Featured

ಮತ್ತೊಮ್ಮೆ ಅವಕಾಶ ನೀಡಿ, ಸ್ವರ್ಣ ಕಾರ್ಕಳ ತೋರಿಸುವೆ : ಸುನಿಲ್‌ಕುಮಾರ್‌ – Vishwanews24

ಬಿಜೆಪಿ ಅಭ್ಯರ್ಥಿ ಸುನಿಲ್‌ ಕುಮಾರ್‌ರಿಂದ ಜನತಾ ಪ್ರಣಾಳಿಕೆ ಬಿಡುಗಡೆ

ಕಾರ್ಕಳ: ಕ್ಷೇತ್ರದ ಜನರ ಅಭಿಪ್ರಾಯ, ಸಲಹೆಯಂತೆ ಜನರ ಭಾವನೆಗಳನ್ನು ಆಡಳಿತ ರೂಪದಲ್ಲಿ ಕೊಡಬೇಕೆನ್ನುವ ನಿಟ್ಟಿನಲ್ಲಿ ಒಂದಷ್ಟು ಹೊಸ ಯೋಜನೆಗಳೊಂದಿಗೆ ಜನತಾ ಪ್ರಣಾಳಿಕೆ ಸಿದ್ಧಪಡಿಸಿ ಬಿಡುಗಡೆಗೊಳಿಸಿದ್ದೇವೆ ಎಂದು ಕಾರ್ಕಳ ಬಿಜೆಪಿ ಅಭ್ಯರ್ಥಿ ವಿ.ಸುನಿಲ್‌ಕುಮಾರ್‌ ಹೇಳಿದರು.

ವಿಕಾಸ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು ಕ್ಷೇತ್ರದಲ್ಲಿ ಹಿಂದೆ ಮಾಡಿದ ಸಾಧನಾ ರಿಪೋರ್ಟ್‌ ಕಾರ್ಡ್‌ ಇದೆ. ಅದೇ ಆತ್ಮವಿಶ್ವಾಸದಿಂದ ಹಿಂದಿನದನ್ನು ಮುಂದುವರೆಸುತ್ತ ಮತ್ತಷ್ಟೂ ಕೊಡುಗೆ ನೀಡಿ ಮುಂದುವರೆಯಲು ಬಯಸಿದ್ದೇವೆ. ಜನತಾ ಪ್ರಣಾಳಿಕೆ ಕೇವಲ ಘೋಷಣೆ, ಭರವಸೆ ಅಲ್ಲ ಎಂದರು.

ಗೆಲುವಿನ ಹಾದಿಯ ಸನಿಹದಲ್ಲಿ
ಚುನಾಣೆಯ ಅಂತಿಮ ಹಂತಕ್ಕೆ ಬಂದಿದ್ದೇವೆ. ಬಿಜೆಪಿ ಕಾರ್ಯಕರ್ತರು ಮನೆಮನೆಗೆ ತೆರಳಿ 3 ಬಾರಿ ಮತದಾರರನ್ನು ಯಶಸ್ವಿಯಾಗಿ ಭೇಟಿಯಾಗಿದ್ದಾರೆ. ಬಹಳ ದೊಡ್ಡ ಪ್ರಮಾಣದಲ್ಲಿ ಬಿಜೆಪಿ ಪರ ಒಲವಿದೆ. ಕ್ಷೇತ್ರದ ಮತದಾರರ ಅಭಿವೃದ್ಧಿಯನ್ನು ಅಪ್ಪಿಕೊಂಡಿದ್ದಾರೆ. ಕ್ಷೇತ್ರಕ್ಕೆ ಇನ್ನಷ್ಟು ಅಭಿವೃದ್ಧಿ ಹಂಬಲ ಮತದಾರರಲ್ಲಿದೆ. ಬಿಜೆಪಿಯೇ ಭರವಸೆ ಎನ್ನುವ ವಿಶ್ವಾಸ ಸಾಮಾನ್ಯ ಜನರಿಂದ ವ್ಯಕ್ತವಾಗುತ್ತಿದೆ. ದಾರಿ ಗೆಲುವಿನ ಸನಿಹಕ್ಕೆ ಸಾಗಿದೆ ಎಂದರು.

ಮತ್ತೊಮ್ಮೆ ಅವಕಾಶ ನೀಡಿ, ಸ್ವರ್ಣ ಕಾರ್ಕಳ ತೋರಿಸುವೆ
5 ವರ್ಷಗಳ ಶಾಸಕತ್ವದ ಅವಧಿಯಲ್ಲಿ ಸ್ವರ್ಣ ಕಾರ್ಕಳ ಪರಿಕಲ್ಪನೆಯಲ್ಲಿ ಚುನಾಯಿತ ಪ್ರತಿನಿಧಿಗಳ, ಸಂಘ ಸಂಸ್ಥೆಗಳ ಸಹಕಾರದಲ್ಲಿ ಹೆಜ್ಜೆ ಇಟ್ಟಿದ್ದೇವೆ, ಸ್ವರ್ಣ ಕಾರ್ಕಳ ಮುಂದುವರೆಸುವ ಕಾರ್ಯಕ್ಕೋಸ್ಕರ ಮತದಾರರಿಗೆ ಮತ್ತೂಮ್ಮೆ ವಿನಂತಿ ಮಾಡುತ್ತ ಈ ವರೆಗೆ ಕಾರ್ಕಳದಲ್ಲಿ ಆಗಿರುವಂತಹ ಅಭಿವೃದ್ಧಿಯ ಕಾರ್ಯಕ್ರಮಗಳು ಇನ್ನಷ್ಟೂ ಮುಂದುವರೆಸುತ್ತ ಈಗಿರುವ ಕಾರ್ಯಕ್ರಮಗಳಲ್ಲಿ ವ್ಯತ್ಯಾಸವಾಗದಂತೆ ಮುಂದುವರೆಯಲು ಒಂದಿಷ್ಟು ಹೊಸ ಪ್ರಣಾಳಿಕೆಗಳನ್ನು ಕ್ಷೇತ್ರದ ಜನರ ಮುಂದೆ ವಚನ ರೂಪದಲ್ಲಿ ನೀಡಿದ್ದೇವೆ. ಮತ್ತೆ ನನಗೆ ಅವಕಾಶ ನೀಡಿದರೆ ಸ್ವರ್ಣ ಕಾರ್ಕಳ ಏನೆನ್ನುವುದನ್ನು ತೋರಿಸಿ ಕೊಡುವೆ ಎಂದು ಸುನಿಲ್‌ ಹೇಳಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಪ್ರಚಾರ ಸಮಿತಿ ಅಧ್ಯಕ್ಷ ಮಹೇಶ್‌ ಶೆಟ್ಟಿ ಕುಡುಪುಲಾಜೆ, ಹಿರಿಯ ಬಿಜೆಪಿಗ ಕೆ.ಪಿ ಶೆಣೈ, ಸಾಣೂರು ನರಸಿಂಹ ಕಾಮತ್‌ ಉಪಸ್ಥಿತರಿದ್ದರು.

ಬಿಜೆಪಿಯ ಜನತಾ ಪ್ರಣಾಳಿಕೆಯಲ್ಲೇನಿದೆ?
ಕಾರ್ಕಳ, ಹೆಬ್ರಿ ರಡೂ ಕಡೆ ಪರಿಸರ ಸ್ನೇಹಿ ಕೈಗಾರಿಕಾ ಕಾರಿಡಾರ್‌, ಕ್ಷೇತ್ರದ ಎಲ್ಲ ನಿವೇಶನ ರಹಿತರಿಗೆ ನಿವೇಶನ, ಸೂರಿಲ್ಲದವರಿಗೆ ನೆರವು. ಎಲ್ಲ ಹಳ್ಳಿಗಳಲ್ಲಿ ಹಿಂದೂ ರುದ್ರಭೂಮಿ, ತಾ|ನಾದ್ಯಂತ ಭಜನಾ ಮಂಡಳಿಗಳ ಕಾರ್ಯಚಟುವಟಿಕೆಗೆ ಉತ್ತೇಜನ, ವಾಟರ್‌ ಗೇಮ್ಸ್‌ ಒಳಗೊಂಡಂತೆ ರಾಮಸಮುದ್ರವನ್ನು ಪ್ರವಾಸಿ ತಾಣವಾಗಿ ಅಭಿವೃದ್ಧಿ, ವಾಣಿಜ್ಯೋದಮ್ಯ ವೃದ್ಧಿ, ಕಾರ್ಕಳದ ಪ್ರತಿ ಗ್ರಾಮಗಳಿಗೆ ಸರಕಾರಿ ಸಾರಿಗೆ ಬಸ್‌, ಹೆಬ್ರಿಯಲ್ಲಿ ಐಟಿಐ ಕಾಲೇಜು ಸ್ಥಾಪನೆ, ಕ್ಷೇತ್ರದ ಪ್ರತಿ ಮನೆಗೆ ಕುಡಿಯುವ ನೀರಿನ ಸಂಪರ್ಕ, ಸಂಜೀವಿನಿ- ಸ್ತ್ರೀ ಶಕ್ತಿ ಸಂಘಗಳ ಮಹಿಳೆಯರು ಉತ್ಪಾದಿಸುವ ಉತ್ಪನ್ನಗಳಿಗೆ ಸೂಕ್ತ ಮಾರುಕಟ್ಟೆ ವ್ಯವಸ್ಥೆ, ಧಾರ್ಮಿಕ ಕೇಂದ್ರಗಳ ಜತೆ ಸತ್ಯಸಾರಮಣಿ, ಮುಗೆರ್ಕಳ ದೈವಸ್ಥಾನಗಳ ಅಭಿವೃದ್ಧಿ, ಹೆಬ್ರಿಯಲ್ಲಿ ಸುಸಜ್ಜಿತ ಕ್ರೀಡಾಂಗಣ ನಿರ್ಮಾಣ, ಪ್ರತಿ ಗ್ರಾ.ಪಂ ಮಟ್ಟದಲ್ಲಿ ಕಿರು ಆಟದ ಮೈದಾನ ನಿರ್ಮಾಣ, ರಿಕ್ಷಾ- ಟ್ಯಾಕ್ಸಿ ಚಾಲಕರಿಗೆ ಆರೋಗ್ಯ ಭದ್ರತೆ ಒದಗಿಸಲು ಬದ್ಧನಾಗಿರುವುದಾಗಿ ಹೇಳಿದರು.

ಚುನಾವಣೆಗೋಸ್ಕರ ಬರುವ ಪಕ್ಷ ಕಾಂಗ್ರೆಸ್‌
ಅಪಪ್ರಚಾರ, ಟೀಕೆ ಕಾಂಗ್ರೆಸ್‌ ಸಂಸ್ಕೃತಿ. ಇದು ಒಳಿತಲ್ಲ. ಕಾರ್ಕಳದ ಜನತೆ ಇದನ್ನು ಒಪ್ಪುವವರಲ್ಲ. ಕಾರ್ಕಳದ ಒಳಿತು ಕಾಂಗ್ರೆಸ್ಸಿಗೆ ಬೇಕಿಲ್ಲ. ಕಾಂಗ್ರೆಸ್ಸಿನ ಎ ಮತ್ತು ಬಿ. ಟೀಂ ಕ್ಷೇತ್ರದಲ್ಲಿ ದೌರ್ಜನ್ಯ, ತೇಜೋವಧೆ, ನಿಂದನೆಗಳಲ್ಲಿ ತೊಡಗಿಸಿಕೊಂಡಿದ್ದು, ಬೆಂಬಲಿಸಿದರೆ ಅದನ್ನೆ ಕಾರ್ಕಳದಲ್ಲಿ ಮುಂದುವರೆಸುತ್ತಾರೆ. ಚುನಾವಣೆಗೋಸ್ಕರ ಬಂದಿರುವ ಕಾಂಗ್ರೆಸ್‌ ಅನ್ನು ಈ ಚುನಾವಣೆಯಲ್ಲಿ ಮತದಾರರು ತಿರಸ್ಕರಿಸಬೇಕು ಎಂದರು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

22 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago