ರಾಜ್ಯ ನ್ಯೂಸ್

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಮತ್ತೋಮ್ಮೆ ಯಡಾವಟ್ಟು ಮಾಡಿಕೊಂಡ ರಾಹುಲ್, ಮೈಸೂರು ವಿದ್ಯಾರ್ಥೀನಿಯರ ಪ್ರಶ್ನೆಗೆ ಕಕ್ಕಾಬಿಕ್ಕಿ..!!

ಪ್ರಸ್ತುತ ಕಾಂಗ್ರೆಸ್ ನ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕದ ಪ್ರವಾಸದಲ್ಲಿದ್ದಾರೆ‌. ಕರ್ನಾಟಕದಲ್ಲಿ ಶತಾಯಗತಾಯ ಮತ್ತೊಮ್ಮೆ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರಲು ಸಾಲು ಸಾಲು ಸಭೆಗಳಲ್ಲಿ ಭಾಗವಹಿಸುತ್ತಿದ್ದಾರೆ. ಇಂದು ಮೈಸೂರಿನಲ್ಲಿ ಜನಾಶೀರ್ವಾದ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಪಾಲ್ಗೊಳ್ಳುತ್ತಿದ್ದಾರೆ. ಆದರೆ ಅದಕ್ಕೂ ಮುನ್ನ ಮೈಸೂರಿನ ಮಹಾರಾಣಿ ಕಾಲೇಜಿನಲ್ಲಿ ನಡೆದ ಸಂವಾದದಲ್ಲಿ ರಾಹುಲ್ ಪಾಲ್ಗೊಂಡರು. ವಿದ್ಯಾರ್ಥಿನಿಯರ ಪ್ರಶ್ನೆಗೆ ನಗುನಗುತ್ತಲೇ ಉತ್ತರಿಸಿದರು‌.

 

ಆದರೆ ಓರ್ವ ವಿದ್ಯಾರ್ಥಿನಿ ಕೇಳಿದ ಪ್ರಶ್ನೆಗೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಬಹುತೇಕ ಕಾಂಗ್ರೆಸ್ ನಾಯಕರು ಕಕ್ಕಾಬಿಕ್ಕಿಯಾದರು. ಆ ವಿದ್ಯಾರ್ಥಿನಿ ಕೇಳಿದ ಪ್ರಶ್ನೆ ಹೀಗಿತ್ತು. ಸರ್ ನೀವು, ಮತ್ತೆ ಮುಖ್ಯಮಂತ್ರಿಗಳು ಇಲ್ಲೇ ಇರುವುದರಿಂದ ಈ ಪ್ರಶ್ನೆ ಕೇಳುತ್ತಿದ್ದೇನೆ. ಸರ್ ನಿಮ್ಮ ಸರ್ಕಾರದಿಂದ ಏನೇ ಯೋಜನೆಗಳನ್ನು ನಮಗೆ ಕೊಡಬೇಕಾದರು ಯಾಕೆ ತಾರತಮ್ಯ ಮಾಡುತ್ತೀರಾ? ಕಮ್ಯುನಿಟಿ ಆಧಾರದ ಮೇಲೆ ತಾರತಮ್ಯ ಮಾಡೋದು ಸರಿಯಾ ಎಂದು ಆ ವಿದ್ಯಾರ್ಥಿನಿ ಕೇಳಿದಳು..

ಈ ಪ್ರಶ್ನೆ ಪರಮೇಶ್ವರ್ ಇಂಗ್ಲಿಷ್ ಅಲ್ಲಿ ಅನುವಾದ ಮಾಡಿ ಹೇಳಿದ ಕೂಡಲೇ ಒಂದು ಸೆಕೆಂಡ್ ಏನು ಉತ್ತರಿಸಬೇಕು ಎಂದು ಗೊತ್ತಾಗದೆ ರಾಹುಲ್ ಗಾಂಧಿ ತಡಬಡಾಯಿಸಿದರು. ಆನಂತರ ಈ ಪ್ರಶ್ನೆಯಿಂದ ಜಾರಿಕೊಳ್ಳೊಕ್ಕೆ ಈ ಪ್ರಶ್ನೆ ಭಾರತಕ್ಕೊ ಅಥವಾ ಕರ್ನಾಟಕಕ್ಕೋ ಎಂದು ರಾಹುಲ್ ಗಾಂಧಿ ಕೇಳಿದರು. ಆಗ ವಿದ್ಯಾರ್ಥಿನಿ ಗಟ್ಟಿಧ್ವನಿಯಿಂದ ನಾನು ಕರ್ನಾಟಕ ಸರ್ಕಾರಕ್ಕೆ ಕೇಳುತ್ತಿದ್ದೇನೆ ಎಂದಳು. ಹಾಗಾದರೆ ಈ ಪ್ರಶ್ನೆ ಸಿದ್ಧರಾಮಯ್ಯನವರಿಗೆ ಕೇಳಿ ಎಂದು ರಾಹುಲ್ ಗಾಂಧಿ ಜಾರಿಕೊಂಡರು.

 

ಆ ನಂತರ ಉತ್ತರಿಸಲು ಸಿದ್ಧರಾಮಯ್ಯನವರು ಬಂದರು. ಸಮಾಜದಲ್ಲಿ ತಾರತಮ್ಯ ಹೋಗಲಾಡಿಸಲು ಇದು ಅನಿವಾರ್ಯ. ದುರ್ಬಲರಿಗೆ ಶಕ್ತಿ ತುಂಬಲು ಆ ತರಹ ಯೋಜನೆಗಳನ್ನು ಘೋಷಿಸಲೇಬೇಕು ಎಂದು ತೇಪೆ ಹಚ್ಚುವ ಕೆಲಸ ಮಾಡಿದರು. ವಿದ್ಯಾರ್ಥಿನಿ ಪ್ರಶ್ನೆ ಕೇಳಿದಾಗ ಇಡೀ ಸಭಾಂಗಣದಲ್ಲಿ ಕರತಾಡನ ಮುಗಿಲು ಮುಟ್ಟಿತ್ತು. ಅಂಗನವಾಡಿ ಮಕ್ಕಳಿಂದ ಉನ್ನತ ವ್ಯಾಸಾಂಗದ ವಿದ್ಯಾರ್ಥಿಗಳವರೆಗೆ ಪ್ರತಿಯೊಂದು ವಿಷಯದಲ್ಲಿಯೂ ಜಾತಿ ಹುಡುಕುವ ಸಿದ್ಧರಾಮಯ್ಯನವರ ಸರ್ಕಾರಕ್ಕೆ ವಿದ್ಯಾರ್ಥಿನಿಯ ಪ್ರಶ್ನೆ ಕಪಾಳಮೋಕ್ಷ ಮಾಡಿದ ಹಾಗಿತ್ತು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago