Featured

ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24

ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ: ಡಿ.ಕೆ ಶಿ ಗೆ ಕೆ. ವಿರುದ್ಧ ಎಸ್ ಈಶ್ವರಪ್ಪ ವಾಗ್ದಾಳಿ – Vishwanews24

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.

ಕನ್ನಡ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸೆ, ಆಮಿಷ, ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡಬಾರದು. ಕಾನೂನು ಪ್ರಕಾರ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಹೋಗಬಹುದು. ಕದ್ದುಮುಚ್ಚು ಮತಾಂತರ ಆಗುವಂತಿಲ್ಲ ಎಂದರು.

ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ 2 ತಿಂಗಳ ಬಳಿಕ ಮತಾಂತರ ಆಗಬಹುದು. ಆ ಅವಧಿಯಲ್ಲಿ ಬೇಡವೆನಿಸಿದರೆ ಅರ್ಜಿ ವಾಪಸ್ ಪಡೆಯಬಹುದು. ಕಾಂಗ್ರೆಸ್, ಜೆಡಿಎಸ್ ನವರು ಇದಕ್ಕೆ ಯಾಕೆ ವಿರೋಧ ಮಾಡ್ತಾರೋ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರ ಆದ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ತಿಳಿಸಿದರು.

ಮತಾಂತರ ಮಾಡಿ ವಿದೇಶಗಳಿಗೆ ಮಾರಾಟ ಮಾಡಿದ್ದಾರೆ. ಅವರ ದೇಹ ಉಪಯೋಗಿಸಿಕೊಂಡ ಕೈಬಿಟ್ಟ ಉದಾಹರಣೆಗಳು ಸಾಕಷ್ಟಿವೆ. ಡಿಕೆಶಿ ಅವರಿಗೆ ಇವುಗಳನ್ನ ತೋರಿಸುತ್ತೇನೆ. ನಿನ್ನೆ ರಾಜಕಾರಣ ಮಾಡಿ ಸಭಾತ್ಯಾಗ ಮಾಡಿದ್ದಾರೆ. ರಾಜ್ಯದ ಜನ ಇದನ್ನ ಗಮನಿಸಿದ್ದಾರೆ. ಕಾನೂನು ಬದ್ಧವಾಗಿ ಮತಾಂತರ ನಿಷೇಧ ಕಾಯಿದೆಯನ್ನ ಜಾರಿಗೆ ತರುತ್ತೇವೆ ಎಂದು ಸಚಿವರು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

5 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

6 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

6 days ago