ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರಗೊಂಡ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ಸಚಿವ ಕೆ.ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು.
ಕನ್ನಡ ಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆಸೆ, ಆಮಿಷ, ಬಡತನವನ್ನು ದುರುಪಯೋಗ ಮಾಡಿಕೊಂಡು ಮತಾಂತರ ಮಾಡಬಾರದು. ಕಾನೂನು ಪ್ರಕಾರ ಒಂದು ಧರ್ಮದಿಂದ ಮತ್ತೊಂದು ಧರ್ಮಕ್ಕೆ ಹೋಗಬಹುದು. ಕದ್ದುಮುಚ್ಚು ಮತಾಂತರ ಆಗುವಂತಿಲ್ಲ ಎಂದರು.
ಜಿಲ್ಲಾಧಿಕಾರಿಗೆ ಅರ್ಜಿ ಸಲ್ಲಿಸಿ 2 ತಿಂಗಳ ಬಳಿಕ ಮತಾಂತರ ಆಗಬಹುದು. ಆ ಅವಧಿಯಲ್ಲಿ ಬೇಡವೆನಿಸಿದರೆ ಅರ್ಜಿ ವಾಪಸ್ ಪಡೆಯಬಹುದು. ಕಾಂಗ್ರೆಸ್, ಜೆಡಿಎಸ್ ನವರು ಇದಕ್ಕೆ ಯಾಕೆ ವಿರೋಧ ಮಾಡ್ತಾರೋ ಗೊತ್ತಿಲ್ಲ. ಡಿ.ಕೆ ಶಿವಕುಮಾರ್ ಅವರಿಗೆ ಮತಾಂತರ ಆದ ಹೆಣ್ಣುಮಕ್ಕಳ ಪರಿಸ್ಥಿತಿ ಗೊತ್ತಿಲ್ಲ ಎಂದು ತಿಳಿಸಿದರು.
ಮತಾಂತರ ಮಾಡಿ ವಿದೇಶಗಳಿಗೆ ಮಾರಾಟ ಮಾಡಿದ್ದಾರೆ. ಅವರ ದೇಹ ಉಪಯೋಗಿಸಿಕೊಂಡ ಕೈಬಿಟ್ಟ ಉದಾಹರಣೆಗಳು ಸಾಕಷ್ಟಿವೆ. ಡಿಕೆಶಿ ಅವರಿಗೆ ಇವುಗಳನ್ನ ತೋರಿಸುತ್ತೇನೆ. ನಿನ್ನೆ ರಾಜಕಾರಣ ಮಾಡಿ ಸಭಾತ್ಯಾಗ ಮಾಡಿದ್ದಾರೆ. ರಾಜ್ಯದ ಜನ ಇದನ್ನ ಗಮನಿಸಿದ್ದಾರೆ. ಕಾನೂನು ಬದ್ಧವಾಗಿ ಮತಾಂತರ ನಿಷೇಧ ಕಾಯಿದೆಯನ್ನ ಜಾರಿಗೆ ತರುತ್ತೇವೆ ಎಂದು ಸಚಿವರು ಹೇಳಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…