ಬೆಂಗಳೂರು, : ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯನವರು ಹೇಳಿದ್ದಾರೆ.
ರಾಜ್ಯ ಸರ್ಕಾರದ ವಿರುದ್ದ ಸರಣಿ ಟ್ವೀಟ್ ಮೂಲಕ ಟೀಕೆ ಮಾಡಿರುವ ಅವರು, ರಾಜ್ಯ ಬಿಜೆಪಿ ಸರ್ಕಾರದ ದುರಾಡಳಿತ, ಜನವಿರೋಧಿ ನೀತಿಗಳಿಂದಾಗಿ ನಾಡಿನ ಜನ ಯಾಕಾದ್ರೂ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೆವೋ ಎಂದು ಪರಿತಪಿಸುತ್ತಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂಬ ಚರ್ಚೆ ರಾಜ್ಯದ ಉದ್ದಗಲಕ್ಕೂ ಆರಂಭವಾಗಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಯಡಿಯೂರಪ್ಪ ಅವರ ಕುಟುಂಬ ಮತ್ತೊಮ್ಮೆ ಭ್ರಷ್ಟಾಚಾರ ಪ್ರಕರಣದಲ್ಲಿ ಭಾಗಿಯಾಗಿದೆ ಎನ್ನುವುದಕ್ಕೆ ಮಹತ್ವದ ಸಾಕ್ಷಿಗಳು ಲಭ್ಯವಾಗಿದೆ. ಮುಖ್ಯಮಂತ್ರಿಗಳು ತಾವು ಪ್ರಾಮಾಣಿಕರಾಗಿದ್ದರೆ ಈ ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ತಂಡಕ್ಕೆ ವಹಿಸಲು ಏಕೆ ನಿರಾಕರಿಸುತ್ತಿದ್ದರು? ಎಂದು ಪ್ರಶ್ನಿಸಿದ್ದಾರೆ.
ಒಂದೆಡೆ ಕೊರೊನಾದಿಂದ ಜನ ಸಾಯುತ್ತಿದ್ದಾರೆ, ಇತ್ತ ಸರ್ಕಾರ ಲೂಟಿಯಲ್ಲಿ ತೊಡಗಿದೆ. ಬಡ ವಿದ್ಯಾರ್ಥಿಗಳಿಗೆ ವಿತರಿಸುವ ಲ್ಯಾಪ್ಟಾಪ್, ವೈದ್ಯಕೀಯ ಉಪಕರಣಗಳ ಖರೀದಿ ಸೇರಿ ಎಲ್ಲಿ ಸಾಧ್ಯವೋ ಅಲ್ಲೆಲ್ಲಾ ಬರೀ ಭ್ರಷ್ಟಾಚಾರ. ಹೆಣಗಳ ಮೇಲೆ ದುಡ್ಡು ಮಾಡುವ ಇಂಥ ಸರ್ಕಾರವನ್ನು ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಇದೇ ಮೊದಲು ನೋಡುತ್ತಿರೋದು ಎಂದು ಹೇಳಿದ್ದಾರೆ.
ರಾಜ್ಯ ಬಿಜೆಪಿ ಸರ್ಕಾರ ಸಾಲದ ಮೇಲೆ ಸಾಲ ಮಾಡಿ ರಾಜ್ಯವನ್ನು ದಿವಾಳಿ ಮಾಡಲು ಹೊರಟಿದೆ. ಕೇಂದ್ರದಿಂದ ಬರಬೇಕಾದ ಯಾವ ಅನುದಾನವನ್ನೂ ಕೇಳುವ ಧೈರ್ಯ ಬಿಜೆಪಿ ಸಚಿವರಿಗಾಗಲೀ, ಶಾಸಕರಿಗಾಗಲೀ ಅಥವಾ ಸಂಸದರಿಗಾಗಲೀ ಇಲ್ಲ. ನಾಡಿನ ಜನರ ಪರ ಧ್ವನಿ ಎತ್ತಲಾಗದ ಹೇಡಿ ಸರ್ಕಾರ ರಾಜ್ಯದಲ್ಲಿ ಅಸ್ತಿತ್ವದಲ್ಲಿದೆ ಎಂದು ಟೀಕಿಸಿದ್ದಾರೆ.
ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…
ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…
ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…
ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…
ಧರ್ಮಸ್ಥಳ ಪ್ರಕರಣ : ವಿಠಲ್ ಗೌಡ ವಿರುದ್ಧ ಅರೆಸ್ಟ್ ವಾರಂಟ್: ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…