ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಕನ್ನಡ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸೆ, ಆಮಿಷ, ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡಬಾರದು. ಕಾನೂನು ಪ್ರಕಾರ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಹೋಗಬಹುದು. ಕದ್ದುಮುಚ್ಚು ಮತಾಂತರ ಆಗುವಂತಿಲ್ಲ ಎಂದರು.
ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ 2 ತಿಂಗಳ ಬಳಿಕ ಮತಾಂತರ ಆಗಬಹುದು. ಆ ಅವಧಿಯಲ್ಲಿ ಬೇಡವೆನಿಸಿದರೆ ಅರ್ಜಿ ವಾಪಸ್ ಪಡೆಯಬಹುದು. ಕಾಂಗ್ರೆಸ್, ಜೆಡಿಎಸ್ ನವರು ಇದಕ್ಕೆ ಯಾಕೆ ವಿರೋಧ ಮಾಡ್ತಾರೋ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರ ಆದ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ತಿಳಿಸಿದರು.
ಮತಾಂತರ ಮಾಡಿ ವಿದೇಶಗಳಿಗೆ ಮಾರಾಟ ಮಾಡಿದ್ದಾರೆ. ಅವರ ದೇಹ ಉಪಯೋಗಿಸಿಕೊಂಡ ಕೈಬಿಟ್ಟ ಉದಾಹರಣೆಗಳು ಸಾಕಷ್ಟಿವೆ. ಡಿಕೆಶಿ ಅವರಿಗೆ ಇವುಗಳನ್ನ ತೋರಿಸುತ್ತೇನೆ. ನಿನ್ನೆ ರಾಜಕಾರಣ ಮಾಡಿ ಸಭಾತ್ಯಾಗ ಮಾಡಿದ್ದಾರೆ. ರಾಜ್ಯದ ಜನ ಇದನ್ನ ಗಮನಿಸಿದ್ದಾರೆ. ಕಾನೂನು ಬದ್ಧವಾಗಿ ಮತಾಂತರ ನಿಷೇಧ ಕಾಯಿದೆಯನ್ನ ಜಾರಿಗೆ ತರುತ್ತೇವೆ ಎಂದು ಸಚಿವರು ಹೇಳಿದರು.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…