ನವದೆಹಲಿ: ಫೆಬ್ರವರಿಯಲ್ಲಿ ಭಾರತ ಮತ್ತು ಪಾಕಿಸ್ಥಾನ ನಡುವೆ ಉದ್ಭವಿಸಿದ್ದ ಮಿಲಿಟರಿ ಮುಖಾಮುಖಿಯ ಸಂದರ್ಭ ಖ್ಯಾತಿಗೆ ಬಂದ ವಾಯುಸೇನೆಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಮತ್ತೆ ಮಿಗ್ 21 ಜೆಟ್ನ ಹಾರಾಟವನ್ನು ನಡೆಸಲು ಆರಂಭಿಸಿದ್ದಾರೆ.
ಫೆಬ್ರವರಿ 27 ರಂದು ಭಾರತದ ವಾಯುಪ್ರದೇಶದೊಳಗೆ ನುಗ್ಗಲು ಯತ್ನಿಸಿದ್ದ ಪಾಕಿಸ್ಥಾನದ ಯುದ್ಧ ವಿಮಾನವನ್ನು ತಮ್ಮ ಮಿಗ್ 21 ವಿಮಾನದಲ್ಲಿ ಅಟ್ಟಾಡಿಸಿಕೊಂಡು ಹೋಗಿದ್ದ ಅಭಿನಂದನ್ ಪಾಕಿಸ್ಥಾನ ಪ್ರದೇಶದಲ್ಲಿ ಬಿದ್ದು ಅಲ್ಲಿ ಎರಡು ದಿನಗಳ ಕಾಲ ಯುದ್ಧ ಕೈದಿಯಾಗಿದ್ದರು. ಆ ವೇಳೆ ಅವರ ದೇಹದ ವಿವಿಧ ಭಾಗಗಳಿಗೆ ಗಾಯಗಳೂ ಆಗಿತ್ತು. ಅದಾದ ಆರು ತಿಂಗಳ ನಂತರ ವರ್ತಮಾನ್ ಅವರು ಮತ್ತೆ ಫೈಟರ್ ಕಾಕ್ಪಿಟ್ಗೆ ಮರಳಿದ್ದಾರೆ.
ಜಾಹಿರಾತು
ವೈಮಾನಿಕ ಮುಖಾಮುಖಿಯ ಸಮಯದಲ್ಲಿ ಪಾಕಿಸ್ಥಾನದ ಎಫ್ -16 ಜೆಟ್ ಅನ್ನು ಉರುಳಿಸಿದ್ದಕ್ಕಾಗಿ ಅಭಿನಂದನ್ ಅವರಿಗೆ ಶೌರ್ಯ ಪದಕ ವೀರ ಚಕ್ರವನ್ನು ನೀಡಿ ಪುರಸ್ಕರಿಸಲಾಗಿದೆ.
ಪಾಕಿಸ್ಥಾನದಿಂದ ಹಿಂದಿರುಗಿದ ಕೆಲವು ದಿನಗಳಲ್ಲೇ, ಅಭಿನಂದನ್ ಅವರು ವಾಯುಸೇನೆಯ ಫೈಟರ್ ಕಾಕ್ಪಿಟ್ಗೆ ಮರಳಬೇಕೆಂಬ ಬಯಕೆಯನ್ನು ತೋಡಿಕೊಂಡಿದ್ದರು.
ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…
ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…
ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…
ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್ನ ಅಧ್ಯಕ್ಷ,…
ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ಶವವಾಗಿ ಪತ್ತೆ ಬೆಂಗಳೂರು: ಲಿವ್ ಇನ್ ರಿಲೇಶನ್ಶಿಪ್ನಲ್ಲಿದ್ದ ಯುವಕ ನೇಣುಬಿಗಿದ…
ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…