Featured

ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ  :ಶರಣ್ ಪಂಪ್‍ವೆಲ್ -Vishwanews24

ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ  :ಶರಣ್ ಪಂಪ್‍ವೆಲ್ -Vishwanews24

ಮಂಗಳೂರು, : ”ಭಾರತ ದೇಶವನ್ನು ನಾಶ ಮಾಡಬೇಕಾದರೆ ಹಿಂದೂ ಧರ್ಮವನ್ನು ನಾಶ ಮಾಡಿದರೆ ಸಾಕು ಈ ನಿಟ್ಟಿನಲ್ಲಿ ದೇಶವನ್ನು ಇಸ್ಲಾಮಿಕರಣ ಮಾಡುವ ಷಡ್ಯಂತ್ರ ನಡೆಯುತ್ತಿದ್ದು ಇದರ ಒಂದು ಆಂಗವಾಗಿ ಹಿಂದೂ ಧಾರ್ಮಿಕ ಕೇಂದ್ರಗಳಿಗೆ ಹಾನಿ ಮಾಡುವ ಕಾರ್ಯ ನಡೆಯುತ್ತಿದೆ. ಈ ನಿಟ್ಟಿನಲ್ಲಿಲವ್ ಜಿಹಾದ್, ಲ್ಯಾಂಡ್ ಜಿಹಾದ್ ಮೂಲಕ ಹಿಂದೂಗಳನ್ನು ಅತಂತ್ರಗೊಳಿಸುವ ಕಾರ್ಯ ನಡೆಯುತ್ತಿದೆ. ಇಂತಹ ಘಟನೆಗಳು ನಡೆದಾಗ ಕೇವಲ ಹಿಂದೂ ಸಂಘಟನೆಗಳು ಮಾತ್ರ ಪ್ರತಿಭಟಿಸುವುದಲ್ಲ ಇಡೀ ಹಿಂದೂ ಸಮಾಜ ಒಟ್ಟಾಗಿ ನಿಂತು ಪ್ರತಿಭಟಿಸುವ ಕಾರ್ಯ ಆಗಬೇಕು” ಎಂದು ವಿಶ್ವ ಹಿಂದೂ ಪರಿಷತ್‍ನ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ಹೇಳಿದರು.

ವಿ.ಹಿಂಪ ಬಜರಂಗದಳ ಉಳ್ಳಾಲ ಪ್ರಖಂಡ ಉಳ್ಳಾಲ ಪರಿಸರದಲ್ಲಿ ನಡೆಯುವ ಹಿಂದೂ ವಿರೋಧಿ ಕೃತ್ಯಗಳನ್ನು ಹಾಗೂ ಹಿಂದೂ ಧಾರ್ಮಿಕ ಕ್ಷೇತ್ರಗಳನ್ನು ಅಪವಿತ್ರಗೊಳಿಸುತ್ತಿರುವ ಹುನ್ನಾರದ ವಿರುದ್ದ ತೊಕ್ಕೊಟ್ಟು ಬಸ್ಸು ನಿಲ್ದಾಣದಲ್ಲಿ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಇದನ್ನೂ ಓದಿ : 72ನೇ ಗಣರಾಜ್ಯೋತ್ಸವ ಸಂಭ್ರಮ: ರಾಜಪಥ್‌ನಲ್ಲಿ ರಾಷ್ಟ್ರಪತಿ ಕೋವಿಂದ್‌ರಿಂದ ಧ್ವಜಾರೋಹಣ -Vishwanews24

”ಮತಾಂಧ ಶಕ್ತಿಗಳು ಹಿಂದೂಗಳ ಮೇಲೆ ದಾಳಿ ನಡೆಸಲು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರಯೋಗ ಶಾಲೆಯನ್ನಾಗಿ ಮಾಡುವ ಹುನ್ನಾರ ನಡೆಸುತ್ತಿದ್ದಾರೆ. ಹಿಂದೂಗಳ ವಿರುದ್ಧ ನಡೆಯುವ ಹಿಂದೂ ವಿರೋಧಿ ಘಟನೆಗಳು ಆರಂಭವಾಗುವುದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಅದನ್ನು ರಾಜ್ಯದಾದ್ಯಂತ ನಡೆಸುತ್ತಾರೆ. ಹಿಂದೂ ಮುಖಂಡರ ಹತ್ಯೆಯೂ ನಡೆದದ್ದು ಜಿಲೆಯಲ್ಲಿ ಬಳಿಕ ರಾಜ್ಯದಾದ್ಯಂತ ಹಿಂದೂ ಮುಖಂಡರ ಹತ್ಯೆ ನಡೆಯಿತು. ಇದೀಗ ಹಿಂದೂ ಧಾರ್ಮಿಕ ಕೇಂದ್ರಗಳ ಮೇಲೆ ದುಷ್ಕೃತ್ಯಗಳು ನಡೆದರೂ ನಾವು ಇನ್ನೂ ಎಚ್ಚೆತ್ತಿಲ್ಲ. ಸಾಮಾಜಿಕ ಜಾಲತಾಣದಲ್ಲಿ ಒಂದು ಧರ್ಮದ ದೇವರ ವಿರುದ್ಧ ಪೋಸ್ಟ್‌ ಹಾಕಿದಾಗ ಮನೆ, ಪೊಲೀಸ್ ಠಾಣೆ ಸೇರಿದಂತೆ ಇಡೀ ಊರನ್ನೇ ಸುಟ್ಟು ದಾಂದಲೆ ಮಾಡಿದ್ದಾರೆ ಈ ನಿಟ್ಟಿನಲ್ಲಿ ಹಿಂದೂ ಧರ್ಮದ ಬಾಂದವರು ಒಟ್ಟಾಗಿ ಹೋರಾಟ ನಡೆಸುವುದು ಅನಿವಾರ್ಯವಾಗಿದೆ” ಎಂದರು.

”ಇತ್ತೀಚೆಗೆ ರಾಜಕೀಯ ಪಕ್ಷದ ಮುಖಂಡರೊಬ್ಬರ ‘ನೀ ತಾಂಟ್ರೆ ನಾ ತಾಂಟ್ರೆ’ ಭಾಷಣ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಇದೀಗ ಆ ವ್ಯಕ್ತಿ ಕಾಮಿಡಿ ಪೀಸ್ ಆಗುತ್ತಿದ್ದಾನೆ. ಹಿಂದೂ ಧರ್ಮ ಲಕ್ಷಾಂತರ ವರ್ಷದಿಂದ ಭಾರತದಲ್ಲಿ ಇದೆ. ಸಾವಿರಾರು ವರ್ಷಗಳ ಹಿಂದೆ ಹುಟ್ಟಿದ ಧರ್ಮದವನೊಬ್ಬ ಇಂತಹ ಹೇಳಿಕೆಗಳು ಹಾಸ್ಯಸ್ಪದವಾಗಿದ್ದು, ಹಿಂದೂ ಧರ್ಮ ಹೋರಾಟಕ್ಕೆ ಸಿದ್ಧವಾಗಿದೆ. ಈಗಾಗಲೇ ಆಯೋಧ್ಯೆ ಆಯಿತು, ಮುಂದಿನ ಸರದಿ ಕಾಶಿ ಮತ್ತು ಮಥುರವಾಗಿದ್ದು ತಾಕತ್ತಿದ್ದರೆ ನಿಲ್ಲಿಸಲು ತಾಂಟಲು ಸಿದ್ಧರಾಗಿ” ಎಂದು ಸವಾಲೆಸೆದರು.

ಭಜರಂಗದಳ ಸಂಚಾಲಕ ಗುರು ಉಳ್ಳಾಲಬೈಲು ಸ್ವಾಗತಿಸಿ ಪ್ರಸ್ತಾವನೆಗೈದರು. ಅರ್ಜುನ್ ಮಾಡೂರು ಕಾರ್ಯಕ್ರಮ ನಿರ್ವಹಿಸಿದರು. ದೀಪಕ್ ಬಿಜಗುರಿ ವಂದಿಸಿದರು.

ಇದನ್ನೂ ಓದಿ :ಮಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೆಸರು ಗಳಿಸಿರುವ ಕರಾವಳಿಯ ವೈದ್ಯ ಭೂಷಣ ಡಾ.ಬಿ.ಎಂ.ಹೆಗ್ಡೆಯವರಿಗೆ ಕೇಂದ್ರ ಸರಕಾರದ ಅತ್ಯುನ್ನತ ಗೌರವ ಪ್ರಶಸ್ತಿ ‘ಪದ್ಮವಿಭೂಷಣ’ ಘೋಷಣೆ -Vishwanews24

Vishwa News 24

Recent Posts

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು – vishwanews24

ವಿಟ್ಲ:  ಕಾರು ಮತ್ತು ದ್ವಿಚಕ್ರ ವಾಹನ ಭೀಕರ ಅಪಘಾತ; ಸವಾರ ಮೃತ್ಯು ವಿಟ್ಲ: ಮಿತ್ತೂರು ಸಮೀಪದ ಪರ್ಲೋಟು ಎಂಬಲ್ಲಿ ಸಂಭವಿಸಿದ…

3 hours ago

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ – vishwanews24

ಉಡುಪಿ: ಸೆ. 4ರಂದು ಶ್ರೀಕೃಷ್ಣ ಜನ್ಮಾಷ್ಟಮಿ ; ಸೆ.5ರಂದು ವಿಟ್ಲಪಿಂಡಿ ಉತ್ಸವ ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಶಿರೂರು ಮಠದ…

4 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ : ಆರೋಪಿ ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ – vishwanews24

ರೇಣುಕಾಸ್ವಾಮಿ ಕೊಲೆ ಪ್ರಕರಣ : ಪ್ರದೋಷ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್ ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ…

4 hours ago

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ – vishwanews24

ಜವಾಬ್ದಾರಿಗಳನ್ನು ಹೊಸ ಪೀಳಿಗೆಗೆ ಹಸ್ತಾಂತರಿಸುವ ಸಮಯ ಬಂದಿದೆ : ನಿತಿನ್ ಗಡ್ಕರಿ ಮುಂಬೈ: ಈ ಹಿಂದೆ ಮಾಡುತ್ತಿದ್ದಷ್ಟು ಕೆಲಸವನ್ನು ಇನ್ನು…

4 hours ago

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ – vishwanews24

ಹಬ್ಬಗಳ ಹಿನ್ನೆಲೆ : ದಕ್ಷಿಣ ಕನ್ನಡ ಪೊಲೀಸರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ರಾತ್ರಿ 11:30 ಗಂಟೆಯ ನಂತರ ಮೆರವಣಿಗೆ ,…

4 hours ago

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ – vishwanews24

ಸೆ. 1 ರಿಂದ 10 ರವರೆಗೆ ಬೃಹತ್ ಪಾದಯಾತ್ರೆ : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬೆಂಗಳೂರು : ರಾಜ್ಯ ಸರ್ಕಾರದ…

5 hours ago