ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ನಂತರ ಲವ್ ಜಿಹಾದ್ ವಿರುದ್ಧ ಕಾಯ್ದೆಯನ್ನು ತರುತ್ತೇವೆ ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದ್ದಾರೆ.
ಬೆಳಗಾವಿಯ ಸುವರ್ಣ ಸೌಧದಲ್ಲಿ ಮಾತನಾಡಿದ ಅವರು, ಬಿಜೆಪಿ ಮೊದಲಿನಿಂದಲೂ ಗೋಹತ್ಯೆ ನಿಷೇಧ ಕಾಯ್ದೆ ತರುವುದಾಗಿ ಹೇಳಿತ್ತು. ಅದರಂತೆ ಅದನ್ನು ಜಾರಿಗೆ ತಂದೆವು. ಈಗ ಮತಾಂತರ ನಿಷೇಧ ಕಾಯ್ದೆಯನ್ನು ಈ ಅಧಿವೇಶನದಲ್ಲಿ ಜಾರಿಗೆ ತರುತ್ತೇವೆ ಎಂದರು.
ಮತಾಂತರವನ್ನು ಮಹಾತ್ಮ ಗಾಂಧಿ, ವಿವೇಕಾನಂದರು ಕೂಡಾ ವಿರೋಧಿಸಿದ್ದರು. ಈಗ ಈ ಕಾಯ್ದೆಗೆ ಕಾನೂನಿನ ಸ್ವರೂಪ ತರುತ್ತಿದ್ದೇವೆ. ಈ ವಿಚಾರದಲ್ಲಿ ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ. ಕಾಂಗ್ರೆಸ್ ಯಾಕೆ ವಿರೋಧ ಮಾಡುತ್ತಿದೆ ಎಂಬುದನ್ನು ಹೇಳಲಿ ಎಂದು ಒತ್ತಾಯಿಸಿದರು.
ಯಾವ ಯಾವ ಕಾರಣಕ್ಕೆ ಮತಾಂತರ ಆಗುತ್ತಿದೆ. ಅದರ ದುಷ್ಪರಿಣಾಮ ಏನು ಎಂಬುದು ಗೊತ್ತಿದೆ. ಕೇವಲ ಒಂದು ಸಮುದಾಯವನ್ನ ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿಲ್ಲ. ಈ ಬಗ್ಗೆ ಚರ್ಚೆಗೆ ಬರಲಿ, ಉತ್ತರ ನೀಡಲು ನಾವು ಸಿದ್ಧವಿದ್ದೇವೆ ಎಂದು ಹೇಳಿದರು.
ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…
ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…
ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…
ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…
ಇಸ್ಲಾಂ ಧರ್ಮದಲ್ಲಿ ಹಿಜಾಬ್ ಕಡ್ಡಾಯವಲ್ಲ: ಅಲಹಾಬಾದ್ ಹೈಕೋರ್ಟ್ ಮುಸ್ಲಿಂ ವಿದ್ಯಾರ್ಥಿನಿಯ ಅರ್ಜಿ ವಜಾಗೊಳಿಸಿದ ಹೈಕೋರ್ಟ್ ಪ್ರಯಾಗ್ರಾಜ್: ಶಾಲಾ ಸಮವಸ್ತ್ರದೊಂದಿಗೆ ಹಿಜಾಬ್…
ನೂತನ ಜಿಲ್ಲಾಸ್ಪತ್ರೆಯನ್ನು ಶೀಘ್ರವೇ ಆರಂಭಿಸಿ : ಕರವೇ ಆಗ್ರಹ ಸೆ.30ರೊಳಗೆ ಆಸ್ಪತ್ರೆಯ ಸೇವೆ ಆರಂಭಿಸದಿದ್ದರೆ ಅ.1ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆಯ ಎಚ್ಚರಿಕೆ…