ರಾಜಸ್ಥಾನದ ಉದಯಪುರದಲ್ಲಿ ಅಮಾಯಕ ಹಿಂದೂ ಕನಯ್ಯ ಲಾಲ್ ರವರ ಅಮಾನುಷ ಕಗ್ಗೊಲೆ ಮತಾಂಧ ಶಕ್ತಿಗಳ ವಿಕೃತ ಐಸಿಸ್ ಮಾನಸಿಕತೆಗೆ ಸಾಕ್ಷಿಯಾಗಿದ್ದು, ಘಟನೆಯ ಬಗ್ಗೆ ಜಾತ್ಯತೀತವಾದಿ, ಸ್ವಯಂ ಘೋಷಿತ ವಿಚಾರವಾದಿಗಳ ದಿವ್ಯ ಮೌನ ದೇಶದ ಆಂತರಿಕ ಭದ್ರತೆಗೆ ಆತಂಕಕಾರಿ ಎಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನೂಪುರ್ ಶರ್ಮ ಹೇಳಿಕೆಯನ್ನು ಸಮರ್ಥಿಸಿದ ಎಂಬ ಏಕೈಕ ಕಾರಣಕ್ಕೆ ಅಮಾನುಷವಾಗಿ ಹತ್ಯೆ ಮಾಡಿ, ಘಟನೆಯ ವೀಡಿಯೋ ಮಾಡಿ ಪ್ರಧಾನಿ ನರೇಂದ್ರ ಮೋದಿ ಯವರನ್ನೂ ಹತ್ಯೆ ಬೆದರಿಕೆಯೊಡ್ಡಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ರಾಷ್ಟೀಯ ತನಿಖಾದಳದ ಮೂಲಕ ತನಿಖೆ ನಡೆಯುತ್ತಿದ್ದು ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮದ ಭರವಸೆಯಿದೆ. ಸಂಘಟಿತ ಹಿಂದೂ ಸಮಾಜ ಮಾತ್ರ ಈ ಐಸಿಸ್ ಮಾನಸಿಕತೆಯ ಮತಾಂಧ ಶಕ್ತಿಗಳಿಗೆ ದಿಟ್ಟ ಉತ್ತರ ನೀಡಲು ಸಾಧ್ಯವಿದೆ.
ಇಸ್ಲಾಮೀ ಭಯೋತ್ಪಾದನೆ ಮೂಲಕ ಸಮಾಜದಲ್ಲಿ ಆಂತರಿಕ ಭದ್ರತೆಗೆ ಸವಾಲೊಡ್ಡಿ ತಮ್ಮ ಅಸ್ತಿತ್ವ ಉಳಿಸಿಕೊಳ್ಳಲು ಯತ್ನಿಸುತ್ತಿರುವ ಮತೀಯವಾದಿಗಳ ವಿರುದ್ಧ ಬಹು ಸಂಖ್ಯಾತ ಸಮಾಜ ಸ್ವಯಂ ಜಾಗೃತರಾಗಬೇಕಾದ ಅನಿವಾರ್ಯ ಸನ್ನಿವೇಶ ನಿರ್ಮಾಣವಾಗಿದೆ.
ಲವ್ ಜೆಹಾದ್, ಹಿಜಾಬ್ ಮುಂತಾದ ವಿವಾದಗಳನ್ನು ಸೃಷ್ಟಿಸಿ ದೇಶದಾದ್ಯಂತ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಹದಗೆಡಿಸುವ ಷಡ್ಯಂತ್ರದ ಮುಂದುವರಿದ ಭಾಗವಾಗಿ ರಾಜಸ್ಥಾನದ ಅಮಾನುಷ ಘಟನೆ ನಡೆದಿದೆ.
ರಾಷ್ಟೀಯವಾದಿ ಹಿಂದೂ ಕಾರ್ಯಕರ್ತರ ಮೇಲೆ ನಿರಂತರ ಬೆದರಿಕೆಯ ಮೂಲಕ ದೇಶಪ್ರೇಮಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಗ್ಗಿಸಲು ಯತ್ನಿಸುವ ಮತೀಯವಾದಿ ಶಕ್ತಿಗಳಿಗೆ ಜಾಗೃತ ಹಿಂದೂ ಸಮಾಜ ತಕ್ಕ ಉತ್ತರ ನೀಡಲಿದೆ ಎಂದು ತಿಳಿಸಿದ್ದಾರೆ.
ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…
ಟೋಲ್ ಪ್ಲಾಜಾಗೆ ಎಲ್ಪಿಜಿ ಟ್ಯಾಂಕರ್ ಡಿಕ್ಕಿ: ಐವರು ದುರ್ಮರಣ ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ ನವದೆಹಲಿ: ಉತ್ತರ ಪ್ರದೇಶದ ಕೌಶಂಬಿ…
ಕೊಪ್ಪಳ : ಅಂಜನಾದ್ರಿ ದೇಗುಲಕ್ಕೆ ಖ್ಯಾತ ಕ್ರಿಕೆಟಿಗ ರಾಹುಲ್ ದ್ರಾವಿಡ್ ದಂಪತಿ ಭೇಟಿ ಕೊಪ್ಪಳ: ಖ್ಯಾತ ಕ್ರಿಕೆಟ್ ಆಟಗಾರ, ಟೀಂ…
ತುಳು ಸಿನಿಮಾ ನಿರ್ಮಾಣ ಮಾಡಿದ ಗಣೇಶ್ ಪತ್ನಿ ಶಿಲ್ಪಾ ಗೋಲ್ಡನ್ ಮೂವೀಸ್ ಲಾಂಛನದಲ್ಲಿ ಸದಭಿರುಚಿ ಚಿತ್ರಗಳನ್ನು ನಿರ್ಮಾಣ ಮಾಡುತ್ತಾ ಬರುತ್ತಿರುವ…
ಬೆಂಗಳೂರು: ಡೇ ಕೇರ್ ಸೆಂಟರ್ ಪ್ರಕರಣ ; ಇಬ್ಬರು ಮಹಿಳಾ ಸಿಬ್ಬಂದಿ ಬಂಧನ ಬೆಂಗಳೂರು: ಇಲ್ಲಿನ ಬ್ರೂಕ್ಫೀಲ್ಡ್ನಲ್ಲಿರುವ ಡೇಕೇರ್ ಸೆಂಟರ್…
ಮಂಗಳೂರು : ಜೈಲಿನೊಳಗೆ ಗಾಂಜಾ ಎಸೆತ ಪ್ರಕರಣ ; ಓರ್ವನ ಬಂಧನ ಮಂಗಳೂರು: ನಗರದ ಜಿಲ್ಲಾ ಕಾರಾಗೃಹದ ಆವರಣದೊಳಗೆ ಗಾಂಜಾ…