ಬೆಳಗಾವಿ: ಮತಾಂತರ ನಿಷೇಧ ಮಸೂದೆಯನ್ನು ನಾನು ಹರಿದು ಹಾಕಿದ್ದೇನೆ. ಇದು ನನ್ನ ಹಕ್ಕು. ಅವರು ಏನು ಮಾಡುತ್ತಾರೋ ಮಾಡಲಿ. ಈ ಮಸೂದೆ ಸಂವಿಧಾನಕ್ಕೆ ವಿರುದ್ಧವಾದುದ್ದು. ಸರ್ಕಾರ ಕಳ್ಳರಂತೆ ವರ್ತಿಸುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆ ನಂತರ ಡಿ.ಕೆ. ಶಿವಕುಮಾರ್ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಸದನದಲ್ಲಿ ಸಮಯಾವಕಾಶ ಇದ್ದರೂ ಕಾಯಲಿಲ್ಲ. ಕಂದಾಯ ಸಚಿವರು ಉತ್ತರ ನೀಡುವ ಸಂದರ್ಭದಲ್ಲಿ ಅವರ ಮಾತು ಮುಗಿಸಿ, ನಂತರ ನಮ್ಮ ಸಮ್ಮುಖದಲ್ಲೇ ಮಂಡನೆ ಮಾಡಬಹುದಿತ್ತು. ನಾವು ಕೂಡ ಪ್ರಸ್ತಾವನೆ ಸಂದರ್ಭದಲ್ಲೇ ಇದನ್ನು ಆಕ್ಷೇಪಿಸಲು ಸಿದ್ಧರಿದ್ದೆವು. ಸರ್ಕಾರ ಮಸೂದೆ ಮಂಡಿಸಿ ನಂತರ ಮತಕ್ಕೆ ಹಾಕಲು ಅವಕಾಶ ಮಾಡಿ ಕೊಡಬೇಕಿತ್ತು. ಬಹುಮತದ ಆಧಾರದ ಮೇಲೆ ತೀರ್ಮಾನ ಕೈಗೊಳ್ಳಬಹುದಿತ್ತು. ಆದರೆ ಸ್ಪೀಕರ್ ಅವರು ರಾಜಕೀಯ ಪಕ್ಷದ ಸದಸ್ಯರಂತೆ ನಡೆದುಕೊಂಡಿದ್ದಾರೆ. ಅವರು ಕಾನೂನಿನ ಪ್ರಕಾರವಾಗಿ ನಡೆದುಕೊಂಡಿಲ್ಲ ಎಂದು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದರು.
ಗೋಹತ್ಯೆ ನಿಷೇಧ ಮಸೂದೆ ಮಂಡನೆ ಸಮಯದಲ್ಲಿ ಅವರು ಕೊಟ್ಟ ಮಾತಿನಂತೆ ನಡೆದುಕೊಳ್ಳಲಿಲ್ಲ. ಈಗಲೂ ಅವರು ವಿರೋಧಿಸುತ್ತೇವೆ ಎಂದು ಹೇಳಿ, ನಂತರ ಹಿಂದೆ ಸರಿಯುತ್ತಾರೆ. ನಾವು ಇಲ್ಲಿ ಯಾರನ್ನೂ ನಂಬಲು ಸಾಧ್ಯವಿಲ್ಲ. ಇದು ನಮ್ಮ ಅನುಭವ. ನಮಗೆ ಬಹುಮತ ಇದೆಯೋ, ಇಲ್ಲವೋ ಬೇರೆ ವಿಚಾರ. ಆದರೆ ಈ ಮಸೂದೆ ಸಂವಿಧಾನ ವಿರುದ್ಧವಾಗಿದೆ. ಈ ಮಸೂದೆಯಲ್ಲಿ ಶಿಕ್ಷಣ ಸಂಸ್ಥೆಗಳು ಉಚಿತ ಶಿಕ್ಷಣ ನೀಡುವ ಆಮಿಷ ನೀಡಲಾಗುತ್ತಿದೆ ಎಂಬ ಅಸಂಬದ್ಧ ಅಂಶಗಳಿವೆ’ ಎಂದರು.
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮತಾಂತರಗೊಂಡಾಗ ದೊಡ್ಡ ಪ್ರಮಾಣದಲ್ಲಿ ಸಾಮೂಹಿಕ ಮತಾಂತರ ನಡೆಯಿತು. ಇದು ಭಾರತದ ಇತಿಹಾಸ. ರಾಜ್ಯದಲ್ಲಿ ಅನೇಕ ವೈದ್ಯಕೀಯ, ಇಂಜಿನಿಯರಿಂಗ್, ಪದವಿ ಕಾಲೇಜು ಹಾಗೂ ಶಾಲೆಗಳು ಇವೆ. ಆಸ್ಪತ್ರೆಗಳು, ಧಾರ್ಮಿಕ ಸಂಸ್ಥೆಗಳಿವೆ. ಆದರೂ ಸಚಿವರ ಮಕ್ಕಳು ಕ್ರೈಸ್ತ ಸಮುದಾಯದ ಶಿಕ್ಷಣ ಸಂಸ್ಥೆಗಳಲ್ಲೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಮುಂದಾಗುತ್ತಾರೆ. ಈಗಲೂ ಕೇಂದ್ರದ ಹಲವು ಸಚಿವರ ಮಕ್ಕಳು ಕ್ರೈಸ್ತ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿದ್ದಾರೆ. ಈ ಮಸೂದೆ ರಾಜ್ಯದಲ್ಲಿ ಮುಂದೆ ಬರಬಹುದಾದ ಬಂಡವಾಳ ಹೂಡಿಕೆ ಮೇಲೂ ಕೆಟ್ಟ ಪರಿಣಾಮ ಬೀರಲಿದೆ. ವಿದೇಶಿ ಬಂಡವಾಳ ಹೂಡಿಕೆದಾರರು ರಾಜ್ಯಕ್ಕೆ ಬರಲು ಹಿಂದೇಟು ಹಾಕುತ್ತಾರೆ. ಹೀಗಾಗಿ ಕಾಂಗ್ರೆಸ್ ಪಕ್ಷ ಇದರ ವಿರುದ್ಧ ಹೋರಾಡುತ್ತದೆ. ನಾವು ಜನರ ಮುಂದೆ ಹೋಗುತ್ತೇವೆ, ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದಾಗ ಈ ಮಸೂದೆಯನ್ನು ಹಿಂಪಡೆಯಲಿದೆ’ ಎಂದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…