Featured

ಮತಾಂತರ ನಿಷೇಧ ಮಸೂದೆ : ಕಾಂಗ್ರೆಸ್‌ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ : ಡಿಕೆಶಿ – Vishwanews24

ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ; ಕಾಂಗ್ರೆಸ್‌ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ : ಡಿಕೆಶಿ – Vishwanews24

ಬೆಂಗಳೂರು:  ರಾಜ್ಯದಲ್ಲಿ ಮತಾಂತರ ತಡೆಯಲು ಹೊಸ ಕಾಯ್ದೆ ಅಗತ್ಯವಿಲ್ಲ. ರಾಜ್ಯ ಸರ್ಕಾರವು ಬೆಳಗಾವಿ ಅಧಿವೇಶನದಲ್ಲಿ ರಾಜಕೀಯ ಪ್ರೇರಿತವಾಗಿ ಹೊಸದಾಗಿ ಮತಾಂತರ ನಿಷೇಧ ತಿದ್ದುಪಡಿ ವಿಧೇಯಕ ಮಂಡನೆ ಮಾಡಿದರೆ ಕಾಂಗ್ರೆಸ್‌ ಪಕ್ಷ ಅದನ್ನು ಸಂಪೂರ್ಣವಾಗಿ ವಿರೋಧಿಸಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಒತ್ತಾಯ ಪೂರ್ವಕವಾಗಿ ಮತಾಂತರ ಮಾಡುವುದನ್ನು ತಡೆಯಲು ಈಗಾಗಲೇ ಕಾಯ್ದೆ ಇದೆ. ಈಗಾಗಲೇ ಅಸ್ತಿತ್ವದಲ್ಲಿರುವ ಕಾಯಿದೆಗೆ ದುರುದ್ದೇಶದಿಂದ ಹೆಚ್ಚುವರಿ ತಿದ್ದುಪಡಿ ತರುವುದನ್ನು ಕಾಂಗ್ರೆಸ್‌ ಸಂಪೂರ್ಣವಾಗಿ ವಿರೋಧಿಸಲಿದೆ. ಬಿಜೆಪಿ ಸರ್ಕಾರವು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಟ್ಟುಕೊಂಡು ದ್ವೇಷದ ರಾಜಕೀಯ ಮಾಡುವುದು ಸರಿಯಲ್ಲ ಎಂದು ಕಿಡಿಕಾರಿದರು.

ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳಿಗೂ ಸಮುದಾಯಗಳಿಗೂ ಸಮಾನ ಗೌರವವಿದೆ. ಧಾರವಾ, ಕೊಡಗು ಮತ್ತಿತರ ಕಡೆ ಈಗಾಗಲೇ ಏನೇನಾಗಿದೆ ಎಂಬುದನ್ನು ನೋಡಿದ್ದೇವೆ. ನಮ್ಮದು ಜಾತ್ಯತೀತ ದೇಶಹಾಗೂ ರಾಜ್ಯ. ಇಡೀ ವಿಶ್ವ ನಮ್ಮನ್ನು ಗಮನಿಸುತ್ತಿದೆ. ಚರ್ಚ್‌ಗಳ ಮೇಲೆ ದಾಳಿ ಮಾಡುವುದು, ಅನ್ಯ ಧರ್ಮೀಯರ ಭಾವನೆಗಳಿಗೆ ಧಕ್ಕೆ ತರುವುದು ಸರಿಯಲ್ಲ. ಬಿಜೆಪಿ ಸರ್ಕಾರ ದುಸ್ಸಾಹಸಕ್ಕೆ ಕೈ ಹಾಕಬಾರದು. ಇದರಿಂದ ರಾಜ್ಯದ ಗೌರವಕ್ಕೆ ಧಕ್ಕೆ ಉಂಟಾಗುವುದಲ್ಲದೆ ಕಾನೂನು ಮತ್ತು ಸುವ್ಯವಸ್ಥೆಗೂ ಭಂಗ ಉಂಟಾಗಲಿದೆ ಎಂದು ಹೇಳಿದರು.

 

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

1 day ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

1 day ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

1 day ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

1 day ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

2 days ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago