ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ.
ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ ಪಾಕಿಸ್ಥಾನದ ಯುದ್ಧ ವಿಮಾನವನ್ನು ತಮ್ಮ ಮಿಗ್ 21 ವಿಮಾನದಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ ಅಭಿನಂದನ್ ಪಾಕಿಸ್ಥಾನ ಪ್ರದೇಶದಲ್ಲಿ ಬಿದ್ದು ಅಲ್ಲಿ ಎರಡು ದಿನಗಳ ಕಾಲ ಯುದ್ಧ ಕೈದಿಯಾಗಿದ್ದರು. ಆ ವೇಳೆ ಅವರ ದೇಹದ ವಿವಿಧ ಭಾಗಗಳಿಗೆ ಗಾಯಗಳೂ ಆಗಿತ್ತು. ಅದಾದ ಆರು ತಿಂಗಳ ನಂತರ ವರ್ತಮಾನ್ ಅವರು ಮತ್ತೆ ಫೈಟರ್ ಕಾಕ್ಪಿಟ್ಗೆ ಮರಳಿದ್ದಾರೆ.
ಜಾಹಿರಾತು
ವೈಮಾನಿಕ ಮುಖಾಮುಖಿಯ ಸಮಯದಲ್ಲಿ ಪಾಕಿಸ್ಥಾನದ ಎಫ್ -16 ಜೆಟ್ ಅನ್ನು ಉರುಳಿಸಿದ್ದಕ್ಕಾಗಿ ಅಭಿನಂದನ್ ಅವರಿಗೆ ಶೌರ್ಯ ಪದಕ ವೀರ ಚಕ್ರವನ್ನು ನೀಡಿ ಪುರಸ್ಕರಿಸಲಾಗಿದೆ.
ಪಾಕಿಸ್ಥಾನದಿಂದ ಹಿಂದಿರುಗಿದ ಕೆಲವು ದಿನಗಳಲ್ಲೇ, ಅಭಿನಂದನ್ ಅವರು ವಾಯುಸೇನೆಯ ಫೈಟರ್ ಕಾಕ್ಪಿಟ್ಗೆ ಮರಳಬೇಕೆಂಬ ಬಯಕೆಯನ್ನು ತೋಡಿಕೊಂಡಿದ್ದರು.
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…
‘ಕರ್ನಾಟಕ ಬಂದ್’ಗೆ ನಮ್ಮ ಬೆಂಬಲವಿಲ್ಲ: ಕರವೇ ಪ್ರವೀಣ್ ಶೆಟ್ಟಿ ಸ್ಪಷ್ಟನೆ ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ…