ಉಡುಪಿ

ಮತ್ತೆ ಪ್ರಾರಂಭವಾಗಿದೆ ನಕ್ಸಲರ ಓಡಾಟ; ಉಡುಪಿ ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್ ಘೋಷಣೆ – Vishwanews24

ಮತ್ತೆ ಪ್ರಾರಂಭವಾಗಿದೆ ನಕ್ಸಲರ ಓಡಾಟ; ಉಡುಪಿ ಚಿಕ್ಕಮಗಳೂರಿನಲ್ಲಿ 5 ದಿನ ಹೈ ಅಲರ್ಟ್ ಘೋಷಣೆ

ಉಡುಪಿ/ಚಿಕ್ಕಮಗಳೂರು, (Vishwanews24): ನಕ್ಸಲರ ಚಟುವಟಿಕೆ ಚಿಕ್ಕಮಗಳೂರು ಹಾಗೂ ಉಡುಪಿ ಜಿಲ್ಲೆಯಲ್ಲಿ ಮತ್ತೆ ಪ್ರಾರಂಭವಾಗಿದೆ. ಇವೆರಡು ಜಿಲ್ಲೆಯಲ್ಲಿ ಓಡಾಟ ನಡೆಸುತ್ತಿದ್ದಾರೆ ಎಂಬ ಮಾಹಿತಿ ಮೇರೆಗೆ ಈ ಜಿಲ್ಲೆಗಳ ಕೆಲ ಭಾಗಗಳಲ್ಲಿ 5 ದಿನ ಹೈ ಅಲರ್ಟ್ ಘೋಷಿಸಲಾಗಿದೆ.

ಮಲೆನಾಡು ಹಾಗೂ ಕರಾವಳಿ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸುವುದರೊಂದಿಗೆ ತೀವ್ರ ಕಟ್ಟೆಚ್ಚರಿಕೆ ವಹಿಸುವಂತೆ ನಕ್ಸಲ್ ನಿಗ್ರಹ ಪಡೆ (ಎಎನ್ ಎಫ್)ಗೆ ಸೂಚಿಸಲಾಗಿದೆ. ಕೇರಳದಿಂದ ನಕ್ಸಲರು ಉಡುಪಿ ಜಿಲ್ಲೆಯ ಬೈಂದೂರಿಗೆ ಆಗಮಿಸಿರುವ ಶಂಕೆ ವ್ಯಕ್ತವಾಗಿದೆ.

ನಕ್ಸಲ್ ಮುಖಂಡ ಸಾಕೇತ್ ರಾಜನ್ ಸಾವಿನ ಬಳಿಕ ವಿಕ್ರಮ್ ಗೌಡ ತಲೆಮರೆಸಿಕೊಂಡಿದ್ದ. ಇದೀಗ ನಕ್ಸಲ್ ನಾಯಕ ವಿಕ್ರಮ್ ಗೌಡ ಹಾಗೂ ಆತನ ಸಹಚರರು ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಓಡಾಟ ನಡೆಸುತ್ತಿರುವುದಾಗಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ತಂಡ ಬೈಂದೂರು ತಾಲೂಕಿನ ಕೊಲ್ಲೂರು, ಮುದೂರು, ಜಡ್ಕಲ್‌, ಬೆಳ್ಕಲ್‌ ಗ್ರಾಮ ಸುತ್ತಮುತ್ತ ಓಡಾಡಿರುವ ಶಂಕೆ ವ್ಯಕ್ತವಾಗಿದೆ. ಇನ್ನು ಪೊಲೀಸರಿಗೆ ನಕ್ಸಲ್ ಓಡಾಟದ ಮಾಹಿತಿ ದೊರೆತ ಬೆನ್ನಲ್ಲೇ, ವರ್ಷಗಳ ಬಳಿಕ ಮತ್ತೆ ಬೈಂದೂರಿನಲ್ಲಿ ಕೂಂಬಿಂಗ್ ಆರಂಭಗೊಳ್ಳುವ ಸಾಧ್ಯತೆ ಇದೆ.

ಉಡುಪಿಯ ಹೆಬ್ರಿ ಮೂಲದ ವಿಕ್ರಮ್ ಗೌಡ ಸುಮಾರು 20 ವರ್ಷಗಳ ಹಿಂದೆ ನಕ್ಸಲೈಟ್ ಆಗಿದ್ದನು. ಕೇರಳದಲ್ಲಿ ನಕ್ಸಲ್ ಚಟುವಟಿಕೆಗಳನ್ನು ನಡೆಸುತ್ತಿದ್ದ ಈತ ಬಿ.ಜಿ ಕೃಷ್ಣಮೂರ್ತಿ ನಂತರ ರಾಜ್ಯದ ನಕ್ಸಲ್ ನಾಯಕತ್ವವನ್ನು ವಹಿಸಿಕೊಂಡಿದ್ದಾನೆ. ಇನ್ನು ಕಳೆದ ಕಳೆದ ಒಂದು ತಿಂಗಳಿನ ಹಿಂದೆ ಕೇರಳದ ಥಂಡರ್ಕೂಲ್‍ ನಲ್ಲಿ ನಕ್ಸಲರು ಹಾಗೂ ಪೊಲೀಸರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಈ ಮಧ್ಯೆ ನಕ್ಸಲರು ಕರ್ನಾಟಕವನ್ನು ಪ್ರವೇಶಿಸಿದ್ದಾರೆ ಎನ್ನಲಾಗುತ್ತಿದೆ.

Vishwa News 24

Recent Posts

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

42 minutes ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

1 hour ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

3 hours ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

3 hours ago

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ – vishwanews24

ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕೆ. ಭಾಗ್ಯರಾಜ್ ಹೃದಯಾಘಾತದಿಂದ ನಿಧನ ಚೆನ್ನೈ: ತಮಿಳು ಚಿತ್ರರಂಗದ ಹಿರಿಯ ನಟ, ನಿರ್ದೇಶಕ,…

4 hours ago

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ – vishwanews24

ಅಯೋಧ್ಯೆ ರಾಮಮಂದಿರ ದೇಣಿಗೆ ಲೂಟಿ ಪ್ರಕರಣ ಎಚ್ಚರಿಕೆ ಗಂಟೆ: ಕೆ.ಎಸ್. ಈಶ್ವರಪ್ಪ ಶಿವಮೊಗ್ಗ: ಅಯೋಧ್ಯೆ ರಾಮಮಂದಿರದ ದೇಣಿಗೆ ಲೂಟಿ ಆಗಿರುವ…

4 hours ago