ಬೆಳಗಾವಿ: ಮತಾಂತರ ನಿಷೇಧ ಕಾಯ್ದೆ ಇಂದು ವಿಧಾನಸಭೆಯಲ್ಲಿ ಧ್ವನಿ ಮತದ ಮೂಲದ ಅಂಗೀಕಾರವಾಗಿದೆ. ಈ ನಡುವೆ ಕಳೆದ ಎರಡು ದಿನದಿಂದ ಸದನದಲ್ಲಿ ಪರ ಮತ್ತು ವಿರೋಧವಾಗಿ ಮಸೂದೆ ಪರ ಕಾವೇರಿದ ಮಾತಿನ ಚಕಮಕಿ ಕೂಡೆ ನಡೆಯಿತು.
ರಾಜ್ಯದಲ್ಲಿ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣೆಗಾಗಿ ಮತ್ತು ತಪ್ಪು ನಿರೂಪಣೆ, ಬಲವಂತ, ಅನುಚಿತ ಪ್ರಭಾವ, ಒತ್ತಾಯ, ಆಮಿಷದ ಮೂಲಕ ಅಥವಾ ಯಾವುದೇ ವಂಚನೆಯ ವಿಧಾನಗಳ ಮೂಲಕ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಕಾನೂನು ಬಾಹಿರ ಮತಾಂತರ ಮಾಡುವುದನ್ನು ನಿಷೇಧಿಸುವುದಕ್ಕಾಗಿ ಜಾರಿಗೊಳಿಸುತ್ತಿರುವಂತ ವಿಧೇಯಕವೇ ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕು ಸಂರಕ್ಷಣಾ ವಿಧೇಯಕ-2021 ಆಗಿದೆ.
ಈ ಕಾಯಿದೆಯನುಸಾರ ಆಮಿಷದ ಆಸೆಯಿಂದ ಅಂದ್ರೇ ಹಣ, ವಸ್ತು ರೂಪದಲ್ಲಿ ನೀಡೋದಾಗಿ ಮತಾಂತರಿಸಿದ್ರೂ ಅದು ಅಪರಾಧ ಆಗಲಿದೆ. ಅಲ್ಲದೇ ಮದುವೆಯಾಗೋದಾಗಿ ವಾಗ್ದಾನ ಮಾಡೋದು, ನಿಮಗೆ ಒಳ್ಳೆಯ ಜೀವನ ನೀಡುತ್ತೇವೆ. ಒಂದು ಧರ್ಮವನ್ನು ಮತ್ತೊಂದು ಧರ್ಮಕ್ಕೆ ಹೋಲಿಕೆ ಮಾಡಿ ಧಕ್ಕೆ ಮಾಡಿ ಮನವೊಲಿಸೋದು ಅಪರಾಧವಾಗಲಿದೆ. ಇನ್ನೂ ಯಾರೇ ವ್ಯಕ್ತಿಯನ್ನು ಶಾರೀರಕ ಹಾನಿ ಉಂಟು ಮಾಡುವ, ಬೆದರಿಕೆ ಒಡ್ಡುವ, ಮಾನಸಿಕ ಒತ್ತಡ, ದೈಹಿಕ ಬಲಪ್ರಯೋಗ ಬಳಸಿ, ಆತನ ಇಚ್ಛೆಗೆ ವಿರುದ್ಧವಾಗಿ ಮತಾಂತರಿಸೋದು ಒತ್ತಾಯಪೂರ್ವಕವಾದಂತ ಮತಾಂತರ ಆಗಲಿದೆ.
ಸೇತುವೆ ಮೇಲೆ 3 ವರ್ಷದ ಮಗು ಬಿಟ್ಟು ನದಿಗೆ ಹಾರಿದ ದಂಪತಿ ಅಮರಾವತಿ: ಇಲ್ಲಿನ ಪಶ್ಚಿಮ ಗೋದಾವರಿ ಜಿಲ್ಲೆಯ ಚಿಂಚಿನಾಡ…
ಕರಾವಳಿಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ಸಮಿತಿ ರಚನೆ : ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಭರವಸೆ ಕರಾವಳಿ ಭಾಗದಲ್ಲಿ ಕರ್ನಾಟಕ…
ಬಿಟ್ ಕಾಯಿನ್ ಹಗರಣ : ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಜಾಮೀನು ಅರ್ಜಿ ವಜಾ ಬೆಂಗಳೂರು: ಬಿಟ್ ಕಾಯಿನ್…
ಬಪ್ಪನಾಡು ದ್ವಾರ ಸ್ಥಳಾಂತರ ಕಾಮಗಾರಿ ವೀಕ್ಷಿಸಿದ ಎ.ಜೆ. ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ ಸಿವಿಲ್ ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮಂಗಳೂರು:ರಾಷ್ಟ್ರೀಯ ಹೆದ್ದಾರಿ-66ರ ವಿಸ್ತರಣೆಯ…
ನಾಗೇಂದ್ರ ಅವರು ಯಾವುದೇ ತಪ್ಪು ಮಾಡಿಲ್ಲ, ಅವರು ಒಬ್ಬ ನಿರಪರಾಧಿ .. ನಾಗೇಂದ್ರ ಅವರ ವಿರುದ್ಧ ಬಿಜೆಪಿ ನಡೆದುಕೊಂಡ ರೀತಿ…
ಕಟೀಲು ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರಕ್ಕೆ ಚಿನ್ನ-ಬೆಳ್ಳಿಯ ಪ್ರಭಾವಳಿ ಅರ್ಪಿಸಿದ ರಾಜೇಶ್ ಶೆಟ್ಟಿ ದಂಪತಿ ಮಂಗಳೂರು : ಶ್ರೀ ಕ್ಷೇತ್ರ ಕಟೀಲು…