Featured

ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ  :ಶರಣ್ ಪಂಪ್‍ವೆಲ್ -Vishwanews24

ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ  :ಶರಣ್ ಪಂಪ್‍ವೆಲ್ -Vishwanews24

ಮಂಗಳೂರು, : ”ಭಾರತ ದೇಶವನ್ನು ನಾಶ ಮಾಡಬೇಕಾದರೆ ಹಿಂದೂ ಧರ್ಮವನ್ನು ನಾಶ ಮಾಡಿದರೆ ಸಾಕು ಈ ನಿಟ್ಟಿನಲ್ಲಿ ದೇಶವನ್ನು ಇಸ್ಲಾಮಿಕರಣ ಮಾಡುವ ಷಡ್ಯಂತ್ರ ನಡೆಯುತ್ತಿದ್ದು ಇದರ ಒಂದು ಆಂಗವಾಗಿ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಹಾನಿ ಮಾಡುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿಲವ್ ಜಿಹಾದ್, ಲ್ಯಾಂಡ್ ಜಿಹಾದ್ ಮೂಲಕ ಹಿಂದೂಗಳನ್ನು ಅತಂತ್ರಗೊಳಿಸುವ ಕಾರ್ಯ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ ಕೇವಲ ಹಿಂದೂ ಸಂಘಟನೆಗಳು ಮಾತ್ರ ಪ್ರತಿಭಟಿಸುವುದಲ್ಲ ಇಡೀ ಹಿಂದೂ ಸಮಾಜ ಒಟ್ಟಾಗಿ ನಿಂತು ಪ್ರತಿಭಟಿಸುವ ಕಾರ್ಯ ಆಗಬೇಕು” ಎಂದು ವಿಶ್ವ ಹಿಂದೂ ಪರಿಷತ್‍ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಹೇಳಿದರು.

ವಿ.ಹಿಂಪ ಬಜರಂಗದಳ ಉಳ್ಳಾಲ ಪ್ರಖಂಡ ಉಳ್ಳಾಲ ಪರಿಸರದಲ್ಲಿ ನಡೆಯುವ ಹಿಂದೂ ವಿರೋಧಿ ಕೃತ್ಯಗಳನ್ನು ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ಹುನ್ನಾರದ ವಿರುದ್ದ ತೊಕ್ಕೊಟ್ಟು ಬಸ್ಸು ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ : 72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ -Vishwanews24

”ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಹಿಂದೂಗಳ ವಿರುದ್ಧ ನಡೆಯುವ ಹಿಂದೂ ವಿರೋಧಿ ಘಟನೆಗಳು ಆರಂಭವಾಗುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅದನ್ನು ರಾಜ್ಯದಾದ್ಯಂತ ನಡೆಸುತ್ತಾರೆ. ಹಿಂದೂ ಮುಖಂಡರ ಹತ್ಯೆಯೂ ನಡೆದದ್ದು ಜಿಲೆಯಲ್ಲಿ ಬಳಿಕ ರಾಜ್ಯದಾದ್ಯಂತ ಹಿಂದೂ ಮುಖಂಡರ ಹತ್ಯೆ ನಡೆಯಿತು. ಇದೀಗ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದುಷ್ಕೃತ್ಯಗಳು ನಡೆದರೂ ನಾವು ಇನ್ನೂ ಎಚ್ಚೆತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ದೇವರ ವಿರುದ್ಧ ಪೋಸ್ಟ್‌ ಹಾಕಿದಾಗ ಮನೆ, ಪೊಲೀಸ್ ಠಾಣೆ ಸೇರಿದಂತೆ ಇಡೀ ಊರನ್ನೇ ಸುಟ್ಟು ದಾಂದಲೆ ಮಾಡಿದ್ದಾರೆ ಈ ನಿಟ್ಟಿನಲ್ಲಿ ಹಿಂದೂ ಧರ್ಮದ ಬಾಂದವರು ಒಟ್ಟಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ” ಎಂದರು.

”ಇತ್ತೀಚೆಗೆ ರಾಜಕೀಯ ಪಕ್ಷದ ಮುಖಂಡರೊಬ್ಬರ ‘ನೀ ತಾಂಟ್ರೆ ನಾ ತಾಂಟ್ರೆ’ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೀಗ ಆ ವ್ಯಕ್ತಿ ಕಾಮಿಡಿ ಪೀಸ್ ಆಗುತ್ತಿದ್ದಾನೆ. ಹಿಂದೂ ಧರ್ಮ ಲಕ್ಷಾಂತರ ವರ್ಷದಿಂದ ಭಾರತದಲ್ಲಿ ಇದೆ. ಸಾವಿರಾರು ವರ್ಷಗಳ ಹಿಂದೆ ಹುಟ್ಟಿದ ಧರ್ಮದವನೊಬ್ಬ ಇಂತಹ ಹೇಳಿಕೆಗಳು ಹಾಸ್ಯಸ್ಪದವಾಗಿದ್ದು, ಹಿಂದೂ ಧರ್ಮ ಹೋರಾಟಕ್ಕೆ ಸಿದ್ಧವಾಗಿದೆ. ಈಗಾಗಲೇ ಆಯೋಧ್ಯೆ ಆಯಿತು, ಮುಂದಿನ ಸರದಿ ಕಾಶಿ ಮತ್ತು ಮಥುರವಾಗಿದ್ದು ತಾಕತ್ತಿದ್ದರೆ ನಿಲ್ಲಿಸಲು ತಾಂಟಲು ಸಿದ್ಧರಾಗಿ” ಎಂದು ಸವಾಲೆಸೆದರು.

ಭಜರಂಗದಳ ಸಂಚಾಲಕ ಗುರು ಉಳ್ಳಾಲಬೈಲು ಸ್ವಾಗತಿಸಿ ಪ್ರಸ್ತಾವನೆಗೈದರು. ಅರ್ಜುನ್ ಮಾಡೂರು ಕಾರ್ಯಕ್ರಮ ನಿರ್ವಹಿಸಿದರು. ದೀಪಕ್ ಬಿಜಗುರಿ ವಂದಿಸಿದರು.

ಇದನ್ನೂ ಓದಿ :ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕರಾವಳಿಯ ವೈದ್ಯ ಭೂಷಣ ಡಾ.ಬಿ.ಎಂ.ಹೆಗ್ಡೆಯವರಿಗೆ ಕೇಂದ್ರ ಸರಕಾರದ ಅತ್ಯುನ್ನತ ಗೌರವ ಪ್ರಶಸ್ತಿ ‘ಪದ್ಮವಿಭೂಷಣ’ ಘೋಷಣೆ -Vishwanews24

Vishwa News 24

Recent Posts

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ – vishwanews24

ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್‌ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ :  ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…

13 hours ago

ಕೊಟೇಶ್ವರ ರಸ್ತೆ ಅಪಘಾತ : ಲಾರಿ ಚಾಲಕನ ಬಂಧನ – vishwanews24

ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…

13 hours ago

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ – vishwanews24

ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ  ಉದ್ಘಾಟನೆಗೆ ಕೊನೆಗೂ ದಿನಾಂಕ…

13 hours ago

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ – vishwanews24

ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್‌ಪಾಲ್ ಯಾದವ್‌ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…

13 hours ago

ರೈಲು ಟಿಕೆಟ್‌ಗೆ ಹೊಸ ನಿಯಮ: ಪ್ರಯಾಣಿಕರಿಗೆ ಭಾರತೀಯ ರೈಲ್ವೆಯಿಂದ ಹೊಸ ಮಾರ್ಗಸೂಚಿ ಪ್ರಕಟ – vishwanews24

ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್​ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…

14 hours ago

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ – vishwanews24

ಸುರತ್ಕಲ್‌ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…

14 hours ago