ಮತಾಂತರ ನಿಷೇಧ ಕಾಯ್ದೆಯ ಹಿಂದೆ ರಾಜಕೀಯ ದುರುದ್ದೇಶ ; ಹಾಗಾಗಿ ಕಾಂಗ್ರೆಸ್‌ ಇದನ್ನು ವಿರೋಧಿಸುತ್ತದೆ : ಸಿದ್ದರಾಮಯ್ಯ – Vishwanews24

Featured, ರಾಜ್ಯ ನ್ಯೂಸ್

ಮತಾಂತರ ನಿಷೇಧ ಕಾಯ್ದೆಯ ಹಿಂದೆ ರಾಜಕೀಯ ದುರುದ್ದೇಶ ; ಹಾಗಾಗಿ ಕಾಂಗ್ರೆಸ್‌ ಇದನ್ನು ವಿರೋಧಿಸುತ್ತದೆ : ಸಿದ್ದರಾಮಯ್ಯ – Vishwanews24

ಬೆಳಗಾವಿ: “ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ಬಿಜೆಪಿ ಮತಾಂತರ ನಿಷೇಧ ಕಾಯ್ದೆ ವಿಧೇಯಕವನ್ನು ಸದನದಲ್ಲಿ ಮಂಡಿಸುವುದಕ್ಕೆ ಹೊರಟಿದೆ” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ದೂರಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಮತಾಂತರ ನಿಷೇಧ ಕಾಯ್ದೆ ಮಂಡನೆಯ ಹಿಂದೆ ರಾಜಕೀಯ ದುರುದ್ದೇಶ ಇದೆ. ಹಾಗಾಗಿ ಕಾಂಗ್ರೆಸ್‌ ಮತಾಂತರ ನಿಷೇಧ ಕಾಯ್ದೆ ಮಂಡನೆಯನ್ನು ಸದನದಲ್ಲಿ ವಿರೋಧಿಸುತ್ತದೆ” ಎಂದಿದ್ದಾರೆ.

“ಮತಾಂತರ ನಿಷೇಧ ಕಾಯ್ದೆಯನ್ನು ಈಗ ಮಂಡಿಸುವ ಅವಶ್ಯಕತೆ ಇರಲಿಲ್ಲ. ರಾಜಕೀಯ ದುರುದ್ದೇಶದಿಂದ ಈ ಕಾಯ್ದೆಯನ್ನು ಬಿಜೆಪಿ ಮಂಡಿಸುತ್ತಾ ಇದೆ. ಪ್ರಚಾರದ ಕಾರಣದಿಂದ ಬಿಜೆಪಿ ಹೀಗೆ ಮಾಡುತ್ತಿದೆ” ಎಂದು ಹೇಳಿದ್ಧಾರೆ.

“ರಾಜ್ಯ ಸರ್ಕಾರ ಒಂದು ಸಮುದಾಯವನ್ನು ಗುರಿಯಾಗಿಸಿ ಹೀಗೆ ಮಾಡುತ್ತಿದೆ. ಅನಗತ್ಯವಾಗಿ ಕಿರುಕುಳ ನೀಡಲು ಈ ರೀತಿ ಮಾಡಲಾಗುತ್ತಿದೆ. ವಿಧೇಯಕ ಮಂಡನೆಗೆ ವಿರೋಧ ಮಾಡಲು ತೀರ್ಮಾನಿಸಿದ್ದೇವೆ” ಎಂದಿದ್ದಾರೆ.

ಕಟ್ಟುವುದು ಮನುಷ್ಯತ್ವ, ಕೆಡವೋದು ರಾಕ್ಷಸತ್ವ. ನಿಮಗೆ ಕೆಡವಿ ಗೊತ್ತೇ ವಿನಾ ಕಟ್ಟಿ ಗೊತ್ತಿಲ್ಲ : ಸಿದ್ದರಾಮಯ್ಯ ವಿರುದ್ದ ಕುಮಾರಸ್ವಾಮಿ ವಾಗ್ದಾಳಿ – Vishwanews24