Featured

ಮತಾಂತರ ನಿಷೇಧ ಕಾಯ್ದೆ: 2023ಕ್ಕೆ ನಮ್ಮ‌ ಸರ್ಕಾರ ಬಂದ ಕೂಡಲೇ ವಾಪಸ್ ತೆಗೆದುಕೊಳ್ಳುತ್ತೇವೆ :  ಸಿದ್ದರಾಮಯ್ಯ – Vishwanews24

ಮತಾಂತರ ನಿಷೇಧ ಕಾಯ್ದೆ: 2023ಕ್ಕೆ ನಮ್ಮ‌ ಸರ್ಕಾರ ಬಂದ ಕೂಡಲೇ ವಾಪಸ್ ತೆಗೆದುಕೊಳ್ಳುತ್ತೇವೆ :  ಸಿದ್ದರಾಮಯ್ಯ – Vishwanews24

ಬೆಳಗಾವಿ: ‘ಮತಾಂತರ ನಿಷೇಧ ಕಾಯ್ದೆಗೆ ವಿಧಾನ ಸಭೆಯಲ್ಲಿ ಅನುಮೋದನೆ ಪಡೆದುಕೊಳ್ಳುವುದಕ್ಕೆ ನಾವು ಬಿಡುವುದಿಲ್ಲ. ಹಾಗೊಂದು ವೇಳೆ ದುಸ್ಸಾಹಸ ಮಾಡಿದರೆ, 2023ಕ್ಕೆ ನಮ್ಮ‌ ಸರ್ಕಾರ ಬಂದ ಕೂಡಲೇ ವಾಪಸ್ ತೆಗೆದುಕೊಳ್ಳುತ್ತೇವೆ’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮತಾಂತರ ನಿಷೇಧ ಕಾಯ್ದೆ ವಿರೋಧಿಸಿ ಸುವರ್ಣ ವಿಧಾನ ಸೌಧದ ಬಳಿ ಭಾರತೀಯ ಕ್ರೈಸ್ತ ಒಕ್ಕೂಟದಿಂದ ಕ್ರೈಸ್ತರು ಶುಕ್ರವಾರ ಹಮ್ಮಿಕೊಂಡಿರುವ ಸಾಂಕೇತಿಕ‌ ಉಪವಾಸ ಸತ್ಯಾಗ್ರಹದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

‘ಈಗಾಗಲೇ ನಾವು ನಮ್ಮ ಶಾಸಕಾಂಗ ಪಕ್ಷದ ಸಭೆಯಲ್ಲಿ ಚರ್ಚೆ ಮಾಡಿದ್ದೇವೆ. ಬಿಜೆಪಿಯವರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರುತ್ತೇವೆ ಎಂದಿದ್ದಾರೆ. ಮುಂದಿನ ವಾರ ತರುತ್ತಾರೆ ಎಂದುಕೊಂಡಿದ್ದೇನೆ. ನಮ್ಮ ಪಕ್ಷವು ಈ ಕಾಯ್ದೆಯನ್ನು ತೀವ್ರವಾಗಿ ವಿರೋಧ ಮಾಡುತ್ತದೆ’ ಎಂದು ತಿಳಿಸಿದರು.

‘ಇದು ಗಂಭೀರ ವಿಚಾರ. ದೇಶದಲ್ಲಿ ಕೋಮು ಸೌಹಾರ್ದ ಹಾಳು ಮಾಡಲು, ಒಂದು ಧರ್ಮವನ್ನು ಗುರಿಯಾಗಿಟ್ಟುಕೊಂಡು ಕಾಯ್ದೆ ತರುತ್ತಿದ್ದಾರೆ. ಇದರಲ್ಲಿ ರಾಜ್ಯದ ಹಿತ ಇಲ್ಲ. ನಿಮ್ಮ (ಕ್ರೈಸ್ತರ) ಜೊತೆ ಯಾವಾಗಲೂ ಇರುತ್ತೇವೆ. ಯಾವುದೇ ಸರ್ಕಾರ ಸಂವಿಧಾನ ಏನು ಹೇಳಿದೆಯೋ ಅದರಂತೆ ನಡೆದುಕೊಳ್ಳಬೇಕು’ ಎಂದರು.

‘ಯಾವುದೇ ಧರ್ಮವನ್ನು ಆಯ್ಕೆ ಮಾಡಿಕೊಳ್ಳುವುದು, ಒಪ್ಪಿ ಪೂಜಿಸುವುದು ಹಾಗೂ ಪ್ರಚಾರದ ಹಕ್ಕನ್ನು ಸಂವಿಧಾನವು ಪ್ರತಿಯೊಬ್ಬರಿಗೂ ಕೊಟ್ಟಿದೆ. ಯಾವುದೇ ಧರ್ಮದ ಆಧಾರದ ಮೇಲೆ ಸಂವಿಧಾನ ರಚನೆಯಾಗಿಲ್ಲ. ಎಲ್ಲ ಧರ್ಮದವರಿಗೂ ಸಮಾನವಾದ ಸ್ಥಾನ ಕೊಟ್ಟಿದೆ. ನಾವೆಲ್ಲರೂ ಮೊದಲಿಗೆ ಭಾರತೀಯರು. ನಂತರ ಜಾತಿ, ಧರ್ಮ ಬರುತ್ತದೆ. ಜಾತಿ ನಾವು ಮಾಡಿಕೊಂಡಿದ್ದಲ್ಲ. ದೇವರು ಮಾಡಿಲ್ಲ. ಸ್ವಾರ್ಥಕ್ಕೋಸ್ಕರ ಹುಟ್ಟಿಕೊಂಡದ್ದು’ ಎಂದರು.

‘ದೇಶಕ್ಕೆ ಕ್ರೈಸ್ತ ಧರ್ಮದ ಕೊಡುಗೆ ಅಪಾರವಾಗಿದೆ. ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದೆ. ಹಾಗಾದರೆ ಆ ಕಾಲೇಜಿಗೆ ಅಥವಾ ಆಸ್ಪತ್ರೆಗೆ ಹೋದವರು ಮತಾಂತರ ಆಗಬಹುದಾಗಿತ್ತಲ್ಲಾ? ಬಲವಂತವಾಗಿ ಏನನ್ನೂ ಮಾಡುವುದಕ್ಕೆ ಬರುವುದಿಲ್ಲ. ಮತಾಂತರ ನಿಷೇಧ ಎನ್ನುವುದೇ ಸರಿ ಇಲ್ಲ’ ಎಂದು ಹೇಳಿದರು.

‘ಈ ದೇಶದಲ್ಲಿ ಇಚ್ಛೆ ಇರುವ ಧರ್ಮ ಪಾಲನೆ ಮಾಡಬಹುದು. ಅದು ಅವರ ಸ್ವಾತಂತ್ರ್ಯ. ಅದನ್ನು ಕಿತ್ತಕೊಳ್ಳಬಾರದು. ಕಿತ್ತುಕೊಂಡರೆ ಅದು ಸಂವಿಧಾನ ವಿರೋಧಿಯಾಗುತ್ತದೆ. ನಾನು ಮುಖ್ಯಮಂತ್ರಿ ಆಗಿದ್ದಾಗ ಚರ್ಚ್ ಮೇಲೆ ಒಂದೇ ಒಂದು ದಾಳಿಯೂ ನಡೆಯದಂತೆ ನೋಡಿಕೊಂಡಿದ್ದೆ. ಆಗಲೂ ಇದ್ದ ಪೊಲೀಸರೇ ಈಗಲೂ ಇದ್ದಾರೆ. ಅವರನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದನ್ನು ಆಡಳಿತ ನಡೆಸುವವರು ವಿವೇಚನೆಯಿಂದ ನಿರ್ಧರಿಸಬೇಕು’ ಎಂದರು.

‘ಸಂವಿಧಾನ ಒಳ್ಳೆಯವರ ಕೈಯಲ್ಲಿ ಇದ್ದರೆ ಒಳ್ಳೆಯದಾಗುತ್ತದೆ. ಕೆಟ್ಟವರ ಕೈಯಲ್ಲಿ ಇದ್ದರೆ ಕೆಟ್ಟದ್ದಾಗುತ್ತದೆ. ಅಸ್ಪೃಶ್ಯತೆ, ಸಾಮಾಜಿಕ ಹಾಗೂ ಆರ್ಥಿಕ ಅಸಮಾನತೆ ಸರಿಪಡಿಸುವುದು ಸರ್ಕಾರದ ಕೆಲಸ. ಅದನ್ನು ಬಿಟ್ಟು ಅನಗತ್ಯವಾಗಿ ಕಾಯ್ದೆ ತರುವುದು‌ ಒಳ್ಳೆಯದು’ ಎಂದರು.

‘ಈ ಬಿಜೆಪಿ ಸರ್ಕಾರದವರು ನಿಮ್ಮನ್ನು (ಕ್ರೈಸ್ತರನ್ನು) ಗುರಿಯಾಗಿಟ್ಟುಕೊಂಡು ಕಾಯ್ದೆ ಮಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಂದು ದೇಶ ಹಾಳು ಮಾಡಿದರು. ಇಲ್ಲಿನ ಸರ್ಕಾರ ರಾಜ್ಯ ಹಾಳುಗೆಡವುತ್ತಿದೆ. ಇದು ಆರ್‌ಎಸ್‌ಎಸ್ ಹುನ್ನಾರ. ಬಿಜೆಪಿ ಕುತಂತ್ರ. ಅದೆಲ್ಲವೂ ನಮಗೆ ಗೊತ್ತಾಗಿದೆ. ಕ್ರೈಸ್ತರು ಕೇಳಲಿ ಬಿಡಲಿ ನಾವು ವಿರೋಧಿಸಿ ತೋರಿಸುತ್ತೇವೆ. ಎಷ್ಟು ಸಾಧ್ಯವಾಗುತ್ತದೆಯೋ ಅಷ್ಟು ವಿರೋಧಿಸುತ್ತೇವೆ’ ಎಂದು ತಿಳಿಸಿದರು.

‘ಅಂಥಾದ್ದೆಲ್ಲ ಮಾಡುವುದಕ್ಕೆ ಬಿಡುವುದಿಲ್ಲ ನಾವು ಎಂದಿಗೂ ಮನುಷ್ಯರಾಗಿ ಬದುಕಬೇಕು. ಮನುಷ್ಯತ್ವ ಇಲ್ಲವಾದರೆ ಅದ್ಯಾವ ಸಮಾಜ? ದಯವೇ ಧರ್ಮದ ಮೂಲ ಎಂದು ಬಸವಣ್ಣ ಹೇಳಿದ್ದಾರೆ. ಇದು ಈ ಸರ್ಕಾರದವರಿಗೆ ಅರ್ಥ ಆಗಿಲ್ಲ. ನಿಮ್ಮ ಜೊತೆ ನಾವಿದ್ದೀವೆ. ಆತಂಕ ಪಡಬೇಡಿ’ ಎಂದು ಅಭಯ ನೀಡಿದರು.

ಧರ್ಮ ಪ್ರಾಂತ್ಯದ ಬಿಷಪ್ ಡೆರಿಕ್ ಫರ್ನಾಂಡೀಸ್, ಮುಖಂಡರಾದ ಐವನ್‌ ಡಿಸೋಜಾ, ನಂದಕುಮಾರ್, ಕೆ.ಜೆ. ಜಾರ್ಜ್ ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

4 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

4 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

4 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago