ರಾಜ್ಯ ನ್ಯೂಸ್

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಪ್ರಸ್ತುತ ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಪ್ರವಾಸದಲ್ಲಿದ್ದಾರೆ‌. ಕರ್ನಾಟಕದಲ್ಲಿ ಶತಾಯಗತಾಯ ಮತ್ತೊಮ್ಮೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಸಾಲು ಸಾಲು ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಜನಾಶೀರ್ವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಪಾಲ್ಗೊಂಡರು. ವಿದ್ಯಾರ್ಥಿನಿಯರ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದರು‌.

 

ಆದರೆ ಓರ್ವ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾದರು. ಆ ವಿದ್ಯಾರ್ಥಿನಿ ಕೇಳಿದ ಪ್ರಶ್ನೆ ಹೀಗಿತ್ತು. ಸರ್ ನೀವು, ಮತ್ತೆ ಮುಖ್ಯಮಂತ್ರಿಗಳು ಇಲ್ಲೇ ಇರುವುದರಿಂದ ಈ ಪ್ರಶ್ನೆ ಕೇಳುತ್ತಿದ್ದೇನೆ. ಸರ್ ನಿಮ್ಮ ಸರ್ಕಾರದಿಂದ ಏನೇ ಯೋಜನೆಗಳನ್ನು ನಮಗೆ ಕೊಡಬೇಕಾದರು ಯಾಕೆ ತಾರತಮ್ಯ ಮಾಡುತ್ತೀರಾ? ಕಮ್ಯುನಿಟಿ ಆಧಾರದ ಮೇಲೆ ತಾರತಮ್ಯ ಮಾಡೋದು ಸರಿಯಾ ಎಂದು ಆ ವಿದ್ಯಾರ್ಥಿನಿ ಕೇಳಿದಳು..

ಈ ಪ್ರಶ್ನೆ ಪರಮೇಶ್ವರ್ ಇಂಗ್ಲಿಷ್ ಅಲ್ಲಿ ಅನುವಾದ ಮಾಡಿ ಹೇಳಿದ ಕೂಡಲೇ ಒಂದು ಸೆಕೆಂಡ್ ಏನು ಉತ್ತರಿಸಬೇಕು ಎಂದು ಗೊತ್ತಾಗದೆ ರಾಹುಲ್ ಗಾಂಧಿ ತಡಬಡಾಯಿಸಿದರು. ಆನಂತರ ಈ ಪ್ರಶ್ನೆಯಿಂದ ಜಾರಿಕೊಳ್ಳೊಕ್ಕೆ ಈ ಪ್ರಶ್ನೆ ಭಾರತಕ್ಕೊ ಅಥವಾ ಕರ್ನಾಟಕಕ್ಕೋ ಎಂದು ರಾಹುಲ್ ಗಾಂಧಿ ಕೇಳಿದರು. ಆಗ ವಿದ್ಯಾರ್ಥಿನಿ ಗಟ್ಟಿಧ್ವನಿಯಿಂದ ನಾನು ಕರ್ನಾಟಕ ಸರ್ಕಾರಕ್ಕೆ ಕೇಳುತ್ತಿದ್ದೇನೆ ಎಂದಳು. ಹಾಗಾದರೆ ಈ ಪ್ರಶ್ನೆ ಸಿದ್ಧರಾಮಯ್ಯನವರಿಗೆ ಕೇಳಿ ಎಂದು ರಾಹುಲ್ ಗಾಂಧಿ ಜಾರಿಕೊಂಡರು.

 

ಆ ನಂತರ ಉತ್ತರಿಸಲು ಸಿದ್ಧರಾಮಯ್ಯನವರು ಬಂದರು. ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಇದು ಅನಿವಾರ್ಯ. ದುರ್ಬಲರಿಗೆ ಶಕ್ತಿ ತುಂಬಲು ಆ ತರಹ ಯೋಜನೆಗಳನ್ನು ಘೋಷಿಸಲೇಬೇಕು ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ವಿದ್ಯಾರ್ಥಿನಿ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣದಲ್ಲಿ ಕರತಾಡನ ಮುಗಿಲು ಮುಟ್ಟಿತ್ತು. ಅಂಗನವಾಡಿ ಮಕ್ಕಳಿಂದ ಉನ್ನತ ವ್ಯಾಸಾಂಗದ ವಿದ್ಯಾರ್ಥಿಗಳವರೆಗೆ ಪ್ರತಿಯೊಂದು ವಿಷಯದಲ್ಲಿಯೂ ಜಾತಿ ಹುಡುಕುವ ಸಿದ್ಧರಾಮಯ್ಯನವರ ಸರ್ಕಾರಕ್ಕೆ ವಿದ್ಯಾರ್ಥಿನಿಯ ಪ್ರಶ್ನೆ ಕಪಾಳಮೋಕ್ಷ ಮಾಡಿದ ಹಾಗಿತ್ತು.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

9 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

9 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago