ಬೆಂಗಳೂರು: ರಾಜ್ಯದಲ್ಲಿ ಮತಾಂತರ ತಡೆಯಲು ಹೊಸ ಕಾಯ್ದೆ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಪ್ರೇರಿತವಾಗಿ ಹೊಸದಾಗಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರೆ ಕಾಂಗ್ರೆಸ್ ಪಕ್ಷ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುವುದನ್ನು ತಡೆಯಲು ಈಗಾಗಲೇ ಕಾಯ್ದೆ ಇದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶದಿಂದ ಹೆಚ್ಚುವರಿ ತಿದ್ದುಪಡಿ ತರುವುದನ್ನು ಕಾಂಗ್ರೆಸ್ ಸಂಪೂರ್ಣವಾಗಿ ವಿರೋಧಿಸಲಿದೆ. ಬಿಜೆಪಿ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.
ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಗಿದೆ ಎಂಬುದನ್ನು ನೋಡಿದ್ದೇವೆ. ನಮ್ಮದು ಜಾತ್ಯತೀತ ದೇಶಹಾಗೂ ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್ಗಳ ಮೇಲೆ ದಾಳಿ ಮಾಡುವುದು, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ. ಬಿಜೆಪಿ ಸರ್ಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ರಾಜ್ಯದ ಗೌರವಕ್ಕೆ ಧಕ್ಕೆ ಉಂಟಾಗುವುದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಗೂ ಭಂಗ ಉಂಟಾಗಲಿದೆ ಎಂದು ಹೇಳಿದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…