ಬೀದರ್: ಬಾಂಬ್ ಸ್ಫೋಟದ ಕೃತ್ಯ ಮಾಡಿದವರು ಎಲ್ಲಿ ಇದ್ದರೂ ಹುಡುಕಿ ಕಾನೂನು ಕ್ರಮ ಜರಗಿಸುತ್ತೇವೆ ಎಂದು ಉಸ್ತುವಾರಿ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ರಾಮೇಶ್ವರಂ ಕೆಫೆ ಬ್ಲಾಸ್ಟ್ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತನಿಖೆ ಮಾಡಿ ಯಾರೇ ಆರೋಪಿಗಳು ಇದ್ದರೂ ಕಠಿಣವಾದ ಶಿಕ್ಷೆ ಕೊಡುತ್ತೇವೆ. ಜೊತೆಗೆ ಮತ್ತೆ ಈ ರೀತಿ ಪ್ರಕರಣಗಳು ಆಗದಂತೆ ಸರ್ಕಾರ ನೋಡಿಕೊಳ್ಳುತ್ತದೆ ಎಂದರು.
ಇನ್ನು ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಯಾರು ದೇಶ ವಿರೋಧ, ಸಮಾಜಘಾತುಕ ಶಕ್ತಿಗಳು ಇದ್ದಾರೋ ಅಂಥವರ ಮೇಲೆ ಅತ್ಯಂತ ಕಠಿಣವಾದ ಕ್ರಮ ಜರಗಿಸುತ್ತೇವೆ. ದೊಡ್ಡ ವ್ಯಕ್ತಿ ಇದ್ದರೂ, ಸಂಘಟನೆಗಳಿದ್ದರೂ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಘೋಷಣೆ ಹಾಕಿದ ವ್ಯಕ್ತಿಯನ್ನು ಪತ್ತೆ ಹಚ್ಚುತ್ತಿದ್ದೇವೆ. ರಾಷ್ಟ್ರಪ್ರೇಮ, ದೇಶಭಕ್ತಿ ಯಾರ ಸ್ವತ್ತಲ್ಲಾ. 140 ಕೋಟಿ ಜನರು ರಾಷ್ಟ್ರ ಭಕ್ತರೇ ಇದ್ದಾರೆ ಎಂದು ಬಿಜೆಪಿ ನಾಯಕರಿಗೆ ಖಂಡ್ರೆ ಟಾಂಗ್ ನೀಡಿದರು. ಇದರ ಹಿಂದೆ ಯಾರ ಕೈವಾಡವಿದೆ? ಯಾರು ಆರೋಪ ಮಾಡುತ್ತಾರೆ ಅವರ ಕೈವಾಡವಿರುತ್ತೆ ಎಂದು ಬಿಜೆಪಿ (BJP) ವಿರುದ್ಧ ಖಂಡ್ರೆ ಗಂಭೀರ ಆರೋಪ ಮಾಡಿದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…