ಶಿವಮೊಗ್ಗ: ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು ಎಂದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿನ ಗಲಭೆ ವಿಚಾರವಾಗಿ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.
ನಾನು ಎಲ್ಲಾ ಮುಸಲ್ಮಾನರು ಗೂಂಡಾಗಳು ಎನ್ನುವುದಿಲ್ಲ. ಅವರಲ್ಲೂ ಸೌಮ್ಯ ಸ್ವಭಾವದವರಿದ್ದಾರೆ. ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ ಎಂದರು.
ಕೆಲವು ಮುಸಲ್ಮಾನರ ದುಷ್ಕ್ರತ್ಯ ಹಾಗೂ ಮತಾಂಧ ಭಾವನೆ ಹೋಗೋವರೆಗೂ ದೇಶದಲ್ಲಿ ಶಾಂತಿ ಇರಲ್ಲ. ಮತಾಂಧರನ್ನು ಬಗ್ಗು ಬಡಿಯದಿದ್ದರೇ ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ. ಗುಂಡಾಗಿರಿ, ಕೊಲೆ, ಧ್ವಂಸ ಮಾಡೋಕೆ ಮತಾಂಧ ಮುಸಲ್ಮಾನರು ಈ ದೇಶದಲ್ಲಿ ರೆಡಿಯಿದ್ದಾರೆ ಎಂದು ಕಿಡಿಕಾರಿದರು.
ಎಸ್ ಡಿಪಿಐ ನಂತವು ಜುಜಬಿ ಸಂಘಟನೆಗಳು, ಅವುಗಳೇನು ಸಾಧನೆ ಮಾಡಿಲ್ಲ. ಧಾಂದಲೆ, ಗಲಭೆ ಮಾಡಿ ಹೆಸರು ಮಾಡೋರ ಬಗ್ಗೆ ನಾನು ಕೇಳಿದ್ದೇನೆ. ಮತಾಂಧ ಎಸ್ ಡಿಪಿಐ ಅವರಿಗೆ ಜೈಲಿಗೆ ಹೋಗೋದು, ಹೊರಗೆ ಬರೋದು ಕೆಲಸವಾಗಿಬಿಟ್ಟಿದೆ. ಅವರಿಗೆ ಮಾನ ಮರ್ಯಾದೆ ಕೂಡ ಇಲ್ಲ.
ದೇಶದ ಭವಿಷ್ಯದ ದೃಷ್ಟಿಯಿಂದ ಮತಾಂಧರ ವಿರುದ್ದ ದೇಶದ ಜನರು ಒಂದಾಗಬೇಕು. ಮತಾಂಧ ಮುಸಲ್ಮಾನರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದ ಈಶ್ವರಪ್ಪ ತಿಳಿಸಿದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…