ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ.
ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ ಪಾಕಿಸ್ಥಾನದ ಯುದ್ಧ ವಿಮಾನವನ್ನು ತಮ್ಮ ಮಿಗ್ 21 ವಿಮಾನದಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ ಅಭಿನಂದನ್ ಪಾಕಿಸ್ಥಾನ ಪ್ರದೇಶದಲ್ಲಿ ಬಿದ್ದು ಅಲ್ಲಿ ಎರಡು ದಿನಗಳ ಕಾಲ ಯುದ್ಧ ಕೈದಿಯಾಗಿದ್ದರು. ಆ ವೇಳೆ ಅವರ ದೇಹದ ವಿವಿಧ ಭಾಗಗಳಿಗೆ ಗಾಯಗಳೂ ಆಗಿತ್ತು. ಅದಾದ ಆರು ತಿಂಗಳ ನಂತರ ವರ್ತಮಾನ್ ಅವರು ಮತ್ತೆ ಫೈಟರ್ ಕಾಕ್ಪಿಟ್ಗೆ ಮರಳಿದ್ದಾರೆ.
ಜಾಹಿರಾತು
ವೈಮಾನಿಕ ಮುಖಾಮುಖಿಯ ಸಮಯದಲ್ಲಿ ಪಾಕಿಸ್ಥಾನದ ಎಫ್ -16 ಜೆಟ್ ಅನ್ನು ಉರುಳಿಸಿದ್ದಕ್ಕಾಗಿ ಅಭಿನಂದನ್ ಅವರಿಗೆ ಶೌರ್ಯ ಪದಕ ವೀರ ಚಕ್ರವನ್ನು ನೀಡಿ ಪುರಸ್ಕರಿಸಲಾಗಿದೆ.
ಪಾಕಿಸ್ಥಾನದಿಂದ ಹಿಂದಿರುಗಿದ ಕೆಲವು ದಿನಗಳಲ್ಲೇ, ಅಭಿನಂದನ್ ಅವರು ವಾಯುಸೇನೆಯ ಫೈಟರ್ ಕಾಕ್ಪಿಟ್ಗೆ ಮರಳಬೇಕೆಂಬ ಬಯಕೆಯನ್ನು ತೋಡಿಕೊಂಡಿದ್ದರು.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…