ರಾಜ್ಯ ನ್ಯೂಸ್

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಪ್ರಸ್ತುತ ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಪ್ರವಾಸದಲ್ಲಿದ್ದಾರೆ‌. ಕರ್ನಾಟಕದಲ್ಲಿ ಶತಾಯಗತಾಯ ಮತ್ತೊಮ್ಮೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಸಾಲು ಸಾಲು ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಜನಾಶೀರ್ವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಪಾಲ್ಗೊಂಡರು. ವಿದ್ಯಾರ್ಥಿನಿಯರ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದರು‌.

 

ಆದರೆ ಓರ್ವ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾದರು. ಆ ವಿದ್ಯಾರ್ಥಿನಿ ಕೇಳಿದ ಪ್ರಶ್ನೆ ಹೀಗಿತ್ತು. ಸರ್ ನೀವು, ಮತ್ತೆ ಮುಖ್ಯಮಂತ್ರಿಗಳು ಇಲ್ಲೇ ಇರುವುದರಿಂದ ಈ ಪ್ರಶ್ನೆ ಕೇಳುತ್ತಿದ್ದೇನೆ. ಸರ್ ನಿಮ್ಮ ಸರ್ಕಾರದಿಂದ ಏನೇ ಯೋಜನೆಗಳನ್ನು ನಮಗೆ ಕೊಡಬೇಕಾದರು ಯಾಕೆ ತಾರತಮ್ಯ ಮಾಡುತ್ತೀರಾ? ಕಮ್ಯುನಿಟಿ ಆಧಾರದ ಮೇಲೆ ತಾರತಮ್ಯ ಮಾಡೋದು ಸರಿಯಾ ಎಂದು ಆ ವಿದ್ಯಾರ್ಥಿನಿ ಕೇಳಿದಳು..

ಈ ಪ್ರಶ್ನೆ ಪರಮೇಶ್ವರ್ ಇಂಗ್ಲಿಷ್ ಅಲ್ಲಿ ಅನುವಾದ ಮಾಡಿ ಹೇಳಿದ ಕೂಡಲೇ ಒಂದು ಸೆಕೆಂಡ್ ಏನು ಉತ್ತರಿಸಬೇಕು ಎಂದು ಗೊತ್ತಾಗದೆ ರಾಹುಲ್ ಗಾಂಧಿ ತಡಬಡಾಯಿಸಿದರು. ಆನಂತರ ಈ ಪ್ರಶ್ನೆಯಿಂದ ಜಾರಿಕೊಳ್ಳೊಕ್ಕೆ ಈ ಪ್ರಶ್ನೆ ಭಾರತಕ್ಕೊ ಅಥವಾ ಕರ್ನಾಟಕಕ್ಕೋ ಎಂದು ರಾಹುಲ್ ಗಾಂಧಿ ಕೇಳಿದರು. ಆಗ ವಿದ್ಯಾರ್ಥಿನಿ ಗಟ್ಟಿಧ್ವನಿಯಿಂದ ನಾನು ಕರ್ನಾಟಕ ಸರ್ಕಾರಕ್ಕೆ ಕೇಳುತ್ತಿದ್ದೇನೆ ಎಂದಳು. ಹಾಗಾದರೆ ಈ ಪ್ರಶ್ನೆ ಸಿದ್ಧರಾಮಯ್ಯನವರಿಗೆ ಕೇಳಿ ಎಂದು ರಾಹುಲ್ ಗಾಂಧಿ ಜಾರಿಕೊಂಡರು.

 

ಆ ನಂತರ ಉತ್ತರಿಸಲು ಸಿದ್ಧರಾಮಯ್ಯನವರು ಬಂದರು. ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಇದು ಅನಿವಾರ್ಯ. ದುರ್ಬಲರಿಗೆ ಶಕ್ತಿ ತುಂಬಲು ಆ ತರಹ ಯೋಜನೆಗಳನ್ನು ಘೋಷಿಸಲೇಬೇಕು ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ವಿದ್ಯಾರ್ಥಿನಿ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣದಲ್ಲಿ ಕರತಾಡನ ಮುಗಿಲು ಮುಟ್ಟಿತ್ತು. ಅಂಗನವಾಡಿ ಮಕ್ಕಳಿಂದ ಉನ್ನತ ವ್ಯಾಸಾಂಗದ ವಿದ್ಯಾರ್ಥಿಗಳವರೆಗೆ ಪ್ರತಿಯೊಂದು ವಿಷಯದಲ್ಲಿಯೂ ಜಾತಿ ಹುಡುಕುವ ಸಿದ್ಧರಾಮಯ್ಯನವರ ಸರ್ಕಾರಕ್ಕೆ ವಿದ್ಯಾರ್ಥಿನಿಯ ಪ್ರಶ್ನೆ ಕಪಾಳಮೋಕ್ಷ ಮಾಡಿದ ಹಾಗಿತ್ತು.

Vishwa News 24

Recent Posts

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ – vishwanews24

ಉಡುಪಿ: ಬಿಜೆಪಿ ಯುವ ಮೋರ್ಚಾದಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಗೋಬ್ಯಾಕ್ ಪ್ರತಿಭಟನೆ ಉಡುಪಿ: ಉಡುಪಿ ಜಿಲ್ಲೆಯನ್ನು ರಾಜ್ಯ ಕಾಂಗ್ರೆಸ್…

14 hours ago

ಮಂಗಳೂರು : ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್ – vishwanews24

ಹಿಜಾಬ್ ನಿಷೇಧ ಹಿಂಪಡೆಯುವ ನಿರ್ಧಾರವನ್ನು ಸ್ವಾಗತಿಸಿದ ವಿಮೆನ್ ಇಂಡಿಯಾ ಮೂವ್ಮೆಂಟ್.. ಸುಪ್ರೀಂ ಕೋರ್ಟ್‌ನಲ್ಲಿ ಅಧಿಕೃತ ಕ್ರಮಗಳನ್ನು ಪೂರ್ಣಗೊಳಿಸಲು ಸರ್ಕಾರಕ್ಕೆ ಮನವಿ…

14 hours ago

ಟ್ರ್ಯಾಕ್ಟರ್ – ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ ಸಿಎಂ – vishwanews24

ಟ್ರ‍್ಯಾಕ್ಟರ್ - ಲಾರಿ ಅಪಘಾತದಲ್ಲಿ ಏಳು ಮಂದಿ ದುರ್ಮರಣ : ಮೃತರ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಿಸಿದ…

14 hours ago

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಕಾರ್ಯಕರ್ತರ ಅಭಿಮಾನ ತಡಯೋಕೆ ಸಾಧ್ಯವಿಲ್ಲ :ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ – vishwanews24

ಡಿಕೆಶಿ ಮುಂದಿನ ಸಿಎಂ ಬ್ಯಾನರ್ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪ್ರತಿಕ್ರಿಯೆ ಉಡುಪಿ: ಮುಖ್ಯಮಂತ್ರಿ ಬದಲಾವಣೆ ಹೈಕಮಾಂಡ್‍ಗೆ ಬಿಟ್ಟ ವಿಚಾರ.…

15 hours ago

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ – vishwanews24

ನಾನು ಮತ್ತೆ ಹೊಸದಾಗಿ ಪಕ್ಷ ಕಟ್ಟುತ್ತೇನೆ ; ಪಕ್ಷ ಬಿಟ್ಟು ಹೋಗುವವರು ಹೋಗಲಿ : ಮಮತಾ ಬ್ಯಾನರ್ಜಿ ಕೋಲ್ಕತ್ತಾ: ಇತರ…

16 hours ago

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ – vishwanews24

ಉಡುಪಿ : ಮಲಬಾರ್ ಗೋಲ್ದ್ ನಲ್ಲಿ ಬ್ರಾಂಡ್ ವಾಚ್‌ಗಳ ವಿಶೇಷ ಪ್ರದರ್ಶನ-ಮಾರಾಟ ಮೇಳಕ್ಕೆ ಚಾಲನೆ ಉಡುಪಿ: ಮಲಬಾರ್ ಗೋಲ್ಡ್ ಅಂಡ್…

16 hours ago