Featured

ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಯಶ್ ಪಾಲ್ ಸುವರ್ಣ – Vishwanews24

ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ : ಯಶ್ ಪಾಲ್ ಸುವರ್ಣ – Vishwanews24

ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಹಿಂದೂ ಕನಯ್ಯ ಲಾಲ್ ರವರ ಅಮಾನುಷ ಕಗ್ಗೊಲೆ ಮತಾಂಧ ಶಕ್ತಿಗಳ ವಿಕೃತ ಐಸಿಸ್ ಮಾನಸಿಕತೆಗೆ ಸಾಕ್ಷಿಯಾಗಿದ್ದು, ಘಟನೆಯ ಬಗ್ಗೆ ಜಾತ್ಯತೀತವಾದಿ, ಸ್ವಯಂ ಘೋಷಿತ ವಿಚಾರವಾದಿಗಳ ದಿವ್ಯ ಮೌನ ದೇಶದ ಆಂತರಿಕ ಭದ್ರತೆಗೆ ಆತಂಕಕಾರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೂಪುರ್ ಶರ್ಮ ಹೇಳಿಕೆಯನ್ನು ಸಮರ್ಥಿಸಿದ ಎಂಬ ಏಕೈಕ ಕಾರಣಕ್ಕೆ ಅಮಾನುಷವಾಗಿ ಹತ್ಯೆ ಮಾಡಿ, ಘಟನೆಯ ವೀಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿ ಯವರನ್ನೂ ಹತ್ಯೆ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾದಳದ ಮೂಲಕ ತನಿಖೆ ನಡೆಯುತ್ತಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮದ ಭರವಸೆಯಿದೆ. ಸಂಘಟಿತ ಹಿಂದೂ ಸಮಾಜ ಮಾತ್ರ ಈ ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ದಿಟ್ಟ ಉತ್ತರ ನೀಡಲು ಸಾಧ್ಯವಿದೆ.

ಇಸ್ಲಾಮೀ ಭಯೋತ್ಪಾದನೆ ಮೂಲಕ ಸಮಾಜದಲ್ಲಿ ಆಂತರಿಕ ಭದ್ರತೆಗೆ ಸವಾಲೊಡ್ಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಮತೀಯವಾದಿಗಳ ವಿರುದ್ಧ ಬಹು ಸಂಖ್ಯಾತ ಸಮಾಜ ಸ್ವಯಂ ಜಾಗೃತರಾಗಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ.

ಲವ್ ಜೆಹಾದ್, ಹಿಜಾಬ್ ಮುಂತಾದ ವಿವಾದಗಳನ್ನು ಸೃಷ್ಟಿಸಿ ದೇಶದಾದ್ಯಂತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿ ರಾಜಸ್ಥಾನದ ಅಮಾನುಷ ಘಟನೆ ನಡೆದಿದೆ.

ರಾಷ್ಟೀಯವಾದಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಬೆದರಿಕೆಯ ಮೂಲಕ ದೇಶಪ್ರೇಮಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುವ ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದ್ದಾರೆ.

Vishwa News 24

Recent Posts

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಪ್ರಯಾಣಿಕರು ಪಾರು -vishwanews24

ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…

2 hours ago

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ -vishwanews24

ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…

2 hours ago

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ -vishwanews24

ಸಕಲೇಶಪುರ–ಸುಬ್ರಹ್ಮಣ್ಯ  ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…

2 hours ago

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

18 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

18 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

18 hours ago