ಬೆಂಗಳೂರು: ಮಂಡನೆ ವಿಚಾರವು ಸಂವಿಧಾನಕ್ಕೆ ವಿರುದ್ಧವಾಗಿದೆ. ಇದನ್ನು ನಾವು ವಿರೋಧಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಖಂಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯದಲ್ಲಿ ಅಶಾಂತಿ ಮೂಡಿಸುವ ಜೊತೆಗೆ ರಾಜಕೀಯವಾಗಿ ಕೆಲ ವಿಷಯಗಳನ್ನು ವಿಷಯಾಂತರ ಮಾಡಲು ಈ ರೀತಿ ಮಾಡುತ್ತಿದ್ದಾರೆ. ಅಂಬೇಡ್ಕರ್ ಅವರು ಮಾಡಿದ ಸಂವಿಧಾನಕ್ಕೆ ಈ ತೀರ್ಮಾನ ಅನ್ವಯಿಸುವುದಿಲ್ಲ. ಅಂಬೇಡ್ಕರ್ ಅವರು ನಂತರದಲ್ಲಿ ಬೌದ್ಧ ಧರ್ಮಕ್ಕೆ ಮತಾಂತರವಾಗಿದ್ದರು ಎಂದರು.
ಬೇರೆ ಬೇರೆಯವರು ಬಂದು ಹರೇ ರಾಮ ಹರೇ ಕೃಷ್ಣಾ ಎಂದು ನಮ್ಮ ರಾಜ್ಯದಲ್ಲಿ ಭಜನೆ ಮಾಡುತ್ತಾರೆ. ಇದೊಂದು ಸೆಕ್ಯೂಲರ್ ರಾಜ್ಯವಾಗಿದೆ. ಶಾಂತಿಯ ನೆಲವೀಡಾದ ಕರ್ನಾಟಕದ ಬಗ್ಗೆ ಅಪಾರವಾದ ಪ್ರೀತಿ ಇದೆ. ಕರ್ನಾಟಕದಲ್ಲಿ ಶಾಂತಿ ಕೆಡೆಸಲು ಇದೊಂದು ಪ್ರಯತ್ನವಾಗಿದೆ ಎಂದು ವಾಗ್ದಾಳಿ ನಡೆಸಿದರು.
ಇಂದು ಎಲ್ಲರಿಗೂ ಸೆಂಟ್ ಜೋಸೆಫ್, ಸೆಂಟ್ ಮಾರ್ಥಸ್ನಂತಹ ಕ್ರೈಸ್ತ ಶಾಲೆ ಬೇಕು. ನಾನು ನಮ್ಮ ಹಳ್ಳಿಯಲ್ಲಿ ಕ್ರೈಸ್ತ್ ಸ್ಕೂಲ್ ನಲ್ಲಿ ಓದಿದೆ. ನನಗೆ ಅಲ್ಲಿ ಯಾವತ್ತೂ ಅವರ ಧರ್ಮದ ಬಗ್ಗೆ ಭೋದಿಸಿಲ್ಲ. ಎಲ್ಲಾದರೂ ಅವರು ಬಲವಂತ ಮಾಡಿರುವ ಉದಾಹರಣೆಯೂ ಇಲ್ಲ. ಸುಮ್ಮನೆ ಮಾನಸಿಕವಾಗಿ ಅವರಿಗೆ ಹಿಂಸೆ ಕೊಡುವ ಕೆಲಸ ಆಗುತ್ತಿದೆ. ಇದು ರಾಜ್ಯಕ್ಕೆ ಕಪ್ಪುಚುಕ್ಕೆಯಾಗಿದೆ ಎಂದು ಟೀಕಿಸಿದರು.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…