Featured

ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ :ಸಿದ್ದರಾಮಯ್ಯ -Vishwanews24

ನಾಡಿನ ಜನ ಯಾಕಾದ್ರೂ ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ..

ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ

ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ :ಸಿದ್ದರಾಮಯ್ಯ -Vishwanews24

ಬೆಂಗಳೂರು, : ನಾಡಿನ ಜನ ಯಾಕಾದ್ರೂ ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.

ರಾಜ್ಯ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮೂಲಕ ಟೀಕೆ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ಹೇಳಿದ್ದಾರೆ.

ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.

ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್‌ಟಾಪ್‌, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರೋದು ಎಂದು ಹೇಳಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಟೀಕಿಸಿದ್ದಾರೆ.

Vishwa News 24

Recent Posts

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ – vishwanews24

ವಿಧಾನ ಪರಿಷತ್‌ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌…

50 minutes ago

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ ಪ್ರಕ್ರಿಯೆಗೆ ಚಾಲನೆ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ – vishwanews24

15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ :  ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…

1 hour ago

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ – vishwanews24

ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…

1 hour ago

ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ – vishwanews24

 ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…

2 hours ago

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ–ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ – vishwanews24

ಉಡುಪಿ:ಮಾದಕ ದ್ರವ್ಯ ಪ್ರಕರಣ :  ಪಿಐಟಿ ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…

2 hours ago

ಕುದುರೆಮುಖ ಆಫ್ ರೋಡಿಂಗ್ ಚಟುವಟಿಕೆ ವಿರುದ್ಧ ತೀವ್ರ ಆಕ್ರೋಶ – vishwanews24

ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…

4 hours ago