ಬೀದರ್: ಬಾಂಬ್ ಸ್ಫೋಟದ ಕೃತ್ಯ ಮಾಡಿದವರು ಎಲ್ಲಿ ಇದ್ದರೂ ಹುಡುಕಿ ಕಾನೂನು ಕ್ರಮ ಜರಗಿಸುತ್ತೇವೆ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಯಾರೇ ಆರೋಪಿಗಳು ಇದ್ದರೂ ಕಠಿಣವಾದ ಶಿಕ್ಷೆ ಕೊಡುತ್ತೇವೆ. ಜೊತೆಗೆ ಮತ್ತೆ ಈ ರೀತಿ ಪ್ರಕರಣಗಳು ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದರು.
ಇನ್ನು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ದೇಶ ವಿರೋಧ, ಸಮಾಜಘಾತುಕ ಶಕ್ತಿಗಳು ಇದ್ದಾರೋ ಅಂಥವರ ಮೇಲೆ ಅತ್ಯಂತ ಕಠಿಣವಾದ ಕ್ರಮ ಜರಗಿಸುತ್ತೇವೆ. ದೊಡ್ಡ ವ್ಯಕ್ತಿ ಇದ್ದರೂ, ಸಂಘಟನೆಗಳಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಘೋಷಣೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುತ್ತಿದ್ದೇವೆ. ರಾಷ್ಟ್ರಪ್ರೇಮ, ದೇಶಭಕ್ತಿ ಯಾರ ಸ್ವತ್ತಲ್ಲಾ. 140 ಕೋಟಿ ಜನರು ರಾಷ್ಟ್ರ ಭಕ್ತರೇ ಇದ್ದಾರೆ ಎಂದು ಬಿಜೆಪಿ ನಾಯಕರಿಗೆ ಖಂಡ್ರೆ ಟಾಂಗ್ ನೀಡಿದರು. ಇದರ ಹಿಂದೆ ಯಾರ ಕೈವಾಡವಿದೆ? ಯಾರು ಆರೋಪ ಮಾಡುತ್ತಾರೆ ಅವರ ಕೈವಾಡವಿರುತ್ತೆ ಎಂದು ಬಿಜೆಪಿ (BJP) ವಿರುದ್ಧ ಖಂಡ್ರೆ ಗಂಭೀರ ಆರೋಪ ಮಾಡಿದರು.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…