ಉಡುಪಿ

ಮತ್ತೆ ಪ್ರಾರಂಭವಾಗಿದೆ ನಕ್ಸಲರ ಓಡಾಟ; ಉಡುಪಿ ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್ ಘೋಷಣೆ – Vishwanews24

ಮತ್ತೆ ಪ್ರಾರಂಭವಾಗಿದೆ ನಕ್ಸಲರ ಓಡಾಟ; ಉಡುಪಿ ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್ ಘೋಷಣೆ

ಉಡುಪಿ/ಚಿಕ್ಕಮಗಳೂರು, (Vishwanews24): ನಕ್ಸಲರ ಚಟುವಟಿಕೆ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದೆ. ಇವೆರಡು ಜಿಲ್ಲೆಯಲ್ಲಿ ಓಡಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ಜಿಲ್ಲೆಗಳ ಕೆಲ ಭಾಗಗಳಲ್ಲಿ 5 ದಿನ ಹೈ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸುವುದರೊಂದಿಗೆ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್)ಗೆ ಸೂಚಿಸಲಾಗಿದೆ. ಕೇರಳದಿಂದ ನಕ್ಸಲರು ಉಡುಪಿ ಜಿಲ್ಲೆಯ ಬೈಂದೂರಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.

ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರು ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಓಡಾಟ ನಡೆಸುತ್ತಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರಿಗೆ ನಕ್ಸಲ್ ಓಡಾಟದ ಮಾಹಿತಿ ದೊರೆತ ಬೆನ್ನಲ್ಲೇ, ವರ್ಷಗಳ ಬಳಿಕ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಆರಂಭಗೊಳ್ಳುವ ಸಾಧ್ಯತೆ ಇದೆ.

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತ ಬಿ.ಜಿ ಕೃಷ್ಣಮೂರ್ತಿ ನಂತರ ರಾಜ್ಯದ ನಕ್ಸಲ್ ನಾಯಕತ್ವವನ್ನು ವಹಿಸಿಕೊಂಡಿದ್ದಾನೆ. ಇನ್ನು ಕಳೆದ ಕಳೆದ ಒಂದು ತಿಂಗಳಿನ ಹಿಂದೆ ಕೇರಳದ ಥಂಡರ್ಕೂಲ್‍ ನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಮಧ್ಯೆ ನಕ್ಸಲರು ಕರ್ನಾಟಕವನ್ನು ಪ್ರವೇಶಿಸಿದ್ದಾರೆ ಎನ್ನಲಾಗುತ್ತಿದೆ.

Vishwa News 24

Recent Posts

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

6 minutes ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

54 minutes ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

1 hour ago

ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! vishwanews24

ಕರಾವಳಿ-ಮುಂಬೈ ಪ್ರಯಾಣಿಕರಿಗೆ ಸಿಹಿ ಸುದ್ದಿ.. ಮಂಗಳೂರು-ಬಾಂದ್ರಾ ಟರ್ಮಿನಸ್‌ಗೆ ಶೀಘ್ರ ಹೊಸ ರೈಲು ಸೇವೆ ! ಮಂಗಳೂರು: ಮಂಗಳೂರಿನಿಂದ ವಸಾಯ್ ರೋಡ್…

1 hour ago

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ – vishwanews24

ಡಿವೈಡರ್ ದಾಟಿ ಓಮ್ನಿಗೆ ಗೂಡ್ಸ್‌ ವಾಹನ ಡಿಕ್ಕಿ :  ಐವರು ದುರ್ಮರಣ‌ ಕೊಪ್ಪಳ: ಗೂಡ್ಸ್‌ ವಾಹನವೊಂದು ಡಿವೈಡರ್ ದಾಟಿ ಓಮ್ನಿಗೆ…

2 hours ago

ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು – vishwanews24

ಮಲ್ಪೆ ಪ್ರಕರಣ: ಪ್ರಮೋದ್ ಮಧ್ವರಾಜ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು ಬೆಂಗಳೂರು: ಕಳೆದ ವರ್ಷ ಮಲ್ಪೆ ಬಂದರಿನಲ್ಲಿ ಕಳ್ಳತನ ಮಾಡಿ…

2 hours ago