ಉಡುಪಿ/ಚಿಕ್ಕಮಗಳೂರು, (Vishwanews24): ನಕ್ಸಲರ ಚಟುವಟಿಕೆ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದೆ. ಇವೆರಡು ಜಿಲ್ಲೆಯಲ್ಲಿ ಓಡಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ಜಿಲ್ಲೆಗಳ ಕೆಲ ಭಾಗಗಳಲ್ಲಿ 5 ದಿನ ಹೈ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸುವುದರೊಂದಿಗೆ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್)ಗೆ ಸೂಚಿಸಲಾಗಿದೆ. ಕೇರಳದಿಂದ ನಕ್ಸಲರು ಉಡುಪಿ ಜಿಲ್ಲೆಯ ಬೈಂದೂರಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.
ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರು ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಓಡಾಟ ನಡೆಸುತ್ತಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್, ಬೆಳ್ಕಲ್ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರಿಗೆ ನಕ್ಸಲ್ ಓಡಾಟದ ಮಾಹಿತಿ ದೊರೆತ ಬೆನ್ನಲ್ಲೇ, ವರ್ಷಗಳ ಬಳಿಕ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಆರಂಭಗೊಳ್ಳುವ ಸಾಧ್ಯತೆ ಇದೆ.
ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತ ಬಿ.ಜಿ ಕೃಷ್ಣಮೂರ್ತಿ ನಂತರ ರಾಜ್ಯದ ನಕ್ಸಲ್ ನಾಯಕತ್ವವನ್ನು ವಹಿಸಿಕೊಂಡಿದ್ದಾನೆ. ಇನ್ನು ಕಳೆದ ಕಳೆದ ಒಂದು ತಿಂಗಳಿನ ಹಿಂದೆ ಕೇರಳದ ಥಂಡರ್ಕೂಲ್ ನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಮಧ್ಯೆ ನಕ್ಸಲರು ಕರ್ನಾಟಕವನ್ನು ಪ್ರವೇಶಿಸಿದ್ದಾರೆ ಎನ್ನಲಾಗುತ್ತಿದೆ.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…