Featured

ಮತ್ತೊಮ್ಮೆ ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ – Vishwanews24

ಮತ್ತೊಮ್ಮೆಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ: ‘ಡೈಮಂಡ್ ಲೀಗ್ ಟ್ರೋಫಿ ಗೆದ್ದ ಮೊದಲ ಭಾರತೀಯ

ಜ್ಯೂರಿಕ್: ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರ ಸಾಧನೆಗಳ ಮುಕುಟಕ್ಕೆ ಮತ್ತೊಂದು ಗರಿ ಸೇರ್ಪಡೆಯಾಗಿದೆ. ಸ್ವಿಜರ್ ಲ್ಯಾಂಡ್ ನ ಜ್ಯೂರಿಕ್ ನಲ್ಲಿ ನಡೆದ ಡೈಮಂಡ್ ಲೀಗ್ ಫೈನಲ್ ನಲ್ಲಿ ನೀರಜ್ ಚೋಪ್ರಾ ಪ್ರಥಮ ಸ್ಥಾನ ಪಡೆದಿದ್ದಾರೆ.

ಎರಡನೇ ಪ್ರಯತ್ನದಲ್ಲಿ 88.44 ಮೀಟರ್ ಜಾವೆಲಿನ್ ಎಸೆದ ನೀರಜ್ ಚೋಪ್ರಾ ಅವರು ಮೊದಲ ಸ್ಥಾನ ಪಡೆದರು. ಟೋಕಿಯೋ ಒಲಿಂಪಿಕ್ ಗೋಲ್ಡ್ ಮೆಡಲಿಸ್ಟ್ ಆಟದ ಮುಂದೆ ಉಳಿದವರ ಆಟ ನಡೆಯಲಿಲ್ಲ.

ನೀರಜ್ ತನ್ನ ಎರಡನೇ ಪ್ರಯತ್ನದಲ್ಲಿ 88.44 ಮೀ ಎಸೆದರು. ಮೂರನೇ ಪ್ರಯತ್ನದಲ್ಲಿ 88 ಮೀ ಮತ್ತು ನಾಲ್ಕನೇ ಪ್ರಯತ್ನದಲ್ಲಿ 86.11 ಮೀ ಎಸೆದರು. ನೀರಜ್ ಅವರ ಐದನೇ ಪ್ರಯತ್ನ 87 ಮೀ ದೂರ ಸಾಗಿದರೆ, ಕೊನೆಯ ಪ್ರಯತ್ನ 83.6 ಮೀ. ದೂರ ನೀರಜ್ ಜಾವೆಲಿನ್ ಎಸೆದರು.

ನೀರಜ್ ಚೋಪ್ರಾ ಡೈಮಂಡ್ ಲೀಗ್ ಕೂಟದ ಪ್ರಶಸ್ತಿಯನ್ನು ಗೆದ್ದ ಮೊದಲ ಭಾರತೀಯರಾದರು. ಜುಲೈನಲ್ಲಿ ಯುಎಸ್ ಎ ನಲ್ಲಿ ನಡೆದ ವಿಶ್ವ ಚಾಂಪಿಯನ್‌ ಶಿಪ್‌ ನಲ್ಲಿ ಬೆಳ್ಳಿ ಗೆದ್ದ ಪ್ರದರ್ಶನದ ಸಂದರ್ಭದಲ್ಲಿ ಅವರು ಅನುಭವಿಸಿದ ಸಣ್ಣ ತೊಡೆಸಂದು ಗಾಯದಿಂದಾಗಿ ಅವರು ಬರ್ಮಿಂಗ್‌ ಹ್ಯಾಮ್ ಕಾಮನ್‌ ವೆಲ್ತ್ ಗೇಮ್ಸ್ ನಲ್ಲಿ ಆಡಿರಲಿಲ್ಲ.

ಡೈಮಂಡ್ ಲೀಗ್ ಚಾಂಪಿಯನ್‌ಶಿಪ್-ಶೈಲಿಯ ಮಾದರಿಯನ್ನು ಅನುಸರಿಸಿ 32 ಡೈಮಂಡ್ ವಿಭಾಗಗಳನ್ನು ಒಳಗೊಂಡಿದೆ. ಅಥ್ಲೀಟ್‌ಗಳು ತಮ್ಮ ವಿಭಾಗಗಳ ಫೈನಲ್‌ ಗೆ ಅರ್ಹತೆ ಪಡೆಯಲು 13 ಸರಣಿಗಳ ಕೂಟದಲ್ಲಿ ಅಂಕಗಳನ್ನು ಗಳಿಸುತ್ತಾರೆ. ಫೈನಲ್‌ ನಲ್ಲಿ ಪ್ರತಿ ಡೈಮಂಡ್ ವಿಭಾಗದ ವಿಜೇತರು ‘ಡೈಮಂಡ್ ಲೀಗ್ ಚಾಂಪಿಯನ್’ ಕಿರೀಟವನ್ನು ಅಲಂಕರಿಸುತ್ತಾರೆ.

ಕುಂದಾಪುರ : ನೀಟ್ ಪರೀಕ್ಷೆಯಲ್ಲಿ ಕಡಿಮೆ‌ ಅಂಕ.. ಮನನೊಂದು ಸೇತುವೆಯಿಂದ‌ ನದಿಗೆ ಜಿಗಿದ ವಿದ್ಯಾರ್ಥಿಯ ಮೃತದೇಹ ನಾವುಂದ ಸಮುದ್ರ ತೀರದಲ್ಲಿ ಪತ್ತೆ – Vishwanews24

Vishwa News 24

Recent Posts

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು -vishwanews24

ಉಡುಪಿ : ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ ; ರಾಸಾಯನಿಕಯುಕ್ತ ಬಾಳೆಹಣ್ಣುಗಳ ನಾಶ ಪಡಿಸಿದ ಅಧಿಕಾರಿಗಳು ಉಡುಪಿ :…

10 minutes ago

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ -vishwanews24

ತುಳುಕೂಟ ಉಡುಪಿ: 2026–27ನೇ ಸಾಲಿನ ಕಾರ್ಯಕಾರಿ ಸಮಿತಿ ಪ್ರಕಟ- ಅಧ್ಯಕ್ಷರಾಗಿ ಬಿ. ಜಯಕರ ಶೆಟ್ಟಿ ಇಂದ್ರಾಳಿ ತುಳು ಭಾಷೆ, ಸಾಹಿತ್ಯ,…

30 minutes ago

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ -vishwanews24

ಎಲ್‌ಪಿಜಿ: ಇ-ಕೆವೈಸಿ ದಿನಾಂಕ ಆ. 23ರ ವರೆಗೆ ವಿಸ್ತರಣೆ ಉಡುಪಿ: ಎಲ್‌ಪಿಜಿ ಗ್ರಾಹಕರಿಗೆ ಇ-ಕೆವೈಸಿ ಪೂರ್ಣ ಗೊಳಿಸಲು ನೀಡಲಾಗಿದ್ದ ಗಡುವನ್ನು ಆ.…

47 minutes ago

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ -vishwanews24

ಚಿತ್ರದುರ್ಗ: ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿ ಬಿದ್ದ ಖಾಸಗಿ ಬಸ್ ; ಮೂವರು ದುರ್ಮರಣ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ…

55 minutes ago

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ -vishwanews24

ಕಡಬ: ದ್ವಿಚಕ್ರ ವಾಹನದ ಮೇಲೆ ಬಿದ್ದ ಮರ ;  ಹಿಂಬದಿ ಸವಾರನಿಗೆ ಗಂಭೀರ ಗಾಯ ಕಡಬ : ಗುಂಡ್ಯ-ಸುಳ್ಯ ರಾಜ್ಯ…

1 hour ago

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಮತ್ತೊಬ್ಬ ಆರೋಪಿ ಬಂಧನ -vishwanews24

ಉಡುಪಿ: ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಉತ್ತರಾಖಂಡದಲ್ಲಿ ಮತ್ತೊಬ್ಬ ಆರೋಪಿ ಬಂಧನ ಉಡುಪಿ : ಕಾಪು ಜಿಲ್ಲೆಯ ಮುದರಂಗಡಿಯ ಸೇಂಟ್…

15 hours ago