Featured

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ

ಜ್ಯೂರಿಕ್: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ನೀರಜ್ ಚೋಪ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ.

ಎರಡನೇ ಪ್ರಯತ್ನದಲ್ಲಿ 88.44 ಮೀಟರ್ ಜಾವೆಲಿನ್ ಎಸೆದ ನೀರಜ್ ಚೋಪ್ರಾ ಅವರು ಮೊದಲ ಸ್ಥಾನ ಪಡೆದರು. ಟೋಕಿಯೋ ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಆಟದ ಮುಂದೆ ಉಳಿದವರ ಆಟ ನಡೆಯಲಿಲ್ಲ.

ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 88.44 ಮೀ ಎಸೆದರು. ಮೂರನೇ ಪ್ರಯತ್ನದಲ್ಲಿ 88 ಮೀ ಮತ್ತು ನಾಲ್ಕನೇ ಪ್ರಯತ್ನದಲ್ಲಿ 86.11 ಮೀ ಎಸೆದರು. ನೀರಜ್ ಅವರ ಐದನೇ ಪ್ರಯತ್ನ 87 ಮೀ ದೂರ ಸಾಗಿದರೆ, ಕೊನೆಯ ಪ್ರಯತ್ನ 83.6 ಮೀ. ದೂರ ನೀರಜ್ ಜಾವೆಲಿನ್ ಎಸೆದರು.

ನೀರಜ್ ಚೋಪ್ರಾ ಡೈಮಂಡ್ ಲೀಗ್ ಕೂಟದ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಜುಲೈನಲ್ಲಿ ಯುಎಸ್ ಎ ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಪ್ರದರ್ಶನದ ಸಂದರ್ಭದಲ್ಲಿ ಅವರು ಅನುಭವಿಸಿದ ಸಣ್ಣ ತೊಡೆಸಂದು ಗಾಯದಿಂದಾಗಿ ಅವರು ಬರ್ಮಿಂಗ್‌ ಹ್ಯಾಮ್ ಕಾಮನ್‌ ವೆಲ್ತ್ ಗೇಮ್ಸ್ ನಲ್ಲಿ ಆಡಿರಲಿಲ್ಲ.

ಡೈಮಂಡ್ ಲೀಗ್ ಚಾಂಪಿಯನ್‌ಶಿಪ್-ಶೈಲಿಯ ಮಾದರಿಯನ್ನು ಅನುಸರಿಸಿ 32 ಡೈಮಂಡ್ ವಿಭಾಗಗಳನ್ನು ಒಳಗೊಂಡಿದೆ. ಅಥ್ಲೀಟ್‌ಗಳು ತಮ್ಮ ವಿಭಾಗಗಳ ಫೈನಲ್‌ ಗೆ ಅರ್ಹತೆ ಪಡೆಯಲು 13 ಸರಣಿಗಳ ಕೂಟದಲ್ಲಿ ಅಂಕಗಳನ್ನು ಗಳಿಸುತ್ತಾರೆ. ಫೈನಲ್‌ ನಲ್ಲಿ ಪ್ರತಿ ಡೈಮಂಡ್ ವಿಭಾಗದ ವಿಜೇತರು ‘ಡೈಮಂಡ್ ಲೀಗ್ ಚಾಂಪಿಯನ್’ ಕಿರೀಟವನ್ನು ಅಲಂಕರಿಸುತ್ತಾರೆ.

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ.. ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ – Vishwanews24

Vishwa News 24

Recent Posts

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ -vishwanews24

ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್‌ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…

14 hours ago

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ -vishwanews24

ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…

14 hours ago

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು -vishwanews24

ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…

14 hours ago

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ:ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ ಬಹಿರಂಗ! -vishwanews24

ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ;  ಡೆತ್ ನೋಟ್ ನಲ್ಲಿ…

15 hours ago

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

2 days ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

2 days ago