Featured

ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ :  ರಜನಿಕಾಂತ್ ಸ್ಪಷ್ಟನೆ  – Vishwanews24

ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ :  ರಜನಿಕಾಂತ್ ಸ್ಪಷ್ಟನೆ  – Vishwanews24

ಚೆನ್ನೈ: ರಾಜಕೀಯಕ್ಕೆ ಮತ್ತೆ ಪ್ರವೇಶದ ಬಗ್ಗೆ ದೊಡ್ಡ ನಿರೀಕ್ಷೆ ಹುಟ್ಟಿಸಿದ ಕೇವಲ ಒಂದು ಗಂಟೆಯೊಳಗೆ ಮತ್ತೆ ರಾಜಕೀಯಕ್ಕೆ ಎಂದಿಗೂ ಬರುವುದಿಲ್ಲ ಎಂದು ಪ್ರತಿಪಾದಿಸುವ ಮೂಲಕ ಸೂಪರ್ ಸ್ಟಾರ್ ರಜನಿಕಾಂತ್, ಸಾವಿರಾರು ಅಭಿಮಾನಿಗಳ ನಿರೀಕ್ಷೆಯನ್ನು ಭಗ್ನಗೊಳಿಸಿದ್ದಾರೆ.

ರಜಿನಿ ಮಕ್ಕಳ್ ಮಂದ್ರಾಮ್ ನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಾಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಅವರು ಹೇಳಿದ್ದಾರೆ.

ಆರ್ ಎಂಎಂ ಜಿಲ್ಲಾ ಕಾರ್ಯದರ್ಶಿಗಳೊಂದಿಗೆ ಚರ್ಚೆ ನಡೆಸಿದ ನಂತರ ಹೇಳಿಕೆ ನೀಡಿದ ರಜನಿಕಾಂತ್, ವಿವಿಧ ಸಮಸ್ಯೆಗಳಿಂದಾಗಿ ರಾಜಕೀಯ ಪಕ್ಷವನ್ನು ಸ್ಥಾಪಿಸಲು ಸಾಧ್ಯವಾಗುತ್ತಿಲ್ಲ. ಭವಿಷ್ಯದಲ್ಲೂ ಯಾವುದೇ ಉದ್ದೇಶ ಇಟ್ಟುಕೊಂಡು ರಾಜಕೀಯಕ್ಕೆ ಬರವುದಿಲ್ಲ, ಆರ್ ಎಂಎಂನ್ನು ವಿಸರ್ಜಿಸಲಾಗುವುದು, ಅದು ರಜನಿಕಾಂತ್ ರಾಸಿಗರ್ ನರ್ಪಾಣಿ ಮಂದ್ರಮ್ ಫ್ಯಾನ್ಸ್ ಕ್ಲಬ್ ಆಗಿ ಮುಂದುವರೆಯಲಿದೆ ಎಂದು ಸ್ಪಷ್ಟಪಡಿಸಿದರು.

ಕಳೆದ ವರ್ಷ ಡಿಸೆಂಬರ್ ನಲ್ಲಿ ರಾಜಕೀಯಕ್ಕೆ ಬರುವುದಿಲ್ಲ ಎಂದು ಘೋಷಿಸಿದ ನಂತರ ಮಂದ್ರಮ್ ಸ್ಥಿತಿ ಮತ್ತು ಅದರ ಕರ್ತವ್ಯಗಳ ಬಗ್ಗೆ ಪದಾಧಿಕಾರಿಗಳು ಹಾಗೂ ಅಭಿಮಾನಿಗಳಲ್ಲಿ ಪ್ರಶ್ನೆ ಎದ್ದಿತ್ತು. ಈ ಸಮಸ್ಯೆಯನ್ನು ಬಗೆಹರಿಸುವುದು ನನ್ನ ಕರ್ತವ್ಯ ಎಂದರು.

ಕಳೆದ ವರ್ಷ ಡಿಸೆಂಬರ್ 29 ರಂದು ರಾಜಕೀಯಕ್ಕೆ ಬರುವುದಿಲ್ಲ ಎಂದು ರಜನಿಕಾಂತ್ ಘೋಷಣೆ ಮಾಡಿದ್ದರು. ನಾನು ಹೊಸ ರಾಜಕೀಯ ಪಕ್ಷ ಸ್ಥಾಪಿಸುವುದಾಗಲೀ ಅಥವಾ ರಾಜಕೀಯಕ್ಕೆ ಬರುವುದಿಲ್ಲ ಎಂದು ಹೇಳುವುದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ಅವರು ಹೇಳಿಕೆ ನೀಡಿದ್ದರು.

Vishwa News 24

Recent Posts

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ -vishwanews24

ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…

3 hours ago

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ -vishwanews24

ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…

3 hours ago

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ -vishwanews24

ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ -vishwanews24

ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…

4 hours ago

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ -vishwanews24

ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ  ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…

4 hours ago

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ -vishwanews24

ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…

4 hours ago