Featured

ಮತಾಂತರ ನಿಷೇಧ ಮಾತ್ರವಲ್ಲದೆ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ಜಾರಿಗೆ ತರುತ್ತೇವೆ :  ಈಶ್ವರಪ್ಪ – Vishwanews24

ಮತಾಂತರ ನಿಷೇಧ ಮಾತ್ರವಲ್ಲದೆ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ಜಾರಿಗೆ ತರುತ್ತೇವೆ :  ಈಶ್ವರಪ್ಪ

ಒಂದು ಧರ್ಮವನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು.

ರಾಜ್ಯದಲ್ಲಿ  ಧರ್ಮವನ್ನು ಉಳಿಸುವ, ನಮ್ಮ ಸಹೋದರರನ್ನು ರಕ್ಷಿಸುವ ಪೂರ್ಣ ಬಹುಮತ ಬಿಜೆಪಿಗೆ ಇದೆ..

ಶಿವಮೊಗ್ಗ: ದಕ್ಷಿಣ ಕನ್ನಡ ಜಿಲ್ಲೆ ಸೇರಿ ಹಲವೆಡೆ ಲವ್ ಜಿಹಾದ್ ಗೆ ಹೆಣ್ಣುಮಕ್ಕಳು ಬಲಿಯಾಗಿದ್ದಾರೆ. ಒಂದು ಧರ್ಮವನ್ನು ದೃಷ್ಟಿಯಲ್ಲಿಟ್ಟುಕೊಂಡೇ ಈ ಮತಾಂತರ ನಿಷೇಧ ಕಾಯ್ದೆ ತರುತ್ತಿರುವುದು. ಆ ಧರ್ಮದವರು ಹಿಂದೂ ಹೆಣ್ಣುಮಕ್ಕಳು, ಬಡ ಹಿಂದು ಜನರ ಮೇಲೆ ಕಣ್ಣಿಟ್ಟು, ಆಮಿಷವೊಡ್ಡಿಮತಾಂತರ ಮಾಡುತ್ತಿರುವುದು. ಇದು ಡಿ ಕೆ ಶಿವಕುಮಾರ್ ಅವರಿಗೆ ಗೊತ್ತಿಲ್ಲದಿದ್ದರೆ ಎಲ್ಲೆಲ್ಲಿ ಮತಾಂತರ ಮಾಡಿ ಹಿಂದೂ ಹೆಣ್ಣು ಮಕ್ಕಳನ್ನು ಮೋಸ ಮಾಡಿದ್ದಾರೆ ಎಂಬುದನ್ನು ನಾನೇ ಕರೆದುಕೊಂಡು ಹೋಗಿ ತೋರಿಸುತ್ತೇನೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

ಮತಾಂತರ ನಿಷೇಧ ಕಾಯ್ದೆ ಜಾರಿಗೆ ವಿರೋಧ ಮಾಡುತ್ತೇವೆ ಎಂಬ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಹೇಳಿಕೆಗೆ ಪ್ರತಿಕ್ರಿಯಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿವ ಮತಾಂತರದ ದಂಧೆ ಬಗ್ಗೆ ಡಿಕೆಶಿ ಅವರಿಗೆ ನೇರವಾಗಿ ವೀರಶೈವ ಸಮಾಜದವರೇ ಹೇಳಿದ್ದಾರೆ ಆದರೆ ಡಿಕೆಶಿ ‌ ಕೇವಲ ಇದೆಲ್ಲವನ್ನೂ ಓಟಿನ ಲೆಕ್ಕವಾಗಿ ನೋಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಡಿಕೆಶಿಯವರು ಓಟಿಗೋಸ್ಕರ ಮಾಡುತ್ತಿರುವ ಕೆಟ್ಟ ರಾಜಕಾರಣವಾಗಿದೆ. ಅವರು ನೀವು ಎಷ್ಟೇ ವಿರೋಧ ಮಾಡಿದರೂ , ರಾಜ್ಯದಲ್ಲಿ ಈ ಧರ್ಮವನ್ನು ಉಳಿಸುವ, ನಮ್ಮ ಸಹೋದರರನ್ನು ರಕ್ಷಿಸುವ ಪೂರ್ಣ ಬಹುಮತ ಬಿಜೆಪಿಗೆ ಇದೆ. ನಾವು ಇದನ್ನು ವಿಧಾನಸಭೆಯಲ್ಲಿ ಕಾಯ್ದೆಯನ್ನು ಪಾಸ್ ಮಾಡುತ್ತೇವೆ. ಇದು ಮಾತ್ರವಲ್ಲ ರಾಜ್ಯದಲ್ಲಿ ಭಾರತೀಯ ಸಂಸ್ಕೃತಿ ಉಳಿಸುವ ಅನೇಕ ಕಾಯ್ದೆ ತರುತ್ತೇವೆ ಎಂದು ಹೇಳಿದರು.

Vishwa News 24

Recent Posts

ತಾಂತ್ರಿಕ ದೋಷ: ಹುಬ್ಬಳ್ಳಿಯಲ್ಲಿ ಇಳಿಯಬೇಕಿದ್ದ ವಿಮಾನ ಬೆಂಗಳೂರಿನಲ್ಲಿ ಲ್ಯಾಂಡಿಂಗ್ – vishwanews24

ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…

1 day ago

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ – vishwanews24

ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…

1 day ago

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ – vishwanews24

ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…

1 day ago

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ – vishwanews24

ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…

1 day ago

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು – vishwanews24

ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…

1 day ago

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು: ಡಿವೈಡರ್‌ ಗೆ ಬೈಕ್‌ ಡಿಕ್ಕಿ ;  ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…

3 days ago