Categories: ಉಡುಪಿ

ಮತ್ತೆ ಸುದ್ದಿಯಾದ ವಿವದಾತ್ಮಕ ನಟ ಶಾರುಕ್ ಖಾನ್. ಮತ್ತೊಂದು ಕೇಸ್ ಫಿಕ್ಸ್ !

ಮತ್ತೆ ಸುದ್ದಿಯಾದ ವಿವದಾತ್ಮಕ ನಟ ಶಾರುಕ್ ಖಾನ್. ಮತ್ತೊಂದು ಕೇಸ್ ಫಿಕ್ಸ್ !

ಮುಂಬೈ: ಬಾಲಿವುಡ್ ಬಾದ್‍ಶಾ ಶಾರೂಕ್ ಖಾನ್ ವಿರುದ್ಧ ಸಿಖ್ ಸಮುದಾಯದವರು ದೂರು ದಾಖಲಿಸಿದ್ದಾರೆ.

‘ಝೀರೋ’ ಚಿತ್ರದ ಟ್ರೇಲರ್ ನಲ್ಲಿ ಶಾರೂಕ್ ‘ಕಿರ್ ಪನ್’ ಧರಿಸಿದ್ದಕ್ಕೆ ದೆಹಲಿಯ ಸಿಖ್ ಗುರುದ್ವಾರ ಮ್ಯಾನೇಜ್‍ಮೆಂಟ್ ಕಮಿಟಿಯ ಜನರಲ್ ಸೆಕ್ರೆಟರಿ ಮಂಜಿದರ್ ಸಿಂಗ್ ಸಿರಸಾ ಶಾರೂಕ್ ಹಾಗೂ ನಿರ್ದೇಶಕ ಆನಂದ್ ಎಲ್ ರೈ ವಿರುದ್ಧ ಕ್ರಿಮಿನಲ್ ದೂರು ದಾಖಲಿಸಿದ್ದಾರೆ.

ಸಿಖ್ ಸಮುದಾಯದವರು ಝೀರೋ ಚಿತ್ರದ ಟ್ರೈಲರ್ ತಮ್ಮ ಭಾವನೆಗೆ ಧಕ್ಕೆ ತಂದಿದ್ದಾರೆ ಎಂದು ದೂರು ನೀಡುತ್ತಿದ್ದರು. ಹಾಗಾಗಿ ದೆಹಲಿಯ ನಾರ್ತ್ ಆವೆನ್ಯೂ ಪೊಲೀಸ್ ಠಾಣೆಯಲ್ಲಿ ಶಾರೂಕ್ ಹಾಗೂ ಆನಂದ್ ವಿರುದ್ಧ ದೂರು ದಾಖಲಾಗಿದೆ.

ಚಿತ್ರದ ಟ್ರೈಲರ್ ನಲ್ಲಿ ಶಾರೂಕ್ ಗತ್ರಾ ಕಿರ್ ಪನ್ ಧರಿಸಿದ್ದಾರೆ. ವಿಶ್ವಾದ್ಯಂತ ಸಿಖ್ ಸಮುದಾಯದವರು ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಖ್ ಸಂಪ್ರದಾಯದ ಪ್ರಕಾರ ಗತ್ರ ಕಿರ್ ಪನ್ ಕೇವಲ ಅಮ್ರಿತ್‍ದರಿ ಸಿಖ್ ಜನರು ಧರಿಸುವುದು. ಹಾಗಾಗಿ ಶಾರೂಕ್ ಹಾಗೂ ಆನಂದ್ ವಿರುದ್ಧ ದೂರು ದಾಖಲಿಸಬೇಕೆಂದು ಪೊಲೀಸರಿಗೆ ಮಂಜಿದರ್ ಒತ್ತಾಯಿಸಿದ್ದಾರೆ.

ಝೀರೋ ಚಿತ್ರದ ಟ್ರೈಲರ್ ನಲ್ಲಿ ಶಾರೂಕ್ ಗತ್ರ ಕಿರ್ ಪನ್ ಧರಿಸಿದ ಕಾರಣ ವಿಳಂಬ ಮಾಡದೇ ಈ ಟ್ರೇಲರ್ ಪ್ರದರ್ಶನ ಮಾಡುವುದನ್ನು ನಿಲ್ಲಿಸಬೇಕೆಂದು ಮಂಜಿದರ್ ಸಿಂಗ್ ಪೊಲೀಸರ ಬಳಿ ಮನವಿ ಮಾಡಿಕೊಂಡಿದ್ದಾರೆ.

ಈ ಚಿತ್ರದಲ್ಲಿ ನಟಿ ಶ್ರೀದೇವಿ, ರಾಣಿ ಮುಖರ್ಜಿ, ಕಾಜೋಲ್, ಅಲಿಯಾ ಭಟ್, ಅಭಯ್ ಡಿಯೋಲ್, ಆರ್. ಮಾಧವನ್ ಹಾಗೂ ದೀಪಿಕಾ ಪಡುಕೋಣೆ ಕಾಣಿಸಿಕೊಂಡಿದ್ದಾರೆ. ಈ ಚಿತ್ರದಲ್ಲಿ ಶಾರೂಕ್‍ಗೆ ನಾಯಕಿಯಾಗಿ ಅನುಷ್ಕಾ ಶರ್ಮಾ ಹಾಗೂ ಕತ್ರಿನಾ ಕೈಫ್ ನಟಿಸಿದ್ದು, ಡಿಸೆಂಬರ್ 21ರಂದು ಚಿತ್ರ ಬಿಡುಗಡೆಯಾಗಲಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

10 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

2 days ago