ರಾಜ್ಯ ನ್ಯೂಸ್

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಪ್ರಸ್ತುತ ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಪ್ರವಾಸದಲ್ಲಿದ್ದಾರೆ‌. ಕರ್ನಾಟಕದಲ್ಲಿ ಶತಾಯಗತಾಯ ಮತ್ತೊಮ್ಮೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಸಾಲು ಸಾಲು ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಜನಾಶೀರ್ವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಪಾಲ್ಗೊಂಡರು. ವಿದ್ಯಾರ್ಥಿನಿಯರ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದರು‌.

 

ಆದರೆ ಓರ್ವ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾದರು. ಆ ವಿದ್ಯಾರ್ಥಿನಿ ಕೇಳಿದ ಪ್ರಶ್ನೆ ಹೀಗಿತ್ತು. ಸರ್ ನೀವು, ಮತ್ತೆ ಮುಖ್ಯಮಂತ್ರಿಗಳು ಇಲ್ಲೇ ಇರುವುದರಿಂದ ಈ ಪ್ರಶ್ನೆ ಕೇಳುತ್ತಿದ್ದೇನೆ. ಸರ್ ನಿಮ್ಮ ಸರ್ಕಾರದಿಂದ ಏನೇ ಯೋಜನೆಗಳನ್ನು ನಮಗೆ ಕೊಡಬೇಕಾದರು ಯಾಕೆ ತಾರತಮ್ಯ ಮಾಡುತ್ತೀರಾ? ಕಮ್ಯುನಿಟಿ ಆಧಾರದ ಮೇಲೆ ತಾರತಮ್ಯ ಮಾಡೋದು ಸರಿಯಾ ಎಂದು ಆ ವಿದ್ಯಾರ್ಥಿನಿ ಕೇಳಿದಳು..

ಈ ಪ್ರಶ್ನೆ ಪರಮೇಶ್ವರ್ ಇಂಗ್ಲಿಷ್ ಅಲ್ಲಿ ಅನುವಾದ ಮಾಡಿ ಹೇಳಿದ ಕೂಡಲೇ ಒಂದು ಸೆಕೆಂಡ್ ಏನು ಉತ್ತರಿಸಬೇಕು ಎಂದು ಗೊತ್ತಾಗದೆ ರಾಹುಲ್ ಗಾಂಧಿ ತಡಬಡಾಯಿಸಿದರು. ಆನಂತರ ಈ ಪ್ರಶ್ನೆಯಿಂದ ಜಾರಿಕೊಳ್ಳೊಕ್ಕೆ ಈ ಪ್ರಶ್ನೆ ಭಾರತಕ್ಕೊ ಅಥವಾ ಕರ್ನಾಟಕಕ್ಕೋ ಎಂದು ರಾಹುಲ್ ಗಾಂಧಿ ಕೇಳಿದರು. ಆಗ ವಿದ್ಯಾರ್ಥಿನಿ ಗಟ್ಟಿಧ್ವನಿಯಿಂದ ನಾನು ಕರ್ನಾಟಕ ಸರ್ಕಾರಕ್ಕೆ ಕೇಳುತ್ತಿದ್ದೇನೆ ಎಂದಳು. ಹಾಗಾದರೆ ಈ ಪ್ರಶ್ನೆ ಸಿದ್ಧರಾಮಯ್ಯನವರಿಗೆ ಕೇಳಿ ಎಂದು ರಾಹುಲ್ ಗಾಂಧಿ ಜಾರಿಕೊಂಡರು.

 

ಆ ನಂತರ ಉತ್ತರಿಸಲು ಸಿದ್ಧರಾಮಯ್ಯನವರು ಬಂದರು. ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಇದು ಅನಿವಾರ್ಯ. ದುರ್ಬಲರಿಗೆ ಶಕ್ತಿ ತುಂಬಲು ಆ ತರಹ ಯೋಜನೆಗಳನ್ನು ಘೋಷಿಸಲೇಬೇಕು ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ವಿದ್ಯಾರ್ಥಿನಿ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣದಲ್ಲಿ ಕರತಾಡನ ಮುಗಿಲು ಮುಟ್ಟಿತ್ತು. ಅಂಗನವಾಡಿ ಮಕ್ಕಳಿಂದ ಉನ್ನತ ವ್ಯಾಸಾಂಗದ ವಿದ್ಯಾರ್ಥಿಗಳವರೆಗೆ ಪ್ರತಿಯೊಂದು ವಿಷಯದಲ್ಲಿಯೂ ಜಾತಿ ಹುಡುಕುವ ಸಿದ್ಧರಾಮಯ್ಯನವರ ಸರ್ಕಾರಕ್ಕೆ ವಿದ್ಯಾರ್ಥಿನಿಯ ಪ್ರಶ್ನೆ ಕಪಾಳಮೋಕ್ಷ ಮಾಡಿದ ಹಾಗಿತ್ತು.

Vishwa News 24

Recent Posts

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

38 minutes ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

46 minutes ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

53 minutes ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

1 hour ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 hours ago

ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ – vishwanews24

ಕರಾವಳಿ ಮತ್ತು ಮಲೆನಾಡು ಪ್ರದೇಶಗಳ ಪ್ರವಾಸೋದ್ಯಮಕ್ಕೆ ಹೊಸ ಚೈತನ್ಯ .. ಕರಾವಳಿ–ಮಲೆನಾಡು ಕರ್ನಾಟಕ ಪ್ರವಾಸೋದ್ಯಮ ನೀತಿ–2026 ರೂಪಿಸುವ ಕುರಿತು ಸಭೆ…

3 hours ago