ಮತಾಂಧ ಮುಸಲ್ಮಾನರನ್ನು ಬಗ್ಗು ಬಡಿಯದಿದ್ದರೇ  ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ : ಈಶ್ವರಪ್ಪ -Vishwanews24

ಶಿವಮೊಗ್ಗ:  ಮತಾಂಧ ಮುಸಲ್ಮಾನರ ದೊಂಬಿ ಹಾಗೂ ಗುಂಡಾಗಿರಿಯನ್ನು ಉಳಿದ ಮುಸ್ಲಿಮರು ಖಂಡಿಸಬೇಕು ಎಂದು ಬೆಂಗಳೂರಿನ ಡಿಜೆ ಹಳ್ಳಿಯಲ್ಲಿನ ಗಲಭೆ ವಿಚಾರವಾಗಿ  ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಶಿವಮೊಗ್ಗದಲ್ಲಿ ಪ್ರತಿಕ್ರಿಯಿಸಿದ್ದಾರೆ.

ನಾನು ಎಲ್ಲಾ ಮುಸಲ್ಮಾನರು ಗೂಂಡಾಗಳು ಎನ್ನುವುದಿಲ್ಲ. ಅವರಲ್ಲೂ ಸೌಮ್ಯ ಸ್ವಭಾವದವರಿದ್ದಾರೆ. ಶಾಸಕ ಶ್ರೀನಿವಾಸ ಅವರ ಮನೆ, ಕಛೇರಿ ಧ್ವಂಸ ಅಗಿದ್ದು ಬಹಳ ನೋವಾಗಿದೆ ಎಂದರು.

ಕೆಲವು ಮುಸಲ್ಮಾನರ ದುಷ್ಕ್ರತ್ಯ ಹಾಗೂ ಮತಾಂಧ ಭಾವನೆ ಹೋಗೋವರೆಗೂ ದೇಶದಲ್ಲಿ ಶಾಂತಿ ಇರಲ್ಲ. ಮತಾಂಧರನ್ನು ಬಗ್ಗು ಬಡಿಯದಿದ್ದರೇ  ನಮ್ಮ ಮನೆಗೆ ಬೆಂಕಿ ಹಚ್ಚುವ ಸ್ಥಿತಿ ಬರುತ್ತದೆ. ಗುಂಡಾಗಿರಿ, ಕೊಲೆ, ಧ್ವಂಸ ಮಾಡೋಕೆ ಮತಾಂಧ ಮುಸಲ್ಮಾನರು ಈ ದೇಶದಲ್ಲಿ ರೆಡಿಯಿದ್ದಾರೆ ಎಂದು ಕಿಡಿಕಾರಿದರು.

ಎಸ್ ಡಿಪಿಐ ನಂತವು ಜುಜಬಿ ಸಂಘಟನೆಗಳು, ಅವುಗಳೇನು ಸಾಧನೆ ಮಾಡಿಲ್ಲ. ಧಾಂದಲೆ, ಗಲಭೆ ಮಾಡಿ ಹೆಸರು ಮಾಡೋರ ಬಗ್ಗೆ ನಾನು ಕೇಳಿದ್ದೇನೆ. ಮತಾಂಧ ಎಸ್ ಡಿಪಿಐ ಅವರಿಗೆ ಜೈಲಿಗೆ ಹೋಗೋದು, ಹೊರಗೆ ಬರೋದು ಕೆಲಸವಾಗಿಬಿಟ್ಟಿದೆ.‌ ಅವರಿಗೆ ಮಾನ ಮರ್ಯಾದೆ ಕೂಡ ಇಲ್ಲ.

ದೇಶದ ಭವಿಷ್ಯದ ದೃಷ್ಟಿಯಿಂದ ಮತಾಂಧರ ವಿರುದ್ದ ದೇಶದ ಜನರು ಒಂದಾಗಬೇಕು. ಮತಾಂಧ ಮುಸಲ್ಮಾನರ ವಿರುದ್ಧ ಸರ್ಕಾರ ಕಠಿಣ ಕ್ರಮಕೈಗೊಳ್ಳಲಿದೆ ಎಂದ ಈಶ್ವರಪ್ಪ ತಿಳಿಸಿದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

1 day ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago