ಮುಂಬೈ: ವಾಣಿಜ್ಯ ನಗರಿ ಮುಂಬೈ ಶನಿವಾರ ಮತ್ತೆ ವರುಣನ ಆರ್ಭಟಕ್ಕೆ ತತ್ತರಿಸಿ ಹೋಗಿದ್ದು, ಹಲವಾರು ತಗ್ಗುಪ್ರದೇಶಗಳು ಜಲಾವೃತಗೊಂಡಿದ್ದು, ಮುಂಬೈ-ಕೊಲ್ಲಾಪುರ ಎಕ್ಸ್ ಪ್ರೆಸ್ ಜಲಾವೃತದಿಂದಾಗಿ ಮಾರ್ಗ ಮಧ್ಯೆದಲ್ಲಿ ನಿಂತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ಮುಂಬೈಗೆ ಬರಬೇಕಾಗಿದ್ದ 17 ವಿಮಾನಗಳ ತನ್ನ ದಿಕ್ಕು ಬದಲಿಸಿದೆ.
ಭಾರೀ ಮಳೆಯಿಂದಾಗಿ 11 ವಿಮಾನಗಳ ಹಾರಾಟ ರದ್ದಾಗಿದ್ದು, ಸುಮಾರು 17 ವಿಮಾನಗಳು ಮುಂಬೈ ವಿಮಾನ ನಿಲ್ದಾಣದತ್ತ ಕಳುಹಿಸಲಾಗಿದೆ ಎಂದು ವರದಿ ವಿವರಿಸಿದೆ. ಥಾಣೆ, ಕಲ್ಯಾಣ್ ಸೇರಿದಂತೆ ಹಲವು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿದ್ದು, ರಕ್ಷಣಾ ಕಾರ್ಯಕ್ಕೆ ಎನ್ ಡಿಆರ್ ಎಫ್ ಪಡೆ ಆಗಮಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶುಕ್ರವಾರ ರಾತ್ರಿಯಿಂದಲೇ ಮುಂಬೈಯಲ್ಲಿ ಧಾರಾಕಾರ ಮಳೆ ಸುರಿಯತೊಡಗಿದೆ. ಥಾಣೆ ಮತ್ತು ಪಾಲ್ ಘರ್ ನಲ್ಲಿ ಭಾರೀ ಮಳೆಯಾಗಿರುವುದಾಗಿ ವರದಿ ಹೇಳಿದೆ. ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಎನ್ ಡಿಆರ್ ಎಫ್ ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ.
ಬೈಕಂಪಾಡಿಯಲ್ಲಿ ದರೋಡೆ ಪ್ರಕರಣ: ಮತ್ತೆ ನಾಲ್ವರು ಆರೋಪಿಗಳ ಬಂಧನ ಸುರತ್ಕಲ್: ಬೈಕಂಪಾಡಿಯಲ್ಲಿ ನಡೆದಿದ್ದ ಕೇರಳದ ಜ್ಯುವೆಲ್ಲರಿ ಉದ್ಯಮಿ ವಿಕಾಸ್ ಅವರ…
ಕರ್ನಾಟಕ ಬಂದ್ಗೆ ಉಡುಪಿಯಲ್ಲಿ ನೀರಸ ಪ್ರತಿಕ್ರಿಯೆ ಉಡುಪಿ : ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ…
ವಿಧಾನ ಪರಿಷತ್ ಸಭಾ ನಾಯಕರಾಗಿ ಯತೀಂದ್ರ ಸಿದ್ದರಾಮಯ್ಯ ಬೆಂಗಳೂರು: ವಿಧಾನಮಂಡಲದ ಮುಂಗಾರು ಅಧಿವೇಶನ ಇಂದಿನಿಂದ ಪ್ರಾರಂಭವಾಗಿದ್ದು, ವಿಧಾನ ಪರಿಷತ್ ಕಲಾಪ…
ಬೆಂಗಳೂರು: ಸ್ಕೂಟರ್ ಸ್ಕಿಡ್ ಆಗಿ ಲಾರಿಗೆ ಡಿಕ್ಕಿ; ಮಹಿಳೆ ಸಾವು ಬೆಂಗಳೂರು : ಸಿಲಿಕಾನ್ ಸಿಟಿಯ ಎಲೆಕ್ಟ್ರಾನಿಕ್ ಸಿಟಿಯ ಜನನಿಬಿಡ…
ಹಿಂದೂ ಸಂಘಟನೆಗಳ ಮುಖಂಡರಿಗೆ ಉಡುಪಿ ಜಿಲ್ಲೆಗೆ ಪ್ರವೇಶ ನಿಷೇಧಿಸಿರುವುದು ಸರ್ಕಾರದ ಪ್ರಜಾಪ್ರಭುತ್ವ ವಿರೋಧಿ ನೀತಿ : ದಿನೇಶ್ ಮೆಂಡನ್ ಆರೋಪ…
ಉಡುಪಿ ಜಿಲ್ಲೆಗೆ ಹಿಂದೂ ಸಂಘಟನೆಗಳ ಮುಖಂಡರನ್ನು ನಿರ್ಬಂಧಿಸಿರುವುದು ಖಂಡನೀಯ : ಸುನಿಲ್ ಕೆ.ಆರ್ ಉಡುಪಿ: ಕಾಪು ಪ್ರಖಂಡದ ಬಜರಂಗದಳದ ವತಿಯಿಂದ…