago